Homeಮುಖಪುಟವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

- Advertisement -
- Advertisement -

ವಾಷಿಂಗ್ಟನ್ ಡಿಸಿ ಬಳಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ಬುಧವಾರ ರಾತ್ರಿ (ಸ್ಥಳೀಯ ಕಾಲಮಾನ) ಸಂಭವಿಸಿದ ಪ್ರಯಾಣಿಕ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್‌ ನಡುವಿನ ಅಪಘಾತದಲ್ಲಿ 67 ಜನರು ಸಾವನ್ನಪ್ಪಿದ್ದಾರೆ.

ಪ್ರಯಾಣಿಕ ವಿಮಾನ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ವಿಮಾನ ಮತ್ತು ಹೆಲಿಕಾಪ್ಟರ್ ಎರಡೂ ಪೊಟೊಮ್ಯಾಕ್ ನದಿಗೆ ಬಿದ್ದಿವೆ.

ಅಪಘಾತದಲ್ಲಿ ವಿಮಾನದಲ್ಲಿದ್ದ 64 ಪ್ರಯಾಣಿಕರು ಮತ್ತು ಸೇನಾ ಹೆಲಿಕಾಪ್ಟರ್‌ನಲ್ಲಿದ್ದ 4 ಸಿಬ್ಬಂದಿ ಸೇರಿ ಎಲ್ಲಾ 67 ಜನರು ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಿಂದ 28 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಘಟನೆ 2009ರ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ (ಯುಎಸ್‌) ನಡೆದ ಮೊದಲ ಪ್ರಮುಖ ವಿಮಾನ ಅಪಘಾತವಾಗಿದೆ.

“ಅತ್ಯಂತ ಸಂಕೀರ್ಣ ಪರಿಸ್ಥಿತಿ ಇದ್ದರೂ ಅಪಘಾತ ನಡೆದ ತಕ್ಷಣವೇ ನಾವು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆವು. ಇದುವರೆಗೆ 28 ಶವಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ. ದೋಣಿಗಳು ಇನ್ನೂ ನೀರಿನ ಮೇಲೆಯೇ ಇದ್ದು, ಶವಗಳು ಮತ್ತು ವಿಮಾನದ ಅವಶೇಷಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ” ಎಂದು ವಾಷಿಂಗ್ಟನ್ ಅಗ್ನಿಶಾಮಕ ದಳದ ಮುಖ್ಯಸ್ಥ ಜಾನ್ ಡೊನ್ನೆಲ್ಲಿ ತಿಳಿಸಿದ್ದಾರೆ.

ಬ್ಲ್ಯಾಕ್‌ ಬಾಕ್ಸ್ ಪತ್ತೆ

ಅಧಿಕಾರಿಗಳು ವಿಮಾನ ಮತ್ತು ಹೆಲಿಕಾಪ್ಟರ್‌ ಪತನಗೊಂಡ ಪೊಟೊಮ್ಯಾಕ್ ನದಿಯಿಂದ AA5342 ವಿಮಾನದ ‘ಬ್ಲ್ಯಾಕ್‌ ಬಾಕ್ಸ್‌’ ರೆಕಾರ್ಡರ್‌ಗಳಲ್ಲಿ ಒಂದನ್ನು ವಶಪಡಿಸಿಕೊಂಡಿದ್ದಾರೆ. ವಿಮಾನದ ಡೇಟಾ ಮತ್ತು ಕಾಕ್‌ಪಿಟ್ ಧ್ವನಿ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಈ ಸಾಧನವು ಅಪಘಾತಕ್ಕೂ ಮುನ್ನ ವಿಮಾನದಲ್ಲಿ ಏನಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಮುಖ ಸಾಕ್ಷಿಯಾಗಲಿದೆ.

ಅಸೋಸಿಯೇಟೆಡ್ ಪ್ರೆಸ್ ಪಡೆದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ವರದಿಯ ಪ್ರಕಾರ, ಡಿಕ್ಕಿ ಸಂಭವಿಸಿದಾಗ ಹೆಲಿಕಾಪ್ಟರ್ ಸಂಚಾರ, ವಿಮಾನಗಳ ಆಗಮನ ಮತ್ತು ನಿರ್ಗಮನವನ್ನು ಸಂಘಟಿಸುವ ಜವಾಬ್ದಾರಿಯನ್ನು ಒಬ್ಬರೇ ವಾಯು ಸಂಚಾರ ನಿಯಂತ್ರಕ (ಏರ್‌ ಟ್ರಾಫಿಕ್ ಕಂಟ್ರೋಲರ್) ಹೊತ್ತಿದ್ದರು.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪತ್ರಿಕಾಗೋಷ್ಠಿಯಲ್ಲಿ, ಈ ಅಪಘಾತವನ್ನು ತಪ್ಪಿಸಬಹುದಿತ್ತು ಎಂದು ತೋರುತ್ತದೆ ಎಂದು ಹೇಳಿದ್ದಾರೆ. ಯಾವುದೇ ಪುರಾವೆಗಳಿಲ್ಲದೆ, ಘಟನೆಗೆ ಈ ಹಿಂದಿನ ಬರಾಕ್ ಒಬಾಮಾ ಮತ್ತು ಜೋ ಬೈಡೆನ್‌ ಆಡಳಿತದ ಉಪಕ್ರಮಗಳು ಕಾರಣ ಎಂದು ದೂಷಿಸಿದ್ದಾರೆ.

ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಬೋಸ್ಟನ್‌ನ ಸ್ಕೇಟಿಂಗ್ ಕ್ಲಬ್‌ನ ಸದಸ್ಯರು ಸೇರಿದ್ದರು. ಅವರು ವಿಚಿಟಾದಲ್ಲಿ 2025ರ ಯುಎಸ್ ಫಿಗರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ಗಳ ನಂತರ ನಡೆದ ಶಿಬಿರದಿಂದ ಹಿಂತಿರುಗುತ್ತಿದ್ದರು. ವರ್ಜೀನಿಯಾದ ಫೇರ್‌ಫ್ಯಾಕ್ಸ್ ಕೌಂಟಿಯ ಶಾಲೆಗಳ ಮೂವರು ವಿದ್ಯಾರ್ಥಿಗಳು ಮತ್ತು ಆರು ಮಂದಿ ಪೋಷಕರು ಸಹ ವಿಮಾನದಲ್ಲಿದ್ದರು.

‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...