Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...