Homeಕರ್ನಾಟಕಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

ಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

“ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೇ ಬಿಜೆಪಿ ನಾಯಕರು ದೇಶಾದ್ಯಂತ ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ?” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಉಂಟಾದ ಕೋಮು ದಳ್ಳುರಿ ಮತ್ತು ಅವರು ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಇಟ್ಟ ಹೆಜ್ಜೆಗಳನ್ನು ಮುಖ್ಯವಾಗಿಟ್ಟುಕೊಂಡು ಬಿಬಿಸಿ ರೂಪಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಪ್ರಧಾನಿ ನರೇಂದ್ರಮೋದಿಯವರ ಕುರಿತು ಬಿಬಿಸಿ ತಯಾರಿಸಿದ್ದ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಇದೇ ರೀತಿ ಪ್ರತಿಪಕ್ಷದ ನಾಯಕರ ಚಾರಿತ್ರ್ಯಹನನ ಮಾಡದಂತೆಯೂ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಬೇಕಲ್ಲವೇ?” ಎಂದು ಕೇಳಿದ್ದಾರೆ.

“ಕಳೆದ ಎಂಟು ವರ್ಷಗಳಿಂದ ಬಿಜೆಪಿ ನಾಯಕರು ನನ್ನ ವಿರುದ್ದ ಸುಳ್ಳಿನ ಕಂತೆಗಳ ಅಪಪ್ರಚಾರ ಮಾಡಿದ್ದಾರೆ, ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ, ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ. ಇದು ಕರ್ನಾಟಕ ಮತ್ತು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ?” ಎಂದಿದ್ದಾರೆ.

“ನನ್ನ ವಿರುದ್ದ ಯಾರೋ ಅನಾಮಧೇಯರು ಸುಳ್ಳಿನ ಕಂತೆಗಳ ಪುಸ್ತಕ ಬರೆಯುತ್ತಾರೆ, ಆ ಪುಸ್ತಕವನ್ನು ಸಚಿವರೊಬ್ಬರ ಅಧ್ಯಕ್ಷತೆಯಲ್ಲಿ ಬಿಡುಗಡೆ ಗೊಳಿಸಲು ಸಮಾರಂಭ ಆಯೋಜಿಸುತ್ತಾರೆ. ಇಂತಹ ಕುಚೇಷ್ಠೆ-ಕುಚೋದ್ಯಗಳನ್ನು ಬೆಂಬಲಿಸುವವರಿಗೆ ವಿಶ್ವಾಸಾರ್ಹ ಹಿನ್ನೆಲೆಯ ಬಿಬಿಸಿ ಮಾಧ್ಯಮ ಸಂಸ್ಥೆಯನ್ನು ವಿರೋಧಿಸುವ ಯಾವ ನೈತಿಕತೆ ಇದೆ?” ಎಂದು ಕಟುಕಿದ್ದಾರೆ.

ನಿರ್ಬಂಧಕ್ಕೆ ದೇಶದ ವಿವಿಧೆಡೆ ಆಕ್ರೋಶ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಬಿಬಿಸಿ ತಯಾರಿಸಿರುವ, ‘ಇಂಡಿಯಾ – ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರದ ವಿರುದ್ಧ ವಿಧಿಸಿದ ಸೆನ್ಸಾರ್ಶಿಪ್ ಅನ್ನು ವಿರೋಧಿಸಿ, ಹಲವಾರು ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶನಗಳನ್ನು ಆಯೋಜಿಸುತ್ತಿವೆ.

ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ (EFLU) ಮತ್ತು ಹೈದರಾಬಾದ್ ವಿಶ್ವವಿದ್ಯಾಲಯ (UoH) ವಿದ್ಯಾರ್ಥಿ ಸಂಘಟನೆಗಳು ತಮ್ಮ ಕ್ಯಾಂಪಸ್ ಆವರಣದಲ್ಲಿ ನಿಷೇಧಿತ ಸಾಕ್ಷ್ಯಚಿತ್ರವನ್ನು ವೀಕ್ಷಿಸಿವೆ.

ಸುಮಾರು 60-70 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ತಮ್ಮ ಸೆಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು ಎಂದು EFLU ನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾರ್ಯಕ್ರಮವನ್ನು  ಪೂರ್ವಸಿದ್ಧತೆಯಿಲ್ಲದೆ ಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತವು ತಡೆಯಬಹುದಾಗಿದ್ದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಅದೇ ರೀತಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕವು ಗುರುವಾರ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಇದಕ್ಕೆ ಪ್ರತೀಕಾರವಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಕ್ಯಾಂಪಸ್‌ನ ಬೇರೆ ಸ್ಥಳದಲ್ಲಿ ದಿ ಕಾಶ್ಮೀರ ಫೈಲ್ಸ್ ಅನ್ನು ಪ್ರದರ್ಶಿಸಿದರು. ಎರಡು ಪ್ರದರ್ಶನಗಳೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.

ಇದಕ್ಕೂ ಮೊದಲು, ಫ್ರಟರ್ನಿಟಿ ಮೂವ್‌ಮೆಂಟ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...