Homeಕರ್ನಾಟಕನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

ನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

- Advertisement -
- Advertisement -

ಭಾರತ ಸಂವಿಧಾನದ ಪ್ರಸ್ತಾವನೆಯು ದೇಶದ ನಿಜ ಸ್ವರೂಪವನ್ನು ಸಂಕ್ಷಿಪ್ತವಾಗಿ ಹೇಳುತ್ತದೆ. ‘ನಮಗೆ ನಾವೇ ಅರ್ಪಿಸಿಕೊಂಡಿರುವ ಈ ಸಂವಿಧಾನ’ಕ್ಕೆ ಅಪಚಾರ ಎಸಗುವ ಕೃತ್ಯಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಸಂವಿಧಾನದ ಮಹತ್ವವನ್ನು ವಿವಿಧ ಕಲಾ ಮಾಧ್ಯಮಗಳ ಮೂಲಕ ತಿಳಿಸುವ ಪ್ರಯತ್ನಗಾಗುತ್ತಿವೆ. ಸಂವಿಧಾನ ಪೀಠಿಕೆಯನ್ನು ಹಾಡಾಗಿ ಪ್ರಸ್ತುಪಡಿಸುವ ಪ್ರಯೋಗಗಳು ಇತ್ತೀಚಿನ ವರ್ಷಗಳಲ್ಲಿ ಚಾಲನೆ ಪಡೆದಿವೆ.

“ಸಂವಿಧಾನವನ್ನು ನಾವು ರಕ್ಷಿಸಿದರೆ ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ” ಎಂಬ ಮಾತು ಜನಜನಿತವಾಗಿದೆ. ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಅನೇಕರು ಹಲವು ವಿಧದಲ್ಲಿ ಕರ್ನಾಟಕದಲ್ಲೂ ಮಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಅವರ ‘ಸಂವಿಧಾನ ಓದು’ ಕೃತಿ ಒಂದು ಆಂದೋಲನದ ಸ್ವರೂಪವನ್ನೇ ಪಡೆದಿದೆ. ಪೀಠಿಕಾ ಭಾಗವನ್ನು ಶಾಲಾ ಮಕ್ಕಳಿಗೆ ಬೋಧಿಸಲಾಗುತ್ತಿದೆ. ಬಹುತೇಕ ಕಾರ್ಯಕ್ರಮಗಳ ಆರಂಭದಲ್ಲಿ ಪ್ರಸ್ತಾವನೆಯನ್ನು ಓದಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಪೀಠಿಕಾ ಭಾಗವನ್ನು ಹಾಡಾಗಿ ಪ್ರಸ್ತುತಪಡಿಸುವ ಕೆಲಸವನ್ನು ಹಲವು ಸಂಗೀತಗಾರರು ಮಾಡುತ್ತಿದ್ದಾರೆ.

ಚಿಂತನ್‌ ವಿಕಾಸ್‌ ಪ್ರಯೋಗಕ್ಕೆ ಮೆಚ್ಚುಗೆ

ಕನ್ನಡದ ಯುವ ಗಾಯಕ ಚಿಂತನ್‌ ವಿಕಾಸ್ ಅವರು ಇತ್ತೀಚೆಗೆ ಪೀಠಿಕಾ ಭಾಗವನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿದ್ದಾರೆ. ಚಿಂತನ್‌ ರಾಗ ಸಂಯೋಜನೆ ಮಾಡಿ, ಅವರೇ ಹಾಡಿರುವ ಪೀಠಿಕಾ ಭಾಗವನ್ನು ‘ಈದಿನ.ಕಾಂ’ ಪ್ರಸಾರ ಮಾಡಿದೆ. ‘ಈ’ ವಿಡಿಯೊವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪೀಠಿಕೆಯನ್ನು ಚಿಂತನ್‌ ಹಾಡಿದ್ದಾರೆ.

ಚಿಂತನ್ ವಿಕಾಸ್‌

ಪಿಚ್ಚಳ್ಳಿ ಶ್ರೀನಿವಾಸ್ ಗಾಯನ

ದಲಿತ ಚಳವಳಿಯ ಹೋರಾಟದ ಗೀತೆಗೆಳಿಗೆ ಧ್ವನಿ ನೀಡಿದವರಲ್ಲಿ ಒಬ್ಬರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಇತ್ತೀಚೆಗೆ ಸಂವಿಧಾನದ ಪೀಠಿಕಾ ಭಾಗವನ್ನು ಹಾಡಿದ್ದಾರೆ. ರಾಗ ಸಂಯೋಜನೆ ಹಾಗೂ ಗಾಯನವನ್ನು ಪಿಚ್ಚಳ್ಳಿಯವರೇ ಮಾಡಿದ್ದು, ಸಾರಂಗ ಆಡಿಯೊ ಮಾಲೂರು (ಎಸ್‌.ಪಿ.ಚಕ್ರವರ್ತಿ) ವತಿಯಿಂದ ಧ್ವನಿಮುದ್ರಣ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ದಿನಗಳ ಹಿಂದೆ ಪಿಚ್ಚಳ್ಳಿಯವರ ಗಾಯನ ವೈರಲ್ ಆಗಿತ್ತು.

ಪಿಚ್ಚಳ್ಳಿ ಶ್ರೀನಿವಾಸ್‌

ಇಂಗ್ಲಿಷ್ ಪ್ರಯೋಗಕ್ಕೆ ಭಾರೀ ಮೆಚ್ಚುಗೆ

ಇಂಗ್ಲಿಷ್‌ನಲ್ಲಿ ಪೀಠಿಕಾ ಭಾಗವನ್ನು ಗಾಯನ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಭಾರತದ ವೈವಿಧ್ಯತೆಯನ್ನು ಕಟ್ಟಿಕೊಡುವ ದೃಶ್ಯಗಳನ್ನು ವಿಡಿಯೊದಲ್ಲಿ ಬಳಸಲಾಗಿದೆ. ಮಂಜಿಲ್ ಮಿಸ್ಟಿಕ್ಸ್ ಮಾಡಿರುವ ರಾಗ ಸಂಯೋಜನೆಗೆ, ಮನೀಶ್ ಸಂಗೀತ ನಿರ್ಮಾಣ ಮಾಡಿದ್ದಾರೆ.

ಹಿಂದಿ ಭಾಷೆಯಲ್ಲಿ ಸಂವಿಧಾನದ ಪೀಠಿಕಾ ಭಾಗವನ್ನು ಹಾಡುವ ಪ್ರಯೋಗಗಳಾಗಿರುವುದನ್ನು ಗಮನಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...