Homeಮುಖಪುಟವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

- Advertisement -
- Advertisement -

ವಾಷಿಂಗ್ಟನ್ ಡಿಸಿ ಬಳಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ಬುಧವಾರ ರಾತ್ರಿ (ಸ್ಥಳೀಯ ಕಾಲಮಾನ) ಸಂಭವಿಸಿದ ಪ್ರಯಾಣಿಕ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್‌ ನಡುವಿನ ಅಪಘಾತದಲ್ಲಿ 67 ಜನರು ಸಾವನ್ನಪ್ಪಿದ್ದಾರೆ.

ಪ್ರಯಾಣಿಕ ವಿಮಾನ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ವಿಮಾನ ಮತ್ತು ಹೆಲಿಕಾಪ್ಟರ್ ಎರಡೂ ಪೊಟೊಮ್ಯಾಕ್ ನದಿಗೆ ಬಿದ್ದಿವೆ.

ಅಪಘಾತದಲ್ಲಿ ವಿಮಾನದಲ್ಲಿದ್ದ 64 ಪ್ರಯಾಣಿಕರು ಮತ್ತು ಸೇನಾ ಹೆಲಿಕಾಪ್ಟರ್‌ನಲ್ಲಿದ್ದ 4 ಸಿಬ್ಬಂದಿ ಸೇರಿ ಎಲ್ಲಾ 67 ಜನರು ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಿಂದ 28 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಘಟನೆ 2009ರ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ (ಯುಎಸ್‌) ನಡೆದ ಮೊದಲ ಪ್ರಮುಖ ವಿಮಾನ ಅಪಘಾತವಾಗಿದೆ.

“ಅತ್ಯಂತ ಸಂಕೀರ್ಣ ಪರಿಸ್ಥಿತಿ ಇದ್ದರೂ ಅಪಘಾತ ನಡೆದ ತಕ್ಷಣವೇ ನಾವು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆವು. ಇದುವರೆಗೆ 28 ಶವಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ. ದೋಣಿಗಳು ಇನ್ನೂ ನೀರಿನ ಮೇಲೆಯೇ ಇದ್ದು, ಶವಗಳು ಮತ್ತು ವಿಮಾನದ ಅವಶೇಷಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ” ಎಂದು ವಾಷಿಂಗ್ಟನ್ ಅಗ್ನಿಶಾಮಕ ದಳದ ಮುಖ್ಯಸ್ಥ ಜಾನ್ ಡೊನ್ನೆಲ್ಲಿ ತಿಳಿಸಿದ್ದಾರೆ.

ಬ್ಲ್ಯಾಕ್‌ ಬಾಕ್ಸ್ ಪತ್ತೆ

ಅಧಿಕಾರಿಗಳು ವಿಮಾನ ಮತ್ತು ಹೆಲಿಕಾಪ್ಟರ್‌ ಪತನಗೊಂಡ ಪೊಟೊಮ್ಯಾಕ್ ನದಿಯಿಂದ AA5342 ವಿಮಾನದ ‘ಬ್ಲ್ಯಾಕ್‌ ಬಾಕ್ಸ್‌’ ರೆಕಾರ್ಡರ್‌ಗಳಲ್ಲಿ ಒಂದನ್ನು ವಶಪಡಿಸಿಕೊಂಡಿದ್ದಾರೆ. ವಿಮಾನದ ಡೇಟಾ ಮತ್ತು ಕಾಕ್‌ಪಿಟ್ ಧ್ವನಿ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಈ ಸಾಧನವು ಅಪಘಾತಕ್ಕೂ ಮುನ್ನ ವಿಮಾನದಲ್ಲಿ ಏನಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಮುಖ ಸಾಕ್ಷಿಯಾಗಲಿದೆ.

ಅಸೋಸಿಯೇಟೆಡ್ ಪ್ರೆಸ್ ಪಡೆದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ವರದಿಯ ಪ್ರಕಾರ, ಡಿಕ್ಕಿ ಸಂಭವಿಸಿದಾಗ ಹೆಲಿಕಾಪ್ಟರ್ ಸಂಚಾರ, ವಿಮಾನಗಳ ಆಗಮನ ಮತ್ತು ನಿರ್ಗಮನವನ್ನು ಸಂಘಟಿಸುವ ಜವಾಬ್ದಾರಿಯನ್ನು ಒಬ್ಬರೇ ವಾಯು ಸಂಚಾರ ನಿಯಂತ್ರಕ (ಏರ್‌ ಟ್ರಾಫಿಕ್ ಕಂಟ್ರೋಲರ್) ಹೊತ್ತಿದ್ದರು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪತ್ರಿಕಾಗೋಷ್ಠಿಯಲ್ಲಿ, ಈ ಅಪಘಾತವನ್ನು ತಪ್ಪಿಸಬಹುದಿತ್ತು ಎಂದು ತೋರುತ್ತದೆ ಎಂದು ಹೇಳಿದ್ದಾರೆ. ಯಾವುದೇ ಪುರಾವೆಗಳಿಲ್ಲದೆ, ಘಟನೆಗೆ ಈ ಹಿಂದಿನ ಬರಾಕ್ ಒಬಾಮಾ ಮತ್ತು ಜೋ ಬೈಡೆನ್‌ ಆಡಳಿತದ ಉಪಕ್ರಮಗಳು ಕಾರಣ ಎಂದು ದೂಷಿಸಿದ್ದಾರೆ.

ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಬೋಸ್ಟನ್‌ನ ಸ್ಕೇಟಿಂಗ್ ಕ್ಲಬ್‌ನ ಸದಸ್ಯರು ಸೇರಿದ್ದರು. ಅವರು ವಿಚಿಟಾದಲ್ಲಿ 2025ರ ಯುಎಸ್ ಫಿಗರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ಗಳ ನಂತರ ನಡೆದ ಶಿಬಿರದಿಂದ ಹಿಂತಿರುಗುತ್ತಿದ್ದರು. ವರ್ಜೀನಿಯಾದ ಫೇರ್‌ಫ್ಯಾಕ್ಸ್ ಕೌಂಟಿಯ ಶಾಲೆಗಳ ಮೂವರು ವಿದ್ಯಾರ್ಥಿಗಳು ಮತ್ತು ಆರು ಮಂದಿ ಪೋಷಕರು ಸಹ ವಿಮಾನದಲ್ಲಿದ್ದರು.

‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...