Homeಕರ್ನಾಟಕನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

ನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

- Advertisement -
- Advertisement -

ಭಾರತ ಸಂವಿಧಾನದ ಪ್ರಸ್ತಾವನೆಯು ದೇಶದ ನಿಜ ಸ್ವರೂಪವನ್ನು ಸಂಕ್ಷಿಪ್ತವಾಗಿ ಹೇಳುತ್ತದೆ. ‘ನಮಗೆ ನಾವೇ ಅರ್ಪಿಸಿಕೊಂಡಿರುವ ಈ ಸಂವಿಧಾನ’ಕ್ಕೆ ಅಪಚಾರ ಎಸಗುವ ಕೃತ್ಯಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಸಂವಿಧಾನದ ಮಹತ್ವವನ್ನು ವಿವಿಧ ಕಲಾ ಮಾಧ್ಯಮಗಳ ಮೂಲಕ ತಿಳಿಸುವ ಪ್ರಯತ್ನಗಾಗುತ್ತಿವೆ. ಸಂವಿಧಾನ ಪೀಠಿಕೆಯನ್ನು ಹಾಡಾಗಿ ಪ್ರಸ್ತುಪಡಿಸುವ ಪ್ರಯೋಗಗಳು ಇತ್ತೀಚಿನ ವರ್ಷಗಳಲ್ಲಿ ಚಾಲನೆ ಪಡೆದಿವೆ.

“ಸಂವಿಧಾನವನ್ನು ನಾವು ರಕ್ಷಿಸಿದರೆ ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ” ಎಂಬ ಮಾತು ಜನಜನಿತವಾಗಿದೆ. ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಅನೇಕರು ಹಲವು ವಿಧದಲ್ಲಿ ಕರ್ನಾಟಕದಲ್ಲೂ ಮಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಅವರ ‘ಸಂವಿಧಾನ ಓದು’ ಕೃತಿ ಒಂದು ಆಂದೋಲನದ ಸ್ವರೂಪವನ್ನೇ ಪಡೆದಿದೆ. ಪೀಠಿಕಾ ಭಾಗವನ್ನು ಶಾಲಾ ಮಕ್ಕಳಿಗೆ ಬೋಧಿಸಲಾಗುತ್ತಿದೆ. ಬಹುತೇಕ ಕಾರ್ಯಕ್ರಮಗಳ ಆರಂಭದಲ್ಲಿ ಪ್ರಸ್ತಾವನೆಯನ್ನು ಓದಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಪೀಠಿಕಾ ಭಾಗವನ್ನು ಹಾಡಾಗಿ ಪ್ರಸ್ತುತಪಡಿಸುವ ಕೆಲಸವನ್ನು ಹಲವು ಸಂಗೀತಗಾರರು ಮಾಡುತ್ತಿದ್ದಾರೆ.

ಚಿಂತನ್‌ ವಿಕಾಸ್‌ ಪ್ರಯೋಗಕ್ಕೆ ಮೆಚ್ಚುಗೆ

ಕನ್ನಡದ ಯುವ ಗಾಯಕ ಚಿಂತನ್‌ ವಿಕಾಸ್ ಅವರು ಇತ್ತೀಚೆಗೆ ಪೀಠಿಕಾ ಭಾಗವನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿದ್ದಾರೆ. ಚಿಂತನ್‌ ರಾಗ ಸಂಯೋಜನೆ ಮಾಡಿ, ಅವರೇ ಹಾಡಿರುವ ಪೀಠಿಕಾ ಭಾಗವನ್ನು ‘ಈದಿನ.ಕಾಂ’ ಪ್ರಸಾರ ಮಾಡಿದೆ. ‘ಈ’ ವಿಡಿಯೊವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪೀಠಿಕೆಯನ್ನು ಚಿಂತನ್‌ ಹಾಡಿದ್ದಾರೆ.

ಚಿಂತನ್ ವಿಕಾಸ್‌

ಪಿಚ್ಚಳ್ಳಿ ಶ್ರೀನಿವಾಸ್ ಗಾಯನ

ದಲಿತ ಚಳವಳಿಯ ಹೋರಾಟದ ಗೀತೆಗೆಳಿಗೆ ಧ್ವನಿ ನೀಡಿದವರಲ್ಲಿ ಒಬ್ಬರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಇತ್ತೀಚೆಗೆ ಸಂವಿಧಾನದ ಪೀಠಿಕಾ ಭಾಗವನ್ನು ಹಾಡಿದ್ದಾರೆ. ರಾಗ ಸಂಯೋಜನೆ ಹಾಗೂ ಗಾಯನವನ್ನು ಪಿಚ್ಚಳ್ಳಿಯವರೇ ಮಾಡಿದ್ದು, ಸಾರಂಗ ಆಡಿಯೊ ಮಾಲೂರು (ಎಸ್‌.ಪಿ.ಚಕ್ರವರ್ತಿ) ವತಿಯಿಂದ ಧ್ವನಿಮುದ್ರಣ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ದಿನಗಳ ಹಿಂದೆ ಪಿಚ್ಚಳ್ಳಿಯವರ ಗಾಯನ ವೈರಲ್ ಆಗಿತ್ತು.

ಪಿಚ್ಚಳ್ಳಿ ಶ್ರೀನಿವಾಸ್‌

ಇಂಗ್ಲಿಷ್ ಪ್ರಯೋಗಕ್ಕೆ ಭಾರೀ ಮೆಚ್ಚುಗೆ

ಇಂಗ್ಲಿಷ್‌ನಲ್ಲಿ ಪೀಠಿಕಾ ಭಾಗವನ್ನು ಗಾಯನ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಭಾರತದ ವೈವಿಧ್ಯತೆಯನ್ನು ಕಟ್ಟಿಕೊಡುವ ದೃಶ್ಯಗಳನ್ನು ವಿಡಿಯೊದಲ್ಲಿ ಬಳಸಲಾಗಿದೆ. ಮಂಜಿಲ್ ಮಿಸ್ಟಿಕ್ಸ್ ಮಾಡಿರುವ ರಾಗ ಸಂಯೋಜನೆಗೆ, ಮನೀಶ್ ಸಂಗೀತ ನಿರ್ಮಾಣ ಮಾಡಿದ್ದಾರೆ.

ಹಿಂದಿ ಭಾಷೆಯಲ್ಲಿ ಸಂವಿಧಾನದ ಪೀಠಿಕಾ ಭಾಗವನ್ನು ಹಾಡುವ ಪ್ರಯೋಗಗಳಾಗಿರುವುದನ್ನು ಗಮನಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...