Homeಕರ್ನಾಟಕನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

ನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

- Advertisement -
- Advertisement -

ಭಾರತ ಸಂವಿಧಾನದ ಪ್ರಸ್ತಾವನೆಯು ದೇಶದ ನಿಜ ಸ್ವರೂಪವನ್ನು ಸಂಕ್ಷಿಪ್ತವಾಗಿ ಹೇಳುತ್ತದೆ. ‘ನಮಗೆ ನಾವೇ ಅರ್ಪಿಸಿಕೊಂಡಿರುವ ಈ ಸಂವಿಧಾನ’ಕ್ಕೆ ಅಪಚಾರ ಎಸಗುವ ಕೃತ್ಯಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಸಂವಿಧಾನದ ಮಹತ್ವವನ್ನು ವಿವಿಧ ಕಲಾ ಮಾಧ್ಯಮಗಳ ಮೂಲಕ ತಿಳಿಸುವ ಪ್ರಯತ್ನಗಾಗುತ್ತಿವೆ. ಸಂವಿಧಾನ ಪೀಠಿಕೆಯನ್ನು ಹಾಡಾಗಿ ಪ್ರಸ್ತುಪಡಿಸುವ ಪ್ರಯೋಗಗಳು ಇತ್ತೀಚಿನ ವರ್ಷಗಳಲ್ಲಿ ಚಾಲನೆ ಪಡೆದಿವೆ.

“ಸಂವಿಧಾನವನ್ನು ನಾವು ರಕ್ಷಿಸಿದರೆ ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ” ಎಂಬ ಮಾತು ಜನಜನಿತವಾಗಿದೆ. ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಅನೇಕರು ಹಲವು ವಿಧದಲ್ಲಿ ಕರ್ನಾಟಕದಲ್ಲೂ ಮಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಅವರ ‘ಸಂವಿಧಾನ ಓದು’ ಕೃತಿ ಒಂದು ಆಂದೋಲನದ ಸ್ವರೂಪವನ್ನೇ ಪಡೆದಿದೆ. ಪೀಠಿಕಾ ಭಾಗವನ್ನು ಶಾಲಾ ಮಕ್ಕಳಿಗೆ ಬೋಧಿಸಲಾಗುತ್ತಿದೆ. ಬಹುತೇಕ ಕಾರ್ಯಕ್ರಮಗಳ ಆರಂಭದಲ್ಲಿ ಪ್ರಸ್ತಾವನೆಯನ್ನು ಓದಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಪೀಠಿಕಾ ಭಾಗವನ್ನು ಹಾಡಾಗಿ ಪ್ರಸ್ತುತಪಡಿಸುವ ಕೆಲಸವನ್ನು ಹಲವು ಸಂಗೀತಗಾರರು ಮಾಡುತ್ತಿದ್ದಾರೆ.

ಚಿಂತನ್‌ ವಿಕಾಸ್‌ ಪ್ರಯೋಗಕ್ಕೆ ಮೆಚ್ಚುಗೆ

ಕನ್ನಡದ ಯುವ ಗಾಯಕ ಚಿಂತನ್‌ ವಿಕಾಸ್ ಅವರು ಇತ್ತೀಚೆಗೆ ಪೀಠಿಕಾ ಭಾಗವನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿದ್ದಾರೆ. ಚಿಂತನ್‌ ರಾಗ ಸಂಯೋಜನೆ ಮಾಡಿ, ಅವರೇ ಹಾಡಿರುವ ಪೀಠಿಕಾ ಭಾಗವನ್ನು ‘ಈದಿನ.ಕಾಂ’ ಪ್ರಸಾರ ಮಾಡಿದೆ. ‘ಈ’ ವಿಡಿಯೊವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪೀಠಿಕೆಯನ್ನು ಚಿಂತನ್‌ ಹಾಡಿದ್ದಾರೆ.

ಚಿಂತನ್ ವಿಕಾಸ್‌

ಪಿಚ್ಚಳ್ಳಿ ಶ್ರೀನಿವಾಸ್ ಗಾಯನ

ದಲಿತ ಚಳವಳಿಯ ಹೋರಾಟದ ಗೀತೆಗೆಳಿಗೆ ಧ್ವನಿ ನೀಡಿದವರಲ್ಲಿ ಒಬ್ಬರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಇತ್ತೀಚೆಗೆ ಸಂವಿಧಾನದ ಪೀಠಿಕಾ ಭಾಗವನ್ನು ಹಾಡಿದ್ದಾರೆ. ರಾಗ ಸಂಯೋಜನೆ ಹಾಗೂ ಗಾಯನವನ್ನು ಪಿಚ್ಚಳ್ಳಿಯವರೇ ಮಾಡಿದ್ದು, ಸಾರಂಗ ಆಡಿಯೊ ಮಾಲೂರು (ಎಸ್‌.ಪಿ.ಚಕ್ರವರ್ತಿ) ವತಿಯಿಂದ ಧ್ವನಿಮುದ್ರಣ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ದಿನಗಳ ಹಿಂದೆ ಪಿಚ್ಚಳ್ಳಿಯವರ ಗಾಯನ ವೈರಲ್ ಆಗಿತ್ತು.

ಪಿಚ್ಚಳ್ಳಿ ಶ್ರೀನಿವಾಸ್‌

ಇಂಗ್ಲಿಷ್ ಪ್ರಯೋಗಕ್ಕೆ ಭಾರೀ ಮೆಚ್ಚುಗೆ

ಇಂಗ್ಲಿಷ್‌ನಲ್ಲಿ ಪೀಠಿಕಾ ಭಾಗವನ್ನು ಗಾಯನ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಭಾರತದ ವೈವಿಧ್ಯತೆಯನ್ನು ಕಟ್ಟಿಕೊಡುವ ದೃಶ್ಯಗಳನ್ನು ವಿಡಿಯೊದಲ್ಲಿ ಬಳಸಲಾಗಿದೆ. ಮಂಜಿಲ್ ಮಿಸ್ಟಿಕ್ಸ್ ಮಾಡಿರುವ ರಾಗ ಸಂಯೋಜನೆಗೆ, ಮನೀಶ್ ಸಂಗೀತ ನಿರ್ಮಾಣ ಮಾಡಿದ್ದಾರೆ.

ಹಿಂದಿ ಭಾಷೆಯಲ್ಲಿ ಸಂವಿಧಾನದ ಪೀಠಿಕಾ ಭಾಗವನ್ನು ಹಾಡುವ ಪ್ರಯೋಗಗಳಾಗಿರುವುದನ್ನು ಗಮನಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...