Homeಕರ್ನಾಟಕಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

ಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

“ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೇ ಬಿಜೆಪಿ ನಾಯಕರು ದೇಶಾದ್ಯಂತ ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ?” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಉಂಟಾದ ಕೋಮು ದಳ್ಳುರಿ ಮತ್ತು ಅವರು ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಇಟ್ಟ ಹೆಜ್ಜೆಗಳನ್ನು ಮುಖ್ಯವಾಗಿಟ್ಟುಕೊಂಡು ಬಿಬಿಸಿ ರೂಪಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಪ್ರಧಾನಿ ನರೇಂದ್ರಮೋದಿಯವರ ಕುರಿತು ಬಿಬಿಸಿ ತಯಾರಿಸಿದ್ದ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಇದೇ ರೀತಿ ಪ್ರತಿಪಕ್ಷದ ನಾಯಕರ ಚಾರಿತ್ರ್ಯಹನನ ಮಾಡದಂತೆಯೂ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಬೇಕಲ್ಲವೇ?” ಎಂದು ಕೇಳಿದ್ದಾರೆ.

“ಕಳೆದ ಎಂಟು ವರ್ಷಗಳಿಂದ ಬಿಜೆಪಿ ನಾಯಕರು ನನ್ನ ವಿರುದ್ದ ಸುಳ್ಳಿನ ಕಂತೆಗಳ ಅಪಪ್ರಚಾರ ಮಾಡಿದ್ದಾರೆ, ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ, ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ. ಇದು ಕರ್ನಾಟಕ ಮತ್ತು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ?” ಎಂದಿದ್ದಾರೆ.

“ನನ್ನ ವಿರುದ್ದ ಯಾರೋ ಅನಾಮಧೇಯರು ಸುಳ್ಳಿನ ಕಂತೆಗಳ ಪುಸ್ತಕ ಬರೆಯುತ್ತಾರೆ, ಆ ಪುಸ್ತಕವನ್ನು ಸಚಿವರೊಬ್ಬರ ಅಧ್ಯಕ್ಷತೆಯಲ್ಲಿ ಬಿಡುಗಡೆ ಗೊಳಿಸಲು ಸಮಾರಂಭ ಆಯೋಜಿಸುತ್ತಾರೆ. ಇಂತಹ ಕುಚೇಷ್ಠೆ-ಕುಚೋದ್ಯಗಳನ್ನು ಬೆಂಬಲಿಸುವವರಿಗೆ ವಿಶ್ವಾಸಾರ್ಹ ಹಿನ್ನೆಲೆಯ ಬಿಬಿಸಿ ಮಾಧ್ಯಮ ಸಂಸ್ಥೆಯನ್ನು ವಿರೋಧಿಸುವ ಯಾವ ನೈತಿಕತೆ ಇದೆ?” ಎಂದು ಕಟುಕಿದ್ದಾರೆ.

ನಿರ್ಬಂಧಕ್ಕೆ ದೇಶದ ವಿವಿಧೆಡೆ ಆಕ್ರೋಶ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಬಿಬಿಸಿ ತಯಾರಿಸಿರುವ, ‘ಇಂಡಿಯಾ – ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರದ ವಿರುದ್ಧ ವಿಧಿಸಿದ ಸೆನ್ಸಾರ್ಶಿಪ್ ಅನ್ನು ವಿರೋಧಿಸಿ, ಹಲವಾರು ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶನಗಳನ್ನು ಆಯೋಜಿಸುತ್ತಿವೆ.

ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ (EFLU) ಮತ್ತು ಹೈದರಾಬಾದ್ ವಿಶ್ವವಿದ್ಯಾಲಯ (UoH) ವಿದ್ಯಾರ್ಥಿ ಸಂಘಟನೆಗಳು ತಮ್ಮ ಕ್ಯಾಂಪಸ್ ಆವರಣದಲ್ಲಿ ನಿಷೇಧಿತ ಸಾಕ್ಷ್ಯಚಿತ್ರವನ್ನು ವೀಕ್ಷಿಸಿವೆ.

ಸುಮಾರು 60-70 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ತಮ್ಮ ಸೆಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು ಎಂದು EFLU ನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾರ್ಯಕ್ರಮವನ್ನು  ಪೂರ್ವಸಿದ್ಧತೆಯಿಲ್ಲದೆ ಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತವು ತಡೆಯಬಹುದಾಗಿದ್ದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಅದೇ ರೀತಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕವು ಗುರುವಾರ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಇದಕ್ಕೆ ಪ್ರತೀಕಾರವಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಕ್ಯಾಂಪಸ್‌ನ ಬೇರೆ ಸ್ಥಳದಲ್ಲಿ ದಿ ಕಾಶ್ಮೀರ ಫೈಲ್ಸ್ ಅನ್ನು ಪ್ರದರ್ಶಿಸಿದರು. ಎರಡು ಪ್ರದರ್ಶನಗಳೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.

ಇದಕ್ಕೂ ಮೊದಲು, ಫ್ರಟರ್ನಿಟಿ ಮೂವ್‌ಮೆಂಟ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...