Homeಕರ್ನಾಟಕಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

ಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

“ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೇ ಬಿಜೆಪಿ ನಾಯಕರು ದೇಶಾದ್ಯಂತ ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ?” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಉಂಟಾದ ಕೋಮು ದಳ್ಳುರಿ ಮತ್ತು ಅವರು ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಇಟ್ಟ ಹೆಜ್ಜೆಗಳನ್ನು ಮುಖ್ಯವಾಗಿಟ್ಟುಕೊಂಡು ಬಿಬಿಸಿ ರೂಪಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಪ್ರಧಾನಿ ನರೇಂದ್ರಮೋದಿಯವರ ಕುರಿತು ಬಿಬಿಸಿ ತಯಾರಿಸಿದ್ದ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಇದೇ ರೀತಿ ಪ್ರತಿಪಕ್ಷದ ನಾಯಕರ ಚಾರಿತ್ರ್ಯಹನನ ಮಾಡದಂತೆಯೂ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಬೇಕಲ್ಲವೇ?” ಎಂದು ಕೇಳಿದ್ದಾರೆ.

“ಕಳೆದ ಎಂಟು ವರ್ಷಗಳಿಂದ ಬಿಜೆಪಿ ನಾಯಕರು ನನ್ನ ವಿರುದ್ದ ಸುಳ್ಳಿನ ಕಂತೆಗಳ ಅಪಪ್ರಚಾರ ಮಾಡಿದ್ದಾರೆ, ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ, ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ. ಇದು ಕರ್ನಾಟಕ ಮತ್ತು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ?” ಎಂದಿದ್ದಾರೆ.

“ನನ್ನ ವಿರುದ್ದ ಯಾರೋ ಅನಾಮಧೇಯರು ಸುಳ್ಳಿನ ಕಂತೆಗಳ ಪುಸ್ತಕ ಬರೆಯುತ್ತಾರೆ, ಆ ಪುಸ್ತಕವನ್ನು ಸಚಿವರೊಬ್ಬರ ಅಧ್ಯಕ್ಷತೆಯಲ್ಲಿ ಬಿಡುಗಡೆ ಗೊಳಿಸಲು ಸಮಾರಂಭ ಆಯೋಜಿಸುತ್ತಾರೆ. ಇಂತಹ ಕುಚೇಷ್ಠೆ-ಕುಚೋದ್ಯಗಳನ್ನು ಬೆಂಬಲಿಸುವವರಿಗೆ ವಿಶ್ವಾಸಾರ್ಹ ಹಿನ್ನೆಲೆಯ ಬಿಬಿಸಿ ಮಾಧ್ಯಮ ಸಂಸ್ಥೆಯನ್ನು ವಿರೋಧಿಸುವ ಯಾವ ನೈತಿಕತೆ ಇದೆ?” ಎಂದು ಕಟುಕಿದ್ದಾರೆ.

ನಿರ್ಬಂಧಕ್ಕೆ ದೇಶದ ವಿವಿಧೆಡೆ ಆಕ್ರೋಶ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಬಿಬಿಸಿ ತಯಾರಿಸಿರುವ, ‘ಇಂಡಿಯಾ – ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರದ ವಿರುದ್ಧ ವಿಧಿಸಿದ ಸೆನ್ಸಾರ್ಶಿಪ್ ಅನ್ನು ವಿರೋಧಿಸಿ, ಹಲವಾರು ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶನಗಳನ್ನು ಆಯೋಜಿಸುತ್ತಿವೆ.

ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ (EFLU) ಮತ್ತು ಹೈದರಾಬಾದ್ ವಿಶ್ವವಿದ್ಯಾಲಯ (UoH) ವಿದ್ಯಾರ್ಥಿ ಸಂಘಟನೆಗಳು ತಮ್ಮ ಕ್ಯಾಂಪಸ್ ಆವರಣದಲ್ಲಿ ನಿಷೇಧಿತ ಸಾಕ್ಷ್ಯಚಿತ್ರವನ್ನು ವೀಕ್ಷಿಸಿವೆ.

ಸುಮಾರು 60-70 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ತಮ್ಮ ಸೆಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು ಎಂದು EFLU ನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾರ್ಯಕ್ರಮವನ್ನು  ಪೂರ್ವಸಿದ್ಧತೆಯಿಲ್ಲದೆ ಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತವು ತಡೆಯಬಹುದಾಗಿದ್ದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಅದೇ ರೀತಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕವು ಗುರುವಾರ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಇದಕ್ಕೆ ಪ್ರತೀಕಾರವಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಕ್ಯಾಂಪಸ್‌ನ ಬೇರೆ ಸ್ಥಳದಲ್ಲಿ ದಿ ಕಾಶ್ಮೀರ ಫೈಲ್ಸ್ ಅನ್ನು ಪ್ರದರ್ಶಿಸಿದರು. ಎರಡು ಪ್ರದರ್ಶನಗಳೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.

ಇದಕ್ಕೂ ಮೊದಲು, ಫ್ರಟರ್ನಿಟಿ ಮೂವ್‌ಮೆಂಟ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...