Homeಮುಖಪುಟಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

- Advertisement -
- Advertisement -

ನಿಷ್ಪಕ್ಷಪಾತ ಸಂಶೋಧನಾ ಸಂಸ್ಥೆಯಾಗಿ ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುತ್ತಿರುವ ಡಿಸಿನ್ಫೋ ಲ್ಯಾಬ್, (Disinfo Lab)ಯುಎಸ್‌ ಸರ್ಕಾರಿ ಅಧಿಕಾರಿಗಳು, ಸಂಶೋಧಕರು, ಮಾನವೀಯ ಗುಂಪುಗಳು ಮತ್ತು ಭಾರತೀಯ ಅಮೆರಿಕನ್ ಕಾರ್ಯಕರ್ತರನ್ನು ಭಾರತದ ವಿರುದ್ಧದ ಜಾಗತಿಕ ಪಿತೂರಿಯ ಭಾಗವಾಗಿ ಬಿಂಬಿಸಲು ಆಧಾರರಹಿತ ಸತ್ಯವನ್ನು ಬೆರೆಸಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ಮೋದಿ ಪರ ಪ್ರಭಾವಿಗಳ ಸಹಾಯದಿಂದ ಡಿಸಿನ್ಫೋ ಲ್ಯಾಬ್‌ನ ಅಧಾರ ರಹಿತ ಆರೋಪಗಳು ಭಾರತೀಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಮೋದಿ ಪರ ವ್ಯಕ್ತಿ, ಗುಂಪು, ಸಂಸ್ಥೆಗಳು ಕೆಲವೊಮ್ಮೆ ತಮ್ಮ ಸ್ವಂತ ಮೌಲ್ಯ ವರ್ಧಿಸಿಕೊಳ್ಳಲು ಡಿಸಿನ್ಫೋ ಲ್ಯಾಬ್‌ನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ನ ಗೆರ್ರಿ ಶಿಹ್, ಕ್ಲಾರಾ ಎನ್ಸ್ ಮೋರ್ಸ್ ಮತ್ತು ಪ್ರಾಂಶು ವರ್ಮಾ ಸಿದ್ಧಪಡಿಸಿದ ವರದಿ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ವರದಿ: Covert Indian operation seeks to discredit Modi’s critics in the U.S.

ಡಿಸಿನ್ಫೋ ಲ್ಯಾಬ್ ಸ್ಥಾಪಿಸಿರುವುದು ಮತ್ತು ಪ್ರಸ್ತುತ ಅದನ್ನು ನಡೆಸುತ್ತಿರುವುದು 39 ವರ್ಷದ ಗುಪ್ತಚರ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದಿಬ್ಯಾ ಸತ್ಪತಿ ಅವರು. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನೊಂದಿಗೆ ಈ ಸಂಸ್ಥೆಗೆ ಸಂಬಂಧವಿದೆ ಎಂದು ವರದಿ ಆರೋಪಿಸಿದೆ.

ಸರಿ ಸುಮಾರು ಹನ್ನೆರಡು ಖಾಸಗಿ ಗುತ್ತಿಗೆದಾರರನ್ನು ಒಳಗೊಂಡಿರುವ ಈ ಸಂಸ್ಥೆಯು ನವ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಮೋದಿ ಸರ್ಕಾರದ ವಿದೇಶಿ ವಿಮರ್ಶಕರನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ರಹಸ್ಯ ಕಾರ್ಯಾಚರಣೆಗಳಲ್ಲಿ ಇದು ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ವರದಿ ಹೇಳಿದೆ.

ಡಿಸಿನ್ಫೋ ಲ್ಯಾಬ್ ಲ್ಯಾಬ್‌ನ ಚಟುವಟಿಕೆಗಳು ಹೆಚ್ಚಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಯೋಜಿಸಿರುವ ಆನ್‌ಲೈನ್ ಪ್ರಚಾರದ ಪರವಾಗಿದೆ. ಇದು ದೇಶಿಯ ಮಿತಿಯನ್ನು ಮೀರಿ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿಯ ಪ್ರಮುಖ ಸದಸ್ಯರು, ಗುಪ್ತಚರ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಬಲಪಂಥೀಯ ಭಾರತೀಯ, ಹಿಂದೂ ರಾಷ್ಟ್ರೀಯತಾವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಮೇಲೆ ಇದರ ಪ್ರಭಾವವನ್ನು ವರದಿ ಒತ್ತಿ ಹೇಳಿದೆ.

ವರದಿಯ ಪ್ರಕಾರ, ವಿಶ್ಲೇಷಕರು ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಮತ್ತು ರಾಜಕೀಯ ಉದ್ದೇಶಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶೀತಲ ಸಮರದ ಕಾಲದ ಕೆಜಿಬಿ (ರಷ್ಯಾದ ಗುಪ್ತಚರ ಸಂಸ್ಥೆ) ತಂತ್ರಗಳಿಗೆ ಇದು ಸಮಾನಾಂತರವಾಗಿದೆ ಎಂದಿದ್ದಾರೆ.

ವರದಿಯಲ್ಲಿ, ಭಾರತೀಯ ಗುಪ್ತಚರರು ಅಮೆರಿಕದ ವಿಮರ್ಶಕರನ್ನು ಅಪಖ್ಯಾತಿಗೊಳಿಸುವಲ್ಲಿ ನಿಜವಾಗಿಯೂ ತೊಡಗಿಸಿಕೊಂಡಿದ್ದರೆ, ಅದು ಭಿನ್ನಾಭಿಪ್ರಾಯದ ಬಗ್ಗೆ ಮೋದಿ ಸರ್ಕಾರದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಜ್ಞರು ಹೇಳಿರುವುದಾಗಿ ತಿಳಿಸಲಾಗಿದೆ.

ತನ್ನ 28 ಪ್ರಕಟಿತ ವರದಿಗಳಲ್ಲಿ, ಪಾಕಿಸ್ತಾನಿ ಗುಪ್ತಚರ, ಮುಸ್ಲಿಂ ಬ್ರದರ್‌ಹುಡ್ ಮತ್ತು ಬಿಲಿಯನೇರ್ ಜಾರ್ಜ್ ಸೊರೊಸ್‌ನಂತಹ ಘಟಕಗಳಿಂದ ಧನಸಹಾಯ ಪಡೆದಿರುವ ಮಹಾ ಜಾಲದಿಂದ ಭಾರತವು ದಾಳಿಗೆ ಒಳಗಾಗುತ್ತಿದೆ ಎಂದು ಡಿಸಿನ್ಫೋ ಲ್ಯಾಬ್ ಆಗಾಗ್ಗೆ ಚಿತ್ರಿಸಿದೆ.

ಈ ನಿಧಿಗಳು ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ, ಯುಎಸ್ ಪ್ರತಿನಿಧಿ ಪ್ರಮೀಳಾ ಜಯಪಾಲ್, ಇಂಡಿಯನ್ ಅಮೆರಿಕನ್ ಕಾರ್ಯಕರ್ತರು ಸೇರಿದಂತೆ ಮೋದಿಯವರನ್ನು ಟೀಕಿಸುವ ಯುಎಸ್ ಮೂಲದ ವಿವಿಧ ವ್ಯಕ್ತಿಗಳ ನಡುವೆ ಸಂಪರ್ಕ ಕಲ್ಪಿಸಿವೆ ಎಂದು ವರದಿ ಆರೋಪಿಸಿವೆ.

ಡಿಸಿನ್ಫೋ ಲ್ಯಾಬ್‌ನ ಆಧಾರ ರಹಿತ ವರದಿಗಳು ಮೋದಿ ಪರ ಪ್ರಭಾವಿಗಳ ಮೂಲಕ ದೂರದರ್ಶನ, ಮತ್ತು ಭಾರತೀಯ ಅಧಿಕಾರಿಗಳಿಂದ ಜಾಗತಿಕ ಮಟ್ಟದಲ್ಲಿ ಹಬ್ಬುತ್ತವೆ. ಪ್ರಮುಖ ಬಿಜೆಪಿ ಪರ ವ್ಯಕ್ತಿಗಳಾದ ತಜೀಂದರ್ ಬಗ್ಗಾ, ಸಂಜು ವರ್ಮಾ ಮತ್ತು ಕಪಿಲ್ ಮಿಶ್ರಾ ಅವರು ಡಿಸಿನ್ಫೋ ಲ್ಯಾಬ್ ವಿಷಯವನ್ನು ಹರಡಲು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ವರದಿಯು ಆರೋಪಿಸಿದೆ.

ಡಿಸಿನ್ಫೋ ಲ್ಯಾಬ್‌ನ ವರದಿಗಳು ಯುಎಸ್ ಸಂಸದರ ಮೇಲೆ ಪ್ರಭಾವ ಬೀರಿದ ನಿದರ್ಶನಗಳನ್ನು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ. ಭಾರತದ ಕೋವಿಡ್ ಸಾಂಕ್ರಾಮಿಕದ ಕುರಿತ ಪ್ರತಿಕ್ರಿಯೆ ಮತ್ತು ಜಾತಿ ಆಧಾರಿತ ತಾರತಮ್ಯದ ಶಾಸನದಂತಹ ವಿಷಯಗಳ ಮೇಲಿನ ಚರ್ಚೆಗಳನ್ನು ಇದು ಹುಟ್ಟು ಹಾಕಿದೆ. ಡಿಸಿನ್ಫೋ ಲ್ಯಾಬ್‌ನ ಕೆಲಸವು ಅಮೆರಿಕನ್ ನಾಗರಿಕರ ಮೇಲೆ ವಿದೇಶಿ ಪ್ರಭಾವ ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮ ವಲಸಿಗರ ನಿಖರ ಮಾಹಿತಿ ಸಂಗ್ರಹ ಅಸಾಧ್ಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...