Homeಮುಖಪುಟಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

- Advertisement -
- Advertisement -

ನಿಷ್ಪಕ್ಷಪಾತ ಸಂಶೋಧನಾ ಸಂಸ್ಥೆಯಾಗಿ ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುತ್ತಿರುವ ಡಿಸಿನ್ಫೋ ಲ್ಯಾಬ್, (Disinfo Lab)ಯುಎಸ್‌ ಸರ್ಕಾರಿ ಅಧಿಕಾರಿಗಳು, ಸಂಶೋಧಕರು, ಮಾನವೀಯ ಗುಂಪುಗಳು ಮತ್ತು ಭಾರತೀಯ ಅಮೆರಿಕನ್ ಕಾರ್ಯಕರ್ತರನ್ನು ಭಾರತದ ವಿರುದ್ಧದ ಜಾಗತಿಕ ಪಿತೂರಿಯ ಭಾಗವಾಗಿ ಬಿಂಬಿಸಲು ಆಧಾರರಹಿತ ಸತ್ಯವನ್ನು ಬೆರೆಸಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ಮೋದಿ ಪರ ಪ್ರಭಾವಿಗಳ ಸಹಾಯದಿಂದ ಡಿಸಿನ್ಫೋ ಲ್ಯಾಬ್‌ನ ಅಧಾರ ರಹಿತ ಆರೋಪಗಳು ಭಾರತೀಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಮೋದಿ ಪರ ವ್ಯಕ್ತಿ, ಗುಂಪು, ಸಂಸ್ಥೆಗಳು ಕೆಲವೊಮ್ಮೆ ತಮ್ಮ ಸ್ವಂತ ಮೌಲ್ಯ ವರ್ಧಿಸಿಕೊಳ್ಳಲು ಡಿಸಿನ್ಫೋ ಲ್ಯಾಬ್‌ನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ನ ಗೆರ್ರಿ ಶಿಹ್, ಕ್ಲಾರಾ ಎನ್ಸ್ ಮೋರ್ಸ್ ಮತ್ತು ಪ್ರಾಂಶು ವರ್ಮಾ ಸಿದ್ಧಪಡಿಸಿದ ವರದಿ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ವರದಿ: Covert Indian operation seeks to discredit Modi’s critics in the U.S.

ಡಿಸಿನ್ಫೋ ಲ್ಯಾಬ್ ಸ್ಥಾಪಿಸಿರುವುದು ಮತ್ತು ಪ್ರಸ್ತುತ ಅದನ್ನು ನಡೆಸುತ್ತಿರುವುದು 39 ವರ್ಷದ ಗುಪ್ತಚರ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದಿಬ್ಯಾ ಸತ್ಪತಿ ಅವರು. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನೊಂದಿಗೆ ಈ ಸಂಸ್ಥೆಗೆ ಸಂಬಂಧವಿದೆ ಎಂದು ವರದಿ ಆರೋಪಿಸಿದೆ.

ಸರಿ ಸುಮಾರು ಹನ್ನೆರಡು ಖಾಸಗಿ ಗುತ್ತಿಗೆದಾರರನ್ನು ಒಳಗೊಂಡಿರುವ ಈ ಸಂಸ್ಥೆಯು ನವ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಮೋದಿ ಸರ್ಕಾರದ ವಿದೇಶಿ ವಿಮರ್ಶಕರನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ರಹಸ್ಯ ಕಾರ್ಯಾಚರಣೆಗಳಲ್ಲಿ ಇದು ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ವರದಿ ಹೇಳಿದೆ.

ಡಿಸಿನ್ಫೋ ಲ್ಯಾಬ್ ಲ್ಯಾಬ್‌ನ ಚಟುವಟಿಕೆಗಳು ಹೆಚ್ಚಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಯೋಜಿಸಿರುವ ಆನ್‌ಲೈನ್ ಪ್ರಚಾರದ ಪರವಾಗಿದೆ. ಇದು ದೇಶಿಯ ಮಿತಿಯನ್ನು ಮೀರಿ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿಯ ಪ್ರಮುಖ ಸದಸ್ಯರು, ಗುಪ್ತಚರ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಬಲಪಂಥೀಯ ಭಾರತೀಯ, ಹಿಂದೂ ರಾಷ್ಟ್ರೀಯತಾವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಮೇಲೆ ಇದರ ಪ್ರಭಾವವನ್ನು ವರದಿ ಒತ್ತಿ ಹೇಳಿದೆ.

ವರದಿಯ ಪ್ರಕಾರ, ವಿಶ್ಲೇಷಕರು ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಮತ್ತು ರಾಜಕೀಯ ಉದ್ದೇಶಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶೀತಲ ಸಮರದ ಕಾಲದ ಕೆಜಿಬಿ (ರಷ್ಯಾದ ಗುಪ್ತಚರ ಸಂಸ್ಥೆ) ತಂತ್ರಗಳಿಗೆ ಇದು ಸಮಾನಾಂತರವಾಗಿದೆ ಎಂದಿದ್ದಾರೆ.

ವರದಿಯಲ್ಲಿ, ಭಾರತೀಯ ಗುಪ್ತಚರರು ಅಮೆರಿಕದ ವಿಮರ್ಶಕರನ್ನು ಅಪಖ್ಯಾತಿಗೊಳಿಸುವಲ್ಲಿ ನಿಜವಾಗಿಯೂ ತೊಡಗಿಸಿಕೊಂಡಿದ್ದರೆ, ಅದು ಭಿನ್ನಾಭಿಪ್ರಾಯದ ಬಗ್ಗೆ ಮೋದಿ ಸರ್ಕಾರದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಜ್ಞರು ಹೇಳಿರುವುದಾಗಿ ತಿಳಿಸಲಾಗಿದೆ.

ತನ್ನ 28 ಪ್ರಕಟಿತ ವರದಿಗಳಲ್ಲಿ, ಪಾಕಿಸ್ತಾನಿ ಗುಪ್ತಚರ, ಮುಸ್ಲಿಂ ಬ್ರದರ್‌ಹುಡ್ ಮತ್ತು ಬಿಲಿಯನೇರ್ ಜಾರ್ಜ್ ಸೊರೊಸ್‌ನಂತಹ ಘಟಕಗಳಿಂದ ಧನಸಹಾಯ ಪಡೆದಿರುವ ಮಹಾ ಜಾಲದಿಂದ ಭಾರತವು ದಾಳಿಗೆ ಒಳಗಾಗುತ್ತಿದೆ ಎಂದು ಡಿಸಿನ್ಫೋ ಲ್ಯಾಬ್ ಆಗಾಗ್ಗೆ ಚಿತ್ರಿಸಿದೆ.

ಈ ನಿಧಿಗಳು ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ, ಯುಎಸ್ ಪ್ರತಿನಿಧಿ ಪ್ರಮೀಳಾ ಜಯಪಾಲ್, ಇಂಡಿಯನ್ ಅಮೆರಿಕನ್ ಕಾರ್ಯಕರ್ತರು ಸೇರಿದಂತೆ ಮೋದಿಯವರನ್ನು ಟೀಕಿಸುವ ಯುಎಸ್ ಮೂಲದ ವಿವಿಧ ವ್ಯಕ್ತಿಗಳ ನಡುವೆ ಸಂಪರ್ಕ ಕಲ್ಪಿಸಿವೆ ಎಂದು ವರದಿ ಆರೋಪಿಸಿವೆ.

ಡಿಸಿನ್ಫೋ ಲ್ಯಾಬ್‌ನ ಆಧಾರ ರಹಿತ ವರದಿಗಳು ಮೋದಿ ಪರ ಪ್ರಭಾವಿಗಳ ಮೂಲಕ ದೂರದರ್ಶನ, ಮತ್ತು ಭಾರತೀಯ ಅಧಿಕಾರಿಗಳಿಂದ ಜಾಗತಿಕ ಮಟ್ಟದಲ್ಲಿ ಹಬ್ಬುತ್ತವೆ. ಪ್ರಮುಖ ಬಿಜೆಪಿ ಪರ ವ್ಯಕ್ತಿಗಳಾದ ತಜೀಂದರ್ ಬಗ್ಗಾ, ಸಂಜು ವರ್ಮಾ ಮತ್ತು ಕಪಿಲ್ ಮಿಶ್ರಾ ಅವರು ಡಿಸಿನ್ಫೋ ಲ್ಯಾಬ್ ವಿಷಯವನ್ನು ಹರಡಲು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ವರದಿಯು ಆರೋಪಿಸಿದೆ.

ಡಿಸಿನ್ಫೋ ಲ್ಯಾಬ್‌ನ ವರದಿಗಳು ಯುಎಸ್ ಸಂಸದರ ಮೇಲೆ ಪ್ರಭಾವ ಬೀರಿದ ನಿದರ್ಶನಗಳನ್ನು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ. ಭಾರತದ ಕೋವಿಡ್ ಸಾಂಕ್ರಾಮಿಕದ ಕುರಿತ ಪ್ರತಿಕ್ರಿಯೆ ಮತ್ತು ಜಾತಿ ಆಧಾರಿತ ತಾರತಮ್ಯದ ಶಾಸನದಂತಹ ವಿಷಯಗಳ ಮೇಲಿನ ಚರ್ಚೆಗಳನ್ನು ಇದು ಹುಟ್ಟು ಹಾಕಿದೆ. ಡಿಸಿನ್ಫೋ ಲ್ಯಾಬ್‌ನ ಕೆಲಸವು ಅಮೆರಿಕನ್ ನಾಗರಿಕರ ಮೇಲೆ ವಿದೇಶಿ ಪ್ರಭಾವ ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮ ವಲಸಿಗರ ನಿಖರ ಮಾಹಿತಿ ಸಂಗ್ರಹ ಅಸಾಧ್ಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...