Homeಕರ್ನಾಟಕನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

ನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

- Advertisement -
- Advertisement -

ಭಾರತ ಸಂವಿಧಾನದ ಪ್ರಸ್ತಾವನೆಯು ದೇಶದ ನಿಜ ಸ್ವರೂಪವನ್ನು ಸಂಕ್ಷಿಪ್ತವಾಗಿ ಹೇಳುತ್ತದೆ. ‘ನಮಗೆ ನಾವೇ ಅರ್ಪಿಸಿಕೊಂಡಿರುವ ಈ ಸಂವಿಧಾನ’ಕ್ಕೆ ಅಪಚಾರ ಎಸಗುವ ಕೃತ್ಯಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಸಂವಿಧಾನದ ಮಹತ್ವವನ್ನು ವಿವಿಧ ಕಲಾ ಮಾಧ್ಯಮಗಳ ಮೂಲಕ ತಿಳಿಸುವ ಪ್ರಯತ್ನಗಾಗುತ್ತಿವೆ. ಸಂವಿಧಾನ ಪೀಠಿಕೆಯನ್ನು ಹಾಡಾಗಿ ಪ್ರಸ್ತುಪಡಿಸುವ ಪ್ರಯೋಗಗಳು ಇತ್ತೀಚಿನ ವರ್ಷಗಳಲ್ಲಿ ಚಾಲನೆ ಪಡೆದಿವೆ.

“ಸಂವಿಧಾನವನ್ನು ನಾವು ರಕ್ಷಿಸಿದರೆ ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ” ಎಂಬ ಮಾತು ಜನಜನಿತವಾಗಿದೆ. ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಅನೇಕರು ಹಲವು ವಿಧದಲ್ಲಿ ಕರ್ನಾಟಕದಲ್ಲೂ ಮಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಅವರ ‘ಸಂವಿಧಾನ ಓದು’ ಕೃತಿ ಒಂದು ಆಂದೋಲನದ ಸ್ವರೂಪವನ್ನೇ ಪಡೆದಿದೆ. ಪೀಠಿಕಾ ಭಾಗವನ್ನು ಶಾಲಾ ಮಕ್ಕಳಿಗೆ ಬೋಧಿಸಲಾಗುತ್ತಿದೆ. ಬಹುತೇಕ ಕಾರ್ಯಕ್ರಮಗಳ ಆರಂಭದಲ್ಲಿ ಪ್ರಸ್ತಾವನೆಯನ್ನು ಓದಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಪೀಠಿಕಾ ಭಾಗವನ್ನು ಹಾಡಾಗಿ ಪ್ರಸ್ತುತಪಡಿಸುವ ಕೆಲಸವನ್ನು ಹಲವು ಸಂಗೀತಗಾರರು ಮಾಡುತ್ತಿದ್ದಾರೆ.

ಚಿಂತನ್‌ ವಿಕಾಸ್‌ ಪ್ರಯೋಗಕ್ಕೆ ಮೆಚ್ಚುಗೆ

ಕನ್ನಡದ ಯುವ ಗಾಯಕ ಚಿಂತನ್‌ ವಿಕಾಸ್ ಅವರು ಇತ್ತೀಚೆಗೆ ಪೀಠಿಕಾ ಭಾಗವನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿದ್ದಾರೆ. ಚಿಂತನ್‌ ರಾಗ ಸಂಯೋಜನೆ ಮಾಡಿ, ಅವರೇ ಹಾಡಿರುವ ಪೀಠಿಕಾ ಭಾಗವನ್ನು ‘ಈದಿನ.ಕಾಂ’ ಪ್ರಸಾರ ಮಾಡಿದೆ. ‘ಈ’ ವಿಡಿಯೊವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪೀಠಿಕೆಯನ್ನು ಚಿಂತನ್‌ ಹಾಡಿದ್ದಾರೆ.

ಚಿಂತನ್ ವಿಕಾಸ್‌

ಪಿಚ್ಚಳ್ಳಿ ಶ್ರೀನಿವಾಸ್ ಗಾಯನ

ದಲಿತ ಚಳವಳಿಯ ಹೋರಾಟದ ಗೀತೆಗೆಳಿಗೆ ಧ್ವನಿ ನೀಡಿದವರಲ್ಲಿ ಒಬ್ಬರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಇತ್ತೀಚೆಗೆ ಸಂವಿಧಾನದ ಪೀಠಿಕಾ ಭಾಗವನ್ನು ಹಾಡಿದ್ದಾರೆ. ರಾಗ ಸಂಯೋಜನೆ ಹಾಗೂ ಗಾಯನವನ್ನು ಪಿಚ್ಚಳ್ಳಿಯವರೇ ಮಾಡಿದ್ದು, ಸಾರಂಗ ಆಡಿಯೊ ಮಾಲೂರು (ಎಸ್‌.ಪಿ.ಚಕ್ರವರ್ತಿ) ವತಿಯಿಂದ ಧ್ವನಿಮುದ್ರಣ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ದಿನಗಳ ಹಿಂದೆ ಪಿಚ್ಚಳ್ಳಿಯವರ ಗಾಯನ ವೈರಲ್ ಆಗಿತ್ತು.

ಪಿಚ್ಚಳ್ಳಿ ಶ್ರೀನಿವಾಸ್‌

ಇಂಗ್ಲಿಷ್ ಪ್ರಯೋಗಕ್ಕೆ ಭಾರೀ ಮೆಚ್ಚುಗೆ

ಇಂಗ್ಲಿಷ್‌ನಲ್ಲಿ ಪೀಠಿಕಾ ಭಾಗವನ್ನು ಗಾಯನ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಭಾರತದ ವೈವಿಧ್ಯತೆಯನ್ನು ಕಟ್ಟಿಕೊಡುವ ದೃಶ್ಯಗಳನ್ನು ವಿಡಿಯೊದಲ್ಲಿ ಬಳಸಲಾಗಿದೆ. ಮಂಜಿಲ್ ಮಿಸ್ಟಿಕ್ಸ್ ಮಾಡಿರುವ ರಾಗ ಸಂಯೋಜನೆಗೆ, ಮನೀಶ್ ಸಂಗೀತ ನಿರ್ಮಾಣ ಮಾಡಿದ್ದಾರೆ.

ಹಿಂದಿ ಭಾಷೆಯಲ್ಲಿ ಸಂವಿಧಾನದ ಪೀಠಿಕಾ ಭಾಗವನ್ನು ಹಾಡುವ ಪ್ರಯೋಗಗಳಾಗಿರುವುದನ್ನು ಗಮನಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...