Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...