Homeಕರ್ನಾಟಕಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

ಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

“ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೇ ಬಿಜೆಪಿ ನಾಯಕರು ದೇಶಾದ್ಯಂತ ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ?” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಉಂಟಾದ ಕೋಮು ದಳ್ಳುರಿ ಮತ್ತು ಅವರು ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಇಟ್ಟ ಹೆಜ್ಜೆಗಳನ್ನು ಮುಖ್ಯವಾಗಿಟ್ಟುಕೊಂಡು ಬಿಬಿಸಿ ರೂಪಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಪ್ರಧಾನಿ ನರೇಂದ್ರಮೋದಿಯವರ ಕುರಿತು ಬಿಬಿಸಿ ತಯಾರಿಸಿದ್ದ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಇದೇ ರೀತಿ ಪ್ರತಿಪಕ್ಷದ ನಾಯಕರ ಚಾರಿತ್ರ್ಯಹನನ ಮಾಡದಂತೆಯೂ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಬೇಕಲ್ಲವೇ?” ಎಂದು ಕೇಳಿದ್ದಾರೆ.

“ಕಳೆದ ಎಂಟು ವರ್ಷಗಳಿಂದ ಬಿಜೆಪಿ ನಾಯಕರು ನನ್ನ ವಿರುದ್ದ ಸುಳ್ಳಿನ ಕಂತೆಗಳ ಅಪಪ್ರಚಾರ ಮಾಡಿದ್ದಾರೆ, ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ, ನನ್ನ ಹೆಸರನ್ನೇ ತಿರುಚಿ ಗೇಲಿ ಮಾಡಿದ್ದಾರೆ. ಇದು ಕರ್ನಾಟಕ ಮತ್ತು ಕನ್ನಡಿಗರಿಗೆ ಮಾಡುವ ಅವಮಾನವಲ್ಲವೇ?” ಎಂದಿದ್ದಾರೆ.

“ನನ್ನ ವಿರುದ್ದ ಯಾರೋ ಅನಾಮಧೇಯರು ಸುಳ್ಳಿನ ಕಂತೆಗಳ ಪುಸ್ತಕ ಬರೆಯುತ್ತಾರೆ, ಆ ಪುಸ್ತಕವನ್ನು ಸಚಿವರೊಬ್ಬರ ಅಧ್ಯಕ್ಷತೆಯಲ್ಲಿ ಬಿಡುಗಡೆ ಗೊಳಿಸಲು ಸಮಾರಂಭ ಆಯೋಜಿಸುತ್ತಾರೆ. ಇಂತಹ ಕುಚೇಷ್ಠೆ-ಕುಚೋದ್ಯಗಳನ್ನು ಬೆಂಬಲಿಸುವವರಿಗೆ ವಿಶ್ವಾಸಾರ್ಹ ಹಿನ್ನೆಲೆಯ ಬಿಬಿಸಿ ಮಾಧ್ಯಮ ಸಂಸ್ಥೆಯನ್ನು ವಿರೋಧಿಸುವ ಯಾವ ನೈತಿಕತೆ ಇದೆ?” ಎಂದು ಕಟುಕಿದ್ದಾರೆ.

ನಿರ್ಬಂಧಕ್ಕೆ ದೇಶದ ವಿವಿಧೆಡೆ ಆಕ್ರೋಶ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಬಿಬಿಸಿ ತಯಾರಿಸಿರುವ, ‘ಇಂಡಿಯಾ – ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರದ ವಿರುದ್ಧ ವಿಧಿಸಿದ ಸೆನ್ಸಾರ್ಶಿಪ್ ಅನ್ನು ವಿರೋಧಿಸಿ, ಹಲವಾರು ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶನಗಳನ್ನು ಆಯೋಜಿಸುತ್ತಿವೆ.

ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ (EFLU) ಮತ್ತು ಹೈದರಾಬಾದ್ ವಿಶ್ವವಿದ್ಯಾಲಯ (UoH) ವಿದ್ಯಾರ್ಥಿ ಸಂಘಟನೆಗಳು ತಮ್ಮ ಕ್ಯಾಂಪಸ್ ಆವರಣದಲ್ಲಿ ನಿಷೇಧಿತ ಸಾಕ್ಷ್ಯಚಿತ್ರವನ್ನು ವೀಕ್ಷಿಸಿವೆ.

ಸುಮಾರು 60-70 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ತಮ್ಮ ಸೆಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು ಎಂದು EFLU ನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾರ್ಯಕ್ರಮವನ್ನು  ಪೂರ್ವಸಿದ್ಧತೆಯಿಲ್ಲದೆ ಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತವು ತಡೆಯಬಹುದಾಗಿದ್ದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಅದೇ ರೀತಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕವು ಗುರುವಾರ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಇದಕ್ಕೆ ಪ್ರತೀಕಾರವಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಕ್ಯಾಂಪಸ್‌ನ ಬೇರೆ ಸ್ಥಳದಲ್ಲಿ ದಿ ಕಾಶ್ಮೀರ ಫೈಲ್ಸ್ ಅನ್ನು ಪ್ರದರ್ಶಿಸಿದರು. ಎರಡು ಪ್ರದರ್ಶನಗಳೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.

ಇದಕ್ಕೂ ಮೊದಲು, ಫ್ರಟರ್ನಿಟಿ ಮೂವ್‌ಮೆಂಟ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...