Homeಮುಖಪುಟವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

- Advertisement -
- Advertisement -

ವಾಷಿಂಗ್ಟನ್ ಡಿಸಿ ಬಳಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ಬುಧವಾರ ರಾತ್ರಿ (ಸ್ಥಳೀಯ ಕಾಲಮಾನ) ಸಂಭವಿಸಿದ ಪ್ರಯಾಣಿಕ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್‌ ನಡುವಿನ ಅಪಘಾತದಲ್ಲಿ 67 ಜನರು ಸಾವನ್ನಪ್ಪಿದ್ದಾರೆ.

ಪ್ರಯಾಣಿಕ ವಿಮಾನ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ವಿಮಾನ ಮತ್ತು ಹೆಲಿಕಾಪ್ಟರ್ ಎರಡೂ ಪೊಟೊಮ್ಯಾಕ್ ನದಿಗೆ ಬಿದ್ದಿವೆ.

ಅಪಘಾತದಲ್ಲಿ ವಿಮಾನದಲ್ಲಿದ್ದ 64 ಪ್ರಯಾಣಿಕರು ಮತ್ತು ಸೇನಾ ಹೆಲಿಕಾಪ್ಟರ್‌ನಲ್ಲಿದ್ದ 4 ಸಿಬ್ಬಂದಿ ಸೇರಿ ಎಲ್ಲಾ 67 ಜನರು ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಿಂದ 28 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಘಟನೆ 2009ರ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ (ಯುಎಸ್‌) ನಡೆದ ಮೊದಲ ಪ್ರಮುಖ ವಿಮಾನ ಅಪಘಾತವಾಗಿದೆ.

“ಅತ್ಯಂತ ಸಂಕೀರ್ಣ ಪರಿಸ್ಥಿತಿ ಇದ್ದರೂ ಅಪಘಾತ ನಡೆದ ತಕ್ಷಣವೇ ನಾವು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆವು. ಇದುವರೆಗೆ 28 ಶವಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ. ದೋಣಿಗಳು ಇನ್ನೂ ನೀರಿನ ಮೇಲೆಯೇ ಇದ್ದು, ಶವಗಳು ಮತ್ತು ವಿಮಾನದ ಅವಶೇಷಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ” ಎಂದು ವಾಷಿಂಗ್ಟನ್ ಅಗ್ನಿಶಾಮಕ ದಳದ ಮುಖ್ಯಸ್ಥ ಜಾನ್ ಡೊನ್ನೆಲ್ಲಿ ತಿಳಿಸಿದ್ದಾರೆ.

ಬ್ಲ್ಯಾಕ್‌ ಬಾಕ್ಸ್ ಪತ್ತೆ

ಅಧಿಕಾರಿಗಳು ವಿಮಾನ ಮತ್ತು ಹೆಲಿಕಾಪ್ಟರ್‌ ಪತನಗೊಂಡ ಪೊಟೊಮ್ಯಾಕ್ ನದಿಯಿಂದ AA5342 ವಿಮಾನದ ‘ಬ್ಲ್ಯಾಕ್‌ ಬಾಕ್ಸ್‌’ ರೆಕಾರ್ಡರ್‌ಗಳಲ್ಲಿ ಒಂದನ್ನು ವಶಪಡಿಸಿಕೊಂಡಿದ್ದಾರೆ. ವಿಮಾನದ ಡೇಟಾ ಮತ್ತು ಕಾಕ್‌ಪಿಟ್ ಧ್ವನಿ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಈ ಸಾಧನವು ಅಪಘಾತಕ್ಕೂ ಮುನ್ನ ವಿಮಾನದಲ್ಲಿ ಏನಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಮುಖ ಸಾಕ್ಷಿಯಾಗಲಿದೆ.

ಅಸೋಸಿಯೇಟೆಡ್ ಪ್ರೆಸ್ ಪಡೆದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ವರದಿಯ ಪ್ರಕಾರ, ಡಿಕ್ಕಿ ಸಂಭವಿಸಿದಾಗ ಹೆಲಿಕಾಪ್ಟರ್ ಸಂಚಾರ, ವಿಮಾನಗಳ ಆಗಮನ ಮತ್ತು ನಿರ್ಗಮನವನ್ನು ಸಂಘಟಿಸುವ ಜವಾಬ್ದಾರಿಯನ್ನು ಒಬ್ಬರೇ ವಾಯು ಸಂಚಾರ ನಿಯಂತ್ರಕ (ಏರ್‌ ಟ್ರಾಫಿಕ್ ಕಂಟ್ರೋಲರ್) ಹೊತ್ತಿದ್ದರು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪತ್ರಿಕಾಗೋಷ್ಠಿಯಲ್ಲಿ, ಈ ಅಪಘಾತವನ್ನು ತಪ್ಪಿಸಬಹುದಿತ್ತು ಎಂದು ತೋರುತ್ತದೆ ಎಂದು ಹೇಳಿದ್ದಾರೆ. ಯಾವುದೇ ಪುರಾವೆಗಳಿಲ್ಲದೆ, ಘಟನೆಗೆ ಈ ಹಿಂದಿನ ಬರಾಕ್ ಒಬಾಮಾ ಮತ್ತು ಜೋ ಬೈಡೆನ್‌ ಆಡಳಿತದ ಉಪಕ್ರಮಗಳು ಕಾರಣ ಎಂದು ದೂಷಿಸಿದ್ದಾರೆ.

ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಬೋಸ್ಟನ್‌ನ ಸ್ಕೇಟಿಂಗ್ ಕ್ಲಬ್‌ನ ಸದಸ್ಯರು ಸೇರಿದ್ದರು. ಅವರು ವಿಚಿಟಾದಲ್ಲಿ 2025ರ ಯುಎಸ್ ಫಿಗರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ಗಳ ನಂತರ ನಡೆದ ಶಿಬಿರದಿಂದ ಹಿಂತಿರುಗುತ್ತಿದ್ದರು. ವರ್ಜೀನಿಯಾದ ಫೇರ್‌ಫ್ಯಾಕ್ಸ್ ಕೌಂಟಿಯ ಶಾಲೆಗಳ ಮೂವರು ವಿದ್ಯಾರ್ಥಿಗಳು ಮತ್ತು ಆರು ಮಂದಿ ಪೋಷಕರು ಸಹ ವಿಮಾನದಲ್ಲಿದ್ದರು.

‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...