Homeಕರ್ನಾಟಕನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

ನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

- Advertisement -
- Advertisement -

ಭಾರತ ಸಂವಿಧಾನದ ಪ್ರಸ್ತಾವನೆಯು ದೇಶದ ನಿಜ ಸ್ವರೂಪವನ್ನು ಸಂಕ್ಷಿಪ್ತವಾಗಿ ಹೇಳುತ್ತದೆ. ‘ನಮಗೆ ನಾವೇ ಅರ್ಪಿಸಿಕೊಂಡಿರುವ ಈ ಸಂವಿಧಾನ’ಕ್ಕೆ ಅಪಚಾರ ಎಸಗುವ ಕೃತ್ಯಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಸಂವಿಧಾನದ ಮಹತ್ವವನ್ನು ವಿವಿಧ ಕಲಾ ಮಾಧ್ಯಮಗಳ ಮೂಲಕ ತಿಳಿಸುವ ಪ್ರಯತ್ನಗಾಗುತ್ತಿವೆ. ಸಂವಿಧಾನ ಪೀಠಿಕೆಯನ್ನು ಹಾಡಾಗಿ ಪ್ರಸ್ತುಪಡಿಸುವ ಪ್ರಯೋಗಗಳು ಇತ್ತೀಚಿನ ವರ್ಷಗಳಲ್ಲಿ ಚಾಲನೆ ಪಡೆದಿವೆ.

“ಸಂವಿಧಾನವನ್ನು ನಾವು ರಕ್ಷಿಸಿದರೆ ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ” ಎಂಬ ಮಾತು ಜನಜನಿತವಾಗಿದೆ. ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಅನೇಕರು ಹಲವು ವಿಧದಲ್ಲಿ ಕರ್ನಾಟಕದಲ್ಲೂ ಮಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಅವರ ‘ಸಂವಿಧಾನ ಓದು’ ಕೃತಿ ಒಂದು ಆಂದೋಲನದ ಸ್ವರೂಪವನ್ನೇ ಪಡೆದಿದೆ. ಪೀಠಿಕಾ ಭಾಗವನ್ನು ಶಾಲಾ ಮಕ್ಕಳಿಗೆ ಬೋಧಿಸಲಾಗುತ್ತಿದೆ. ಬಹುತೇಕ ಕಾರ್ಯಕ್ರಮಗಳ ಆರಂಭದಲ್ಲಿ ಪ್ರಸ್ತಾವನೆಯನ್ನು ಓದಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಪೀಠಿಕಾ ಭಾಗವನ್ನು ಹಾಡಾಗಿ ಪ್ರಸ್ತುತಪಡಿಸುವ ಕೆಲಸವನ್ನು ಹಲವು ಸಂಗೀತಗಾರರು ಮಾಡುತ್ತಿದ್ದಾರೆ.

ಚಿಂತನ್‌ ವಿಕಾಸ್‌ ಪ್ರಯೋಗಕ್ಕೆ ಮೆಚ್ಚುಗೆ

ಕನ್ನಡದ ಯುವ ಗಾಯಕ ಚಿಂತನ್‌ ವಿಕಾಸ್ ಅವರು ಇತ್ತೀಚೆಗೆ ಪೀಠಿಕಾ ಭಾಗವನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿದ್ದಾರೆ. ಚಿಂತನ್‌ ರಾಗ ಸಂಯೋಜನೆ ಮಾಡಿ, ಅವರೇ ಹಾಡಿರುವ ಪೀಠಿಕಾ ಭಾಗವನ್ನು ‘ಈದಿನ.ಕಾಂ’ ಪ್ರಸಾರ ಮಾಡಿದೆ. ‘ಈ’ ವಿಡಿಯೊವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪೀಠಿಕೆಯನ್ನು ಚಿಂತನ್‌ ಹಾಡಿದ್ದಾರೆ.

ಚಿಂತನ್ ವಿಕಾಸ್‌

ಪಿಚ್ಚಳ್ಳಿ ಶ್ರೀನಿವಾಸ್ ಗಾಯನ

ದಲಿತ ಚಳವಳಿಯ ಹೋರಾಟದ ಗೀತೆಗೆಳಿಗೆ ಧ್ವನಿ ನೀಡಿದವರಲ್ಲಿ ಒಬ್ಬರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಇತ್ತೀಚೆಗೆ ಸಂವಿಧಾನದ ಪೀಠಿಕಾ ಭಾಗವನ್ನು ಹಾಡಿದ್ದಾರೆ. ರಾಗ ಸಂಯೋಜನೆ ಹಾಗೂ ಗಾಯನವನ್ನು ಪಿಚ್ಚಳ್ಳಿಯವರೇ ಮಾಡಿದ್ದು, ಸಾರಂಗ ಆಡಿಯೊ ಮಾಲೂರು (ಎಸ್‌.ಪಿ.ಚಕ್ರವರ್ತಿ) ವತಿಯಿಂದ ಧ್ವನಿಮುದ್ರಣ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ದಿನಗಳ ಹಿಂದೆ ಪಿಚ್ಚಳ್ಳಿಯವರ ಗಾಯನ ವೈರಲ್ ಆಗಿತ್ತು.

ಪಿಚ್ಚಳ್ಳಿ ಶ್ರೀನಿವಾಸ್‌

ಇಂಗ್ಲಿಷ್ ಪ್ರಯೋಗಕ್ಕೆ ಭಾರೀ ಮೆಚ್ಚುಗೆ

ಇಂಗ್ಲಿಷ್‌ನಲ್ಲಿ ಪೀಠಿಕಾ ಭಾಗವನ್ನು ಗಾಯನ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಭಾರತದ ವೈವಿಧ್ಯತೆಯನ್ನು ಕಟ್ಟಿಕೊಡುವ ದೃಶ್ಯಗಳನ್ನು ವಿಡಿಯೊದಲ್ಲಿ ಬಳಸಲಾಗಿದೆ. ಮಂಜಿಲ್ ಮಿಸ್ಟಿಕ್ಸ್ ಮಾಡಿರುವ ರಾಗ ಸಂಯೋಜನೆಗೆ, ಮನೀಶ್ ಸಂಗೀತ ನಿರ್ಮಾಣ ಮಾಡಿದ್ದಾರೆ.

ಹಿಂದಿ ಭಾಷೆಯಲ್ಲಿ ಸಂವಿಧಾನದ ಪೀಠಿಕಾ ಭಾಗವನ್ನು ಹಾಡುವ ಪ್ರಯೋಗಗಳಾಗಿರುವುದನ್ನು ಗಮನಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...