Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...