Homeಅಂತರಾಷ್ಟ್ರೀಯಜನರ ತೆರಿಗೆ ಹಣದ ಪೋಲು: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಮನೆಗೆ ದುಬಾರಿ ಕಲಾಕೃತಿ ಖರೀದಿಗೆ...

ಜನರ ತೆರಿಗೆ ಹಣದ ಪೋಲು: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಮನೆಗೆ ದುಬಾರಿ ಕಲಾಕೃತಿ ಖರೀದಿಗೆ ಆಕ್ಷೇಪ

- Advertisement -
- Advertisement -

ರಿಷಿ ಸುನಕ್‌ರವರು ಇಂಗ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಒಂದು ತಿಂಗಳಿನಲ್ಲಿ ವಿವಾದಕ್ಕೆ ಗುರಿಯಾಗಿದ್ದಾರೆ. ಹಿಂದಿನ ಪ್ರಧಾನಿ ಲಿಜ್ ಟ್ರಸ್‌ರವರು ದೇಶದ ಹಣದುಬ್ಬರ, ಬೆಲೆ ಏರಿಕೆ ಮತ್ತು ನಿರುದ್ಯೋಗವನ್ನು ಶಮನಗೊಳಿಸಲು ವಿಫಲವಾದ ಕಾರಣಕ್ಕೆ ರಾಜೀನಾಮೆ ನೀಡಿದ್ದರು. ಆದರೆ ನೂತನ ಪ್ರಧಾನಿಯಾದ ರಿಷಿ ಸುನಕ್ ಸಹ ಮೇಲಿನ ಸಮಸ್ಯೆಗಳನ್ನು ಬಗೆಹರಿಸುವ ಬದಲು ದೇಶ ಸಂಕಷ್ಟದಲ್ಲಿರುವಾಗ ತೆರಿಗೆ ಹಣದಿಂದ 1.3 ಮಿಲಿಯನ್ ಪೌಂಡ್ ವೆಚ್ಚದ ಶಿಲ್ಪಾ ಕಲಾಕೃತಿ ಖರೀದಿಸಿರುವುದು ಟೀಕೆಗೆ ಗುರಿಯಾಗಿದೆ.

ಖ್ಯಾತ ಕಲಾವಿದ ಹೆನ್ರಿ ಮೂರ್‌ರವರು 1980 ರಲ್ಲಿ ಸೃಷ್ಟಿಸಿದ್ದ “ವರ್ಕಿಂಗ್ ಮಾಡೆಲ್ ಫಾರ್ ಸೀಟೆಡ್ ವುಮನ್” ಹೆಸರಿನ ಅಮೂರ್ತ ಕಂಚಿನ ಶಿಲ್ಪ ಕಲಾಕೃತಿಯನ್ನು ಹರಾಜಿನಲ್ಲಿ ತೆರಿಗೆದಾರರ ಹಣದಿಂದ ಇಂಗ್ಲೆಂಡ್ ಸರ್ಕಾರಿ ಕಲಾ ಸಂಗ್ರಹವು ಕೊಂಡುಕೊಂಡಿದೆ. ಅದನ್ನು ಇದೀಗ ನೂತನ ಪ್ರಧಾನಿ ರಿಷಿ ಸುನಕ್‌ರವರ ಅಧಿಕೃತ ನಿವಾಸ 10 ಡೌನಿಂಗ್‌ ಸ್ಟ್ರೀಟ್‌ನ ತೋಟದಲ್ಲಿರಿಸಲಾಗಿದೆ ಎಂದು ಇಂಗ್ಲೆಂಡ್‌ನ ಸನ್ ಪತ್ರಿಕೆ ವರದಿ ಮಾಡಿದೆ.

ಹೆಚ್ಚುತ್ತಿರುವ ಹಣದುಬ್ಬರ, ಬೆಲೆಏರಿಕೆ ಮತ್ತು ಸಾರ್ವಜನಿಕ ನಿಧಿಯ ವೆಚ್ಚ ಕಡಿತ ಕ್ರಮಗಳ ಮೂಲಕ ದೇಶವು ಹೆಣಗಾಡುತ್ತಿರುವ ಸಮಯದಲ್ಲಿ ಇದು ಅನಗತ್ಯ ಎಂಬ ಟೀಕೆಗಳು ಕೇಳಿಬಂದಿವೆ.

ಇದು ಮೂರ್‌ರವರ ಅತ್ಯುತ್ತಮ ಶಿಲ್ಪಗಳಲ್ಲಿ ಒಂದು ಎಂಬುದು ಸರಿ. ಆದರೆ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ತೆರಿಗೆದಾರರ ಹಣದಿಂದ ಅದನ್ನು ಖರೀದಿಸುವುದು ಅತಿರಂಜಿತ ಕ್ರಿಯೆಯಾಗಿದೆ ಎಂದು ಅಲ್ಲಿನ ತಜ್ಞರು ಅಭಿಪ್ರಾಯಪಟ್ಟಿದ್ದಾರೆಂದು ದಿ ಸನ್ ಪತ್ರಿಕೆ ವರದಿ ಮಾಡಿದೆ.

ಇಂಗ್ಲೆಂಡ್ ಆರ್ಥಿಕ ಕುಸಿತದಿಂದ ಬಳಲುತ್ತಿದೆ. ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಆರ್ಥಿಕ ನೀತಿಗಳ ವಿರುದ್ಧ ಜನತೆ ಸಿಟ್ಟಿಗೆದ್ದಿದ್ದರು. ಆನಂತರ ಬಂದ ಲಿಜ್ ಟ್ರಸ್ ಸಹ ನಿಭಾಯಿಸಲಾಗದೆ ರಾಜೀನಾಮೆ ನೀಡಿದ್ದರು. ಆರ್ಥಿಕತೆ ಬಗ್ಗೆ ತಿಳಿವಳಿಕೆ ಇದೆ ಎನ್ನಲಾಗುವ ರಿಷಿ ಸುನಕ್ ಸದ್ಯ ಪ್ರಧಾನಿಯಾಗಿದ್ದಾರೆ. ಆದರೆ ಅವರ ಈ ಮೊದಲ ನಡೆಗೆ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ; ರಿಶಿ ಸುನುಕ್ ಬಡತನ, ಜನಾಂಗೀಯವಾದ ಹೆಚ್ಚಿಸುತ್ತಾರೆ ಮತ್ತು ಹಿಂದೂತ್ವ ಫ಼್ಯಾಸಿಸಂ ಅನ್ನು ಗಟ್ಟಿಗೊಳಿಸುತ್ತಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರಿಷಿ ಸುನಕ್ ಗೂ ನಮ್ಮನ್ನು ಆಳುವವರಿಗೂ ಯಾವುದೇ ವ್ಯತ್ಯಾಸ ಇಲ್ಲ! “ಇವ ನಮ್ಮವ” ಎನ್ನಲು ಈತ ಹಿಂದೂ ಎಂಬುದೊಂದೇ! ಬಹುಷಃ, ಭಾರತೀಯ ಮೂಲದವ ಮಾತ್ರ ಈ ರೀತಿ, ಮನೆ ಹೊತ್ತಿ ಉರಿಯುವಾಗ, ಗಳ ಹಿರಿದು ಬೆಂಕಿ ಕಾಯಿಸಿಕೊಳ್ಳುವ ಭಾರತೀಯ ಮೂಲದವ!

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...