Homeಮುಖಪುಟಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

- Advertisement -
- Advertisement -

ನಿಷ್ಪಕ್ಷಪಾತ ಸಂಶೋಧನಾ ಸಂಸ್ಥೆಯಾಗಿ ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುತ್ತಿರುವ ಡಿಸಿನ್ಫೋ ಲ್ಯಾಬ್, (Disinfo Lab)ಯುಎಸ್‌ ಸರ್ಕಾರಿ ಅಧಿಕಾರಿಗಳು, ಸಂಶೋಧಕರು, ಮಾನವೀಯ ಗುಂಪುಗಳು ಮತ್ತು ಭಾರತೀಯ ಅಮೆರಿಕನ್ ಕಾರ್ಯಕರ್ತರನ್ನು ಭಾರತದ ವಿರುದ್ಧದ ಜಾಗತಿಕ ಪಿತೂರಿಯ ಭಾಗವಾಗಿ ಬಿಂಬಿಸಲು ಆಧಾರರಹಿತ ಸತ್ಯವನ್ನು ಬೆರೆಸಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ಮೋದಿ ಪರ ಪ್ರಭಾವಿಗಳ ಸಹಾಯದಿಂದ ಡಿಸಿನ್ಫೋ ಲ್ಯಾಬ್‌ನ ಅಧಾರ ರಹಿತ ಆರೋಪಗಳು ಭಾರತೀಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಮೋದಿ ಪರ ವ್ಯಕ್ತಿ, ಗುಂಪು, ಸಂಸ್ಥೆಗಳು ಕೆಲವೊಮ್ಮೆ ತಮ್ಮ ಸ್ವಂತ ಮೌಲ್ಯ ವರ್ಧಿಸಿಕೊಳ್ಳಲು ಡಿಸಿನ್ಫೋ ಲ್ಯಾಬ್‌ನ ಸಂಶೋಧನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ನ ಗೆರ್ರಿ ಶಿಹ್, ಕ್ಲಾರಾ ಎನ್ಸ್ ಮೋರ್ಸ್ ಮತ್ತು ಪ್ರಾಂಶು ವರ್ಮಾ ಸಿದ್ಧಪಡಿಸಿದ ವರದಿ ಹೇಳಿದೆ.

ವಾಷಿಂಗ್ಟನ್ ಪೋಸ್ಟ್ ವರದಿ: Covert Indian operation seeks to discredit Modi’s critics in the U.S.

ಡಿಸಿನ್ಫೋ ಲ್ಯಾಬ್ ಸ್ಥಾಪಿಸಿರುವುದು ಮತ್ತು ಪ್ರಸ್ತುತ ಅದನ್ನು ನಡೆಸುತ್ತಿರುವುದು 39 ವರ್ಷದ ಗುಪ್ತಚರ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ದಿಬ್ಯಾ ಸತ್ಪತಿ ಅವರು. ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW)ನೊಂದಿಗೆ ಈ ಸಂಸ್ಥೆಗೆ ಸಂಬಂಧವಿದೆ ಎಂದು ವರದಿ ಆರೋಪಿಸಿದೆ.

ಸರಿ ಸುಮಾರು ಹನ್ನೆರಡು ಖಾಸಗಿ ಗುತ್ತಿಗೆದಾರರನ್ನು ಒಳಗೊಂಡಿರುವ ಈ ಸಂಸ್ಥೆಯು ನವ ದೆಹಲಿಯಿಂದ ಕಾರ್ಯನಿರ್ವಹಿಸುತ್ತಿದೆ. ಮೋದಿ ಸರ್ಕಾರದ ವಿದೇಶಿ ವಿಮರ್ಶಕರನ್ನು ಅಪಖ್ಯಾತಿಗೊಳಿಸುವ ಗುರಿಯನ್ನು ಹೊಂದಿರುವ ರಹಸ್ಯ ಕಾರ್ಯಾಚರಣೆಗಳಲ್ಲಿ ಇದು ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ವರದಿ ಹೇಳಿದೆ.

ಡಿಸಿನ್ಫೋ ಲ್ಯಾಬ್ ಲ್ಯಾಬ್‌ನ ಚಟುವಟಿಕೆಗಳು ಹೆಚ್ಚಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಯೋಜಿಸಿರುವ ಆನ್‌ಲೈನ್ ಪ್ರಚಾರದ ಪರವಾಗಿದೆ. ಇದು ದೇಶಿಯ ಮಿತಿಯನ್ನು ಮೀರಿ ಕಾರ್ಯ ನಿರ್ವಹಿಸುತ್ತಿದೆ. ಬಿಜೆಪಿಯ ಪ್ರಮುಖ ಸದಸ್ಯರು, ಗುಪ್ತಚರ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಬಲಪಂಥೀಯ ಭಾರತೀಯ, ಹಿಂದೂ ರಾಷ್ಟ್ರೀಯತಾವಾದಿ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಮೇಲೆ ಇದರ ಪ್ರಭಾವವನ್ನು ವರದಿ ಒತ್ತಿ ಹೇಳಿದೆ.

ವರದಿಯ ಪ್ರಕಾರ, ವಿಶ್ಲೇಷಕರು ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿ ಮತ್ತು ರಾಜಕೀಯ ಉದ್ದೇಶಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶೀತಲ ಸಮರದ ಕಾಲದ ಕೆಜಿಬಿ (ರಷ್ಯಾದ ಗುಪ್ತಚರ ಸಂಸ್ಥೆ) ತಂತ್ರಗಳಿಗೆ ಇದು ಸಮಾನಾಂತರವಾಗಿದೆ ಎಂದಿದ್ದಾರೆ.

ವರದಿಯಲ್ಲಿ, ಭಾರತೀಯ ಗುಪ್ತಚರರು ಅಮೆರಿಕದ ವಿಮರ್ಶಕರನ್ನು ಅಪಖ್ಯಾತಿಗೊಳಿಸುವಲ್ಲಿ ನಿಜವಾಗಿಯೂ ತೊಡಗಿಸಿಕೊಂಡಿದ್ದರೆ, ಅದು ಭಿನ್ನಾಭಿಪ್ರಾಯದ ಬಗ್ಗೆ ಮೋದಿ ಸರ್ಕಾರದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಜ್ಞರು ಹೇಳಿರುವುದಾಗಿ ತಿಳಿಸಲಾಗಿದೆ.

ತನ್ನ 28 ಪ್ರಕಟಿತ ವರದಿಗಳಲ್ಲಿ, ಪಾಕಿಸ್ತಾನಿ ಗುಪ್ತಚರ, ಮುಸ್ಲಿಂ ಬ್ರದರ್‌ಹುಡ್ ಮತ್ತು ಬಿಲಿಯನೇರ್ ಜಾರ್ಜ್ ಸೊರೊಸ್‌ನಂತಹ ಘಟಕಗಳಿಂದ ಧನಸಹಾಯ ಪಡೆದಿರುವ ಮಹಾ ಜಾಲದಿಂದ ಭಾರತವು ದಾಳಿಗೆ ಒಳಗಾಗುತ್ತಿದೆ ಎಂದು ಡಿಸಿನ್ಫೋ ಲ್ಯಾಬ್ ಆಗಾಗ್ಗೆ ಚಿತ್ರಿಸಿದೆ.

ಈ ನಿಧಿಗಳು ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ, ಯುಎಸ್ ಪ್ರತಿನಿಧಿ ಪ್ರಮೀಳಾ ಜಯಪಾಲ್, ಇಂಡಿಯನ್ ಅಮೆರಿಕನ್ ಕಾರ್ಯಕರ್ತರು ಸೇರಿದಂತೆ ಮೋದಿಯವರನ್ನು ಟೀಕಿಸುವ ಯುಎಸ್ ಮೂಲದ ವಿವಿಧ ವ್ಯಕ್ತಿಗಳ ನಡುವೆ ಸಂಪರ್ಕ ಕಲ್ಪಿಸಿವೆ ಎಂದು ವರದಿ ಆರೋಪಿಸಿವೆ.

ಡಿಸಿನ್ಫೋ ಲ್ಯಾಬ್‌ನ ಆಧಾರ ರಹಿತ ವರದಿಗಳು ಮೋದಿ ಪರ ಪ್ರಭಾವಿಗಳ ಮೂಲಕ ದೂರದರ್ಶನ, ಮತ್ತು ಭಾರತೀಯ ಅಧಿಕಾರಿಗಳಿಂದ ಜಾಗತಿಕ ಮಟ್ಟದಲ್ಲಿ ಹಬ್ಬುತ್ತವೆ. ಪ್ರಮುಖ ಬಿಜೆಪಿ ಪರ ವ್ಯಕ್ತಿಗಳಾದ ತಜೀಂದರ್ ಬಗ್ಗಾ, ಸಂಜು ವರ್ಮಾ ಮತ್ತು ಕಪಿಲ್ ಮಿಶ್ರಾ ಅವರು ಡಿಸಿನ್ಫೋ ಲ್ಯಾಬ್ ವಿಷಯವನ್ನು ಹರಡಲು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ವರದಿಯು ಆರೋಪಿಸಿದೆ.

ಡಿಸಿನ್ಫೋ ಲ್ಯಾಬ್‌ನ ವರದಿಗಳು ಯುಎಸ್ ಸಂಸದರ ಮೇಲೆ ಪ್ರಭಾವ ಬೀರಿದ ನಿದರ್ಶನಗಳನ್ನು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ. ಭಾರತದ ಕೋವಿಡ್ ಸಾಂಕ್ರಾಮಿಕದ ಕುರಿತ ಪ್ರತಿಕ್ರಿಯೆ ಮತ್ತು ಜಾತಿ ಆಧಾರಿತ ತಾರತಮ್ಯದ ಶಾಸನದಂತಹ ವಿಷಯಗಳ ಮೇಲಿನ ಚರ್ಚೆಗಳನ್ನು ಇದು ಹುಟ್ಟು ಹಾಕಿದೆ. ಡಿಸಿನ್ಫೋ ಲ್ಯಾಬ್‌ನ ಕೆಲಸವು ಅಮೆರಿಕನ್ ನಾಗರಿಕರ ಮೇಲೆ ವಿದೇಶಿ ಪ್ರಭಾವ ಮತ್ತು ತಪ್ಪು ಮಾಹಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮ ವಲಸಿಗರ ನಿಖರ ಮಾಹಿತಿ ಸಂಗ್ರಹ ಅಸಾಧ್ಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...