Homeಅಂತರಾಷ್ಟ್ರೀಯಜನರ ತೆರಿಗೆ ಹಣದ ಪೋಲು: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಮನೆಗೆ ದುಬಾರಿ ಕಲಾಕೃತಿ ಖರೀದಿಗೆ...

ಜನರ ತೆರಿಗೆ ಹಣದ ಪೋಲು: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಮನೆಗೆ ದುಬಾರಿ ಕಲಾಕೃತಿ ಖರೀದಿಗೆ ಆಕ್ಷೇಪ

- Advertisement -
- Advertisement -

ರಿಷಿ ಸುನಕ್‌ರವರು ಇಂಗ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಒಂದು ತಿಂಗಳಿನಲ್ಲಿ ವಿವಾದಕ್ಕೆ ಗುರಿಯಾಗಿದ್ದಾರೆ. ಹಿಂದಿನ ಪ್ರಧಾನಿ ಲಿಜ್ ಟ್ರಸ್‌ರವರು ದೇಶದ ಹಣದುಬ್ಬರ, ಬೆಲೆ ಏರಿಕೆ ಮತ್ತು ನಿರುದ್ಯೋಗವನ್ನು ಶಮನಗೊಳಿಸಲು ವಿಫಲವಾದ ಕಾರಣಕ್ಕೆ ರಾಜೀನಾಮೆ ನೀಡಿದ್ದರು. ಆದರೆ ನೂತನ ಪ್ರಧಾನಿಯಾದ ರಿಷಿ ಸುನಕ್ ಸಹ ಮೇಲಿನ ಸಮಸ್ಯೆಗಳನ್ನು ಬಗೆಹರಿಸುವ ಬದಲು ದೇಶ ಸಂಕಷ್ಟದಲ್ಲಿರುವಾಗ ತೆರಿಗೆ ಹಣದಿಂದ 1.3 ಮಿಲಿಯನ್ ಪೌಂಡ್ ವೆಚ್ಚದ ಶಿಲ್ಪಾ ಕಲಾಕೃತಿ ಖರೀದಿಸಿರುವುದು ಟೀಕೆಗೆ ಗುರಿಯಾಗಿದೆ.

ಖ್ಯಾತ ಕಲಾವಿದ ಹೆನ್ರಿ ಮೂರ್‌ರವರು 1980 ರಲ್ಲಿ ಸೃಷ್ಟಿಸಿದ್ದ “ವರ್ಕಿಂಗ್ ಮಾಡೆಲ್ ಫಾರ್ ಸೀಟೆಡ್ ವುಮನ್” ಹೆಸರಿನ ಅಮೂರ್ತ ಕಂಚಿನ ಶಿಲ್ಪ ಕಲಾಕೃತಿಯನ್ನು ಹರಾಜಿನಲ್ಲಿ ತೆರಿಗೆದಾರರ ಹಣದಿಂದ ಇಂಗ್ಲೆಂಡ್ ಸರ್ಕಾರಿ ಕಲಾ ಸಂಗ್ರಹವು ಕೊಂಡುಕೊಂಡಿದೆ. ಅದನ್ನು ಇದೀಗ ನೂತನ ಪ್ರಧಾನಿ ರಿಷಿ ಸುನಕ್‌ರವರ ಅಧಿಕೃತ ನಿವಾಸ 10 ಡೌನಿಂಗ್‌ ಸ್ಟ್ರೀಟ್‌ನ ತೋಟದಲ್ಲಿರಿಸಲಾಗಿದೆ ಎಂದು ಇಂಗ್ಲೆಂಡ್‌ನ ಸನ್ ಪತ್ರಿಕೆ ವರದಿ ಮಾಡಿದೆ.

ಹೆಚ್ಚುತ್ತಿರುವ ಹಣದುಬ್ಬರ, ಬೆಲೆಏರಿಕೆ ಮತ್ತು ಸಾರ್ವಜನಿಕ ನಿಧಿಯ ವೆಚ್ಚ ಕಡಿತ ಕ್ರಮಗಳ ಮೂಲಕ ದೇಶವು ಹೆಣಗಾಡುತ್ತಿರುವ ಸಮಯದಲ್ಲಿ ಇದು ಅನಗತ್ಯ ಎಂಬ ಟೀಕೆಗಳು ಕೇಳಿಬಂದಿವೆ.

ಇದು ಮೂರ್‌ರವರ ಅತ್ಯುತ್ತಮ ಶಿಲ್ಪಗಳಲ್ಲಿ ಒಂದು ಎಂಬುದು ಸರಿ. ಆದರೆ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ತೆರಿಗೆದಾರರ ಹಣದಿಂದ ಅದನ್ನು ಖರೀದಿಸುವುದು ಅತಿರಂಜಿತ ಕ್ರಿಯೆಯಾಗಿದೆ ಎಂದು ಅಲ್ಲಿನ ತಜ್ಞರು ಅಭಿಪ್ರಾಯಪಟ್ಟಿದ್ದಾರೆಂದು ದಿ ಸನ್ ಪತ್ರಿಕೆ ವರದಿ ಮಾಡಿದೆ.

ಇಂಗ್ಲೆಂಡ್ ಆರ್ಥಿಕ ಕುಸಿತದಿಂದ ಬಳಲುತ್ತಿದೆ. ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಆರ್ಥಿಕ ನೀತಿಗಳ ವಿರುದ್ಧ ಜನತೆ ಸಿಟ್ಟಿಗೆದ್ದಿದ್ದರು. ಆನಂತರ ಬಂದ ಲಿಜ್ ಟ್ರಸ್ ಸಹ ನಿಭಾಯಿಸಲಾಗದೆ ರಾಜೀನಾಮೆ ನೀಡಿದ್ದರು. ಆರ್ಥಿಕತೆ ಬಗ್ಗೆ ತಿಳಿವಳಿಕೆ ಇದೆ ಎನ್ನಲಾಗುವ ರಿಷಿ ಸುನಕ್ ಸದ್ಯ ಪ್ರಧಾನಿಯಾಗಿದ್ದಾರೆ. ಆದರೆ ಅವರ ಈ ಮೊದಲ ನಡೆಗೆ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ; ರಿಶಿ ಸುನುಕ್ ಬಡತನ, ಜನಾಂಗೀಯವಾದ ಹೆಚ್ಚಿಸುತ್ತಾರೆ ಮತ್ತು ಹಿಂದೂತ್ವ ಫ಼್ಯಾಸಿಸಂ ಅನ್ನು ಗಟ್ಟಿಗೊಳಿಸುತ್ತಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರಿಷಿ ಸುನಕ್ ಗೂ ನಮ್ಮನ್ನು ಆಳುವವರಿಗೂ ಯಾವುದೇ ವ್ಯತ್ಯಾಸ ಇಲ್ಲ! “ಇವ ನಮ್ಮವ” ಎನ್ನಲು ಈತ ಹಿಂದೂ ಎಂಬುದೊಂದೇ! ಬಹುಷಃ, ಭಾರತೀಯ ಮೂಲದವ ಮಾತ್ರ ಈ ರೀತಿ, ಮನೆ ಹೊತ್ತಿ ಉರಿಯುವಾಗ, ಗಳ ಹಿರಿದು ಬೆಂಕಿ ಕಾಯಿಸಿಕೊಳ್ಳುವ ಭಾರತೀಯ ಮೂಲದವ!

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....