Homeಕರ್ನಾಟಕರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? - ಡಿ.ಕೆ. ಶಿವಕುಮಾರ್‌ ಪ್ರಶ್ನೆ

ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? – ಡಿ.ಕೆ. ಶಿವಕುಮಾರ್‌ ಪ್ರಶ್ನೆ

- Advertisement -
- Advertisement -

ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? ಮರಾಠರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಸಮುದಾಯದವರ ಏಳಿಗೆಗೆ ಹಾಗೂ ಜನರಿಗೆ ಒಳ್ಳೆಯದು ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಆದರೆ ಅದರ ಹಿಂದೆ ಸಮಾಜವನ್ನು ವಿಭಜಿಸುವ ಉದ್ದೇಶ ಇರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಎಲ್ಲ ಸಮುದಾಯದ ಜನರನ್ನು ನಾವು ಗೌರವಯುತವಾಗಿ ನೋಡಬೇಕು ಎಂದು ಸಂವಿಧಾನದಲ್ಲಿ ತಿಳಿಸಿದೆ. ಇಷ್ಟು ದಿನ ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತಿರಲಿಲ್ಲವೇ? ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? ಮರಾಠರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಸಮುದಾಯದವರ ಏಳಿಗೆಗೆ ಹಾಗೂ ಜನರಿಗೆ ಒಳ್ಳೆಯದು ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಆದರೆ ಅದರ ಹಿಂದೆ ಸಮಾಜವನ್ನು ವಿಭಜಿಸುವ ಉದ್ದೇಶ ಇರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ 

“ಜಾತಿ, ಸಮುದಾಯದ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು. ಬಿಜೆಪಿ ಮೊದಲಿನಿಂದಲೂ ಸಮಾಜ ಒಡೆಯುವ ಕೆಲಸವನ್ನೇ ಮಾಡಿಕೊಂಡು ಬರುತ್ತಿದೆ. ಮರಾಠಿಗರನ್ನು ಪ್ರತ್ಯೇಕವಾಗಿ ನೋಡುವ ಅಗತ್ಯ ಏನಿದೆ? ಈ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದು, ಸದ್ಯ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

’ಚುನಾವಣೆ ಎದುರಾದ ರಾಜ್ಯಗಳು ಕೇಂದ್ರ ಸರ್ಕಾರದ ಆದ್ಯತೆಯೇ ಹೊರತು ಕರ್ನಾಟಕ ರಾಜ್ಯವಲ್ಲ’

ರಾಜ್ಯ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದರೂ ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ಚುನಾವಣೆ ಎದುರಾದ ಬಿಹಾರ, ಪಶ್ಚಿಮ ಬಂಗಾಳ ರಾಜ್ಯಗಳು ಕೇಂದ್ರ ಸರ್ಕಾರದ ಆದ್ಯತೆಯೇ ಹೊರತು ಕರ್ನಾಟಕ ರಾಜ್ಯವಲ್ಲ. ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರದ ಬಳಿ ಮಾತನಾಡಲು ಬಿಜೆಪಿ ನಾಯಕರಿಗೆ ಧ್ವನಿ ಇಲ್ಲವಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

“ನಮ್ಮ ಸರ್ಕಾರ ಇದ್ದಾಗಲೂ ಅವರನ್ನು ಕರೆದುಕೊಂಡು ಹೋದಾಗ ಬಾಯಿ ಬಿಡುತ್ತಿರಲಿಲ್ಲ. ಕೇಂದ್ರದಿಂದ ನೆರವು ಪಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿಮಗೆ ಕೇಳಲು ಆಗದಿದ್ದರೆ ನಮ್ಮನ್ನು ಕರೆದುಕೊಂಡು ಹೋಗಿ. ನಾವು ಕೇಳುತ್ತೇವೆ ಎಂದು ನಮ್ಮ ವಿರೋಧ ಪಕ್ಷದ ನಾಯಕರು ಕೇಳುತ್ತಿದ್ದಾರೆ. ಅದನ್ನೂ ಮಾಡುತ್ತಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...