Homeಮುಖಪುಟಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

- Advertisement -
- Advertisement -

ನಿಷ್ಪಕ್ಷಪಾತ ಸಂಶೋಧನಾ ಸಂಸ್ಥೆಯಾಗಿ ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುತ್ತಿರುವ ಡಿಸಿನ್ಫೋ ಲ್ಯಾಬ್, (Disinfo Lab)ಯುಎಸ್‌ ಸರ್ಕಾರಿ ಅಧಿಕಾರಿಗಳು, ಸಂಶೋಧಕರು, ಮಾನವೀಯ ಗುಂಪುಗಳು ಮತ್ತು ಭಾರತೀಯ ಅಮೆರಿಕನ್ ಕಾರ್ಯಕರ್ತರನ್ನು ಭಾರತದ ವಿರುದ್ಧದ ಜಾಗತಿಕ ಪಿತೂರಿಯ ಭಾಗವಾಗಿ ಬಿಂಬಿಸಲು ಆಧಾರರಹಿತ ಸತ್ಯವನ್ನು ಬೆರೆಸಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ಮೋದಿ ಪರ ಪ್ರಭಾವಿಗಳ ಸಹಾಯದಿಂದ ಡಿಸಿನ್ಫೋ ಲ್ಯಾಬ್‌ನ ಅಧಾರ ರಹಿತ ಆರೋಪಗಳು ಭಾರತೀಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಮೋದಿ ಪರ ವ್ಯಕ್ತಿ, ಗುಂಪು, ಸಂಸ್ಥೆಗಳು ಕೆಲವೊಮ್ಮೆ ತಮ್ಮ ಸ್ವಂತ ಮೌಲ್ಯ ವರ್ಧಿಸಿಕೊಳ್ಳಲು ಡಿಸಿನ್ಫೋ ಲ್ಯಾಬ್‌ನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ನ ಗೆರ್ರಿ ಶಿಹ್, ಕ್ಲಾರಾ ಎನ್ಸ್ ಮೋರ್ಸ್ ಮತ್ತು ಪ್ರಾಂಶು ವರ್ಮಾ ಸಿದ್ಧಪಡಿಸಿದ ವರದಿ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ವರದಿ: Covert Indian operation seeks to discredit Modi’s critics in the U.S.

ಡಿಸಿನ್ಫೋ ಲ್ಯಾಬ್ ಸ್ಥಾಪಿಸಿರುವುದು ಮತ್ತು ಪ್ರಸ್ತುತ ಅದನ್ನು ನಡೆಸುತ್ತಿರುವುದು 39 ವರ್ಷದ ಗುಪ್ತಚರ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದಿಬ್ಯಾ ಸತ್ಪತಿ ಅವರು. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನೊಂದಿಗೆ ಈ ಸಂಸ್ಥೆಗೆ ಸಂಬಂಧವಿದೆ ಎಂದು ವರದಿ ಆರೋಪಿಸಿದೆ.

ಸರಿ ಸುಮಾರು ಹನ್ನೆರಡು ಖಾಸಗಿ ಗುತ್ತಿಗೆದಾರರನ್ನು ಒಳಗೊಂಡಿರುವ ಈ ಸಂಸ್ಥೆಯು ನವ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಮೋದಿ ಸರ್ಕಾರದ ವಿದೇಶಿ ವಿಮರ್ಶಕರನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ರಹಸ್ಯ ಕಾರ್ಯಾಚರಣೆಗಳಲ್ಲಿ ಇದು ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ವರದಿ ಹೇಳಿದೆ.

ಡಿಸಿನ್ಫೋ ಲ್ಯಾಬ್ ಲ್ಯಾಬ್‌ನ ಚಟುವಟಿಕೆಗಳು ಹೆಚ್ಚಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಯೋಜಿಸಿರುವ ಆನ್‌ಲೈನ್ ಪ್ರಚಾರದ ಪರವಾಗಿದೆ. ಇದು ದೇಶಿಯ ಮಿತಿಯನ್ನು ಮೀರಿ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿಯ ಪ್ರಮುಖ ಸದಸ್ಯರು, ಗುಪ್ತಚರ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಬಲಪಂಥೀಯ ಭಾರತೀಯ, ಹಿಂದೂ ರಾಷ್ಟ್ರೀಯತಾವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಮೇಲೆ ಇದರ ಪ್ರಭಾವವನ್ನು ವರದಿ ಒತ್ತಿ ಹೇಳಿದೆ.

ವರದಿಯ ಪ್ರಕಾರ, ವಿಶ್ಲೇಷಕರು ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಮತ್ತು ರಾಜಕೀಯ ಉದ್ದೇಶಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶೀತಲ ಸಮರದ ಕಾಲದ ಕೆಜಿಬಿ (ರಷ್ಯಾದ ಗುಪ್ತಚರ ಸಂಸ್ಥೆ) ತಂತ್ರಗಳಿಗೆ ಇದು ಸಮಾನಾಂತರವಾಗಿದೆ ಎಂದಿದ್ದಾರೆ.

ವರದಿಯಲ್ಲಿ, ಭಾರತೀಯ ಗುಪ್ತಚರರು ಅಮೆರಿಕದ ವಿಮರ್ಶಕರನ್ನು ಅಪಖ್ಯಾತಿಗೊಳಿಸುವಲ್ಲಿ ನಿಜವಾಗಿಯೂ ತೊಡಗಿಸಿಕೊಂಡಿದ್ದರೆ, ಅದು ಭಿನ್ನಾಭಿಪ್ರಾಯದ ಬಗ್ಗೆ ಮೋದಿ ಸರ್ಕಾರದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಜ್ಞರು ಹೇಳಿರುವುದಾಗಿ ತಿಳಿಸಲಾಗಿದೆ.

ತನ್ನ 28 ಪ್ರಕಟಿತ ವರದಿಗಳಲ್ಲಿ, ಪಾಕಿಸ್ತಾನಿ ಗುಪ್ತಚರ, ಮುಸ್ಲಿಂ ಬ್ರದರ್‌ಹುಡ್ ಮತ್ತು ಬಿಲಿಯನೇರ್ ಜಾರ್ಜ್ ಸೊರೊಸ್‌ನಂತಹ ಘಟಕಗಳಿಂದ ಧನಸಹಾಯ ಪಡೆದಿರುವ ಮಹಾ ಜಾಲದಿಂದ ಭಾರತವು ದಾಳಿಗೆ ಒಳಗಾಗುತ್ತಿದೆ ಎಂದು ಡಿಸಿನ್ಫೋ ಲ್ಯಾಬ್ ಆಗಾಗ್ಗೆ ಚಿತ್ರಿಸಿದೆ.

ಈ ನಿಧಿಗಳು ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ, ಯುಎಸ್ ಪ್ರತಿನಿಧಿ ಪ್ರಮೀಳಾ ಜಯಪಾಲ್, ಇಂಡಿಯನ್ ಅಮೆರಿಕನ್ ಕಾರ್ಯಕರ್ತರು ಸೇರಿದಂತೆ ಮೋದಿಯವರನ್ನು ಟೀಕಿಸುವ ಯುಎಸ್ ಮೂಲದ ವಿವಿಧ ವ್ಯಕ್ತಿಗಳ ನಡುವೆ ಸಂಪರ್ಕ ಕಲ್ಪಿಸಿವೆ ಎಂದು ವರದಿ ಆರೋಪಿಸಿವೆ.

ಡಿಸಿನ್ಫೋ ಲ್ಯಾಬ್‌ನ ಆಧಾರ ರಹಿತ ವರದಿಗಳು ಮೋದಿ ಪರ ಪ್ರಭಾವಿಗಳ ಮೂಲಕ ದೂರದರ್ಶನ, ಮತ್ತು ಭಾರತೀಯ ಅಧಿಕಾರಿಗಳಿಂದ ಜಾಗತಿಕ ಮಟ್ಟದಲ್ಲಿ ಹಬ್ಬುತ್ತವೆ. ಪ್ರಮುಖ ಬಿಜೆಪಿ ಪರ ವ್ಯಕ್ತಿಗಳಾದ ತಜೀಂದರ್ ಬಗ್ಗಾ, ಸಂಜು ವರ್ಮಾ ಮತ್ತು ಕಪಿಲ್ ಮಿಶ್ರಾ ಅವರು ಡಿಸಿನ್ಫೋ ಲ್ಯಾಬ್ ವಿಷಯವನ್ನು ಹರಡಲು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ವರದಿಯು ಆರೋಪಿಸಿದೆ.

ಡಿಸಿನ್ಫೋ ಲ್ಯಾಬ್‌ನ ವರದಿಗಳು ಯುಎಸ್ ಸಂಸದರ ಮೇಲೆ ಪ್ರಭಾವ ಬೀರಿದ ನಿದರ್ಶನಗಳನ್ನು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ. ಭಾರತದ ಕೋವಿಡ್ ಸಾಂಕ್ರಾಮಿಕದ ಕುರಿತ ಪ್ರತಿಕ್ರಿಯೆ ಮತ್ತು ಜಾತಿ ಆಧಾರಿತ ತಾರತಮ್ಯದ ಶಾಸನದಂತಹ ವಿಷಯಗಳ ಮೇಲಿನ ಚರ್ಚೆಗಳನ್ನು ಇದು ಹುಟ್ಟು ಹಾಕಿದೆ. ಡಿಸಿನ್ಫೋ ಲ್ಯಾಬ್‌ನ ಕೆಲಸವು ಅಮೆರಿಕನ್ ನಾಗರಿಕರ ಮೇಲೆ ವಿದೇಶಿ ಪ್ರಭಾವ ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮ ವಲಸಿಗರ ನಿಖರ ಮಾಹಿತಿ ಸಂಗ್ರಹ ಅಸಾಧ್ಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...