Homeಮುಖಪುಟವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

- Advertisement -
- Advertisement -

ವಾಷಿಂಗ್ಟನ್ ಡಿಸಿ ಬಳಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ಬುಧವಾರ ರಾತ್ರಿ (ಸ್ಥಳೀಯ ಕಾಲಮಾನ) ಸಂಭವಿಸಿದ ಪ್ರಯಾಣಿಕ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್‌ ನಡುವಿನ ಅಪಘಾತದಲ್ಲಿ 67 ಜನರು ಸಾವನ್ನಪ್ಪಿದ್ದಾರೆ.

ಪ್ರಯಾಣಿಕ ವಿಮಾನ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ವಿಮಾನ ಮತ್ತು ಹೆಲಿಕಾಪ್ಟರ್ ಎರಡೂ ಪೊಟೊಮ್ಯಾಕ್ ನದಿಗೆ ಬಿದ್ದಿವೆ.

ಅಪಘಾತದಲ್ಲಿ ವಿಮಾನದಲ್ಲಿದ್ದ 64 ಪ್ರಯಾಣಿಕರು ಮತ್ತು ಸೇನಾ ಹೆಲಿಕಾಪ್ಟರ್‌ನಲ್ಲಿದ್ದ 4 ಸಿಬ್ಬಂದಿ ಸೇರಿ ಎಲ್ಲಾ 67 ಜನರು ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಿಂದ 28 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಘಟನೆ 2009ರ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ (ಯುಎಸ್‌) ನಡೆದ ಮೊದಲ ಪ್ರಮುಖ ವಿಮಾನ ಅಪಘಾತವಾಗಿದೆ.

“ಅತ್ಯಂತ ಸಂಕೀರ್ಣ ಪರಿಸ್ಥಿತಿ ಇದ್ದರೂ ಅಪಘಾತ ನಡೆದ ತಕ್ಷಣವೇ ನಾವು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆವು. ಇದುವರೆಗೆ 28 ಶವಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ. ದೋಣಿಗಳು ಇನ್ನೂ ನೀರಿನ ಮೇಲೆಯೇ ಇದ್ದು, ಶವಗಳು ಮತ್ತು ವಿಮಾನದ ಅವಶೇಷಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ” ಎಂದು ವಾಷಿಂಗ್ಟನ್ ಅಗ್ನಿಶಾಮಕ ದಳದ ಮುಖ್ಯಸ್ಥ ಜಾನ್ ಡೊನ್ನೆಲ್ಲಿ ತಿಳಿಸಿದ್ದಾರೆ.

ಬ್ಲ್ಯಾಕ್‌ ಬಾಕ್ಸ್ ಪತ್ತೆ

ಅಧಿಕಾರಿಗಳು ವಿಮಾನ ಮತ್ತು ಹೆಲಿಕಾಪ್ಟರ್‌ ಪತನಗೊಂಡ ಪೊಟೊಮ್ಯಾಕ್ ನದಿಯಿಂದ AA5342 ವಿಮಾನದ ‘ಬ್ಲ್ಯಾಕ್‌ ಬಾಕ್ಸ್‌’ ರೆಕಾರ್ಡರ್‌ಗಳಲ್ಲಿ ಒಂದನ್ನು ವಶಪಡಿಸಿಕೊಂಡಿದ್ದಾರೆ. ವಿಮಾನದ ಡೇಟಾ ಮತ್ತು ಕಾಕ್‌ಪಿಟ್ ಧ್ವನಿ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಈ ಸಾಧನವು ಅಪಘಾತಕ್ಕೂ ಮುನ್ನ ವಿಮಾನದಲ್ಲಿ ಏನಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಮುಖ ಸಾಕ್ಷಿಯಾಗಲಿದೆ.

ಅಸೋಸಿಯೇಟೆಡ್ ಪ್ರೆಸ್ ಪಡೆದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ವರದಿಯ ಪ್ರಕಾರ, ಡಿಕ್ಕಿ ಸಂಭವಿಸಿದಾಗ ಹೆಲಿಕಾಪ್ಟರ್ ಸಂಚಾರ, ವಿಮಾನಗಳ ಆಗಮನ ಮತ್ತು ನಿರ್ಗಮನವನ್ನು ಸಂಘಟಿಸುವ ಜವಾಬ್ದಾರಿಯನ್ನು ಒಬ್ಬರೇ ವಾಯು ಸಂಚಾರ ನಿಯಂತ್ರಕ (ಏರ್‌ ಟ್ರಾಫಿಕ್ ಕಂಟ್ರೋಲರ್) ಹೊತ್ತಿದ್ದರು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪತ್ರಿಕಾಗೋಷ್ಠಿಯಲ್ಲಿ, ಈ ಅಪಘಾತವನ್ನು ತಪ್ಪಿಸಬಹುದಿತ್ತು ಎಂದು ತೋರುತ್ತದೆ ಎಂದು ಹೇಳಿದ್ದಾರೆ. ಯಾವುದೇ ಪುರಾವೆಗಳಿಲ್ಲದೆ, ಘಟನೆಗೆ ಈ ಹಿಂದಿನ ಬರಾಕ್ ಒಬಾಮಾ ಮತ್ತು ಜೋ ಬೈಡೆನ್‌ ಆಡಳಿತದ ಉಪಕ್ರಮಗಳು ಕಾರಣ ಎಂದು ದೂಷಿಸಿದ್ದಾರೆ.

ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಬೋಸ್ಟನ್‌ನ ಸ್ಕೇಟಿಂಗ್ ಕ್ಲಬ್‌ನ ಸದಸ್ಯರು ಸೇರಿದ್ದರು. ಅವರು ವಿಚಿಟಾದಲ್ಲಿ 2025ರ ಯುಎಸ್ ಫಿಗರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ಗಳ ನಂತರ ನಡೆದ ಶಿಬಿರದಿಂದ ಹಿಂತಿರುಗುತ್ತಿದ್ದರು. ವರ್ಜೀನಿಯಾದ ಫೇರ್‌ಫ್ಯಾಕ್ಸ್ ಕೌಂಟಿಯ ಶಾಲೆಗಳ ಮೂವರು ವಿದ್ಯಾರ್ಥಿಗಳು ಮತ್ತು ಆರು ಮಂದಿ ಪೋಷಕರು ಸಹ ವಿಮಾನದಲ್ಲಿದ್ದರು.

‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...