Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...