Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...