Homeಕರ್ನಾಟಕನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

ನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

- Advertisement -
- Advertisement -

ಭಾರತ ಸಂವಿಧಾನದ ಪ್ರಸ್ತಾವನೆಯು ದೇಶದ ನಿಜ ಸ್ವರೂಪವನ್ನು ಸಂಕ್ಷಿಪ್ತವಾಗಿ ಹೇಳುತ್ತದೆ. ‘ನಮಗೆ ನಾವೇ ಅರ್ಪಿಸಿಕೊಂಡಿರುವ ಈ ಸಂವಿಧಾನ’ಕ್ಕೆ ಅಪಚಾರ ಎಸಗುವ ಕೃತ್ಯಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಸಂವಿಧಾನದ ಮಹತ್ವವನ್ನು ವಿವಿಧ ಕಲಾ ಮಾಧ್ಯಮಗಳ ಮೂಲಕ ತಿಳಿಸುವ ಪ್ರಯತ್ನಗಾಗುತ್ತಿವೆ. ಸಂವಿಧಾನ ಪೀಠಿಕೆಯನ್ನು ಹಾಡಾಗಿ ಪ್ರಸ್ತುಪಡಿಸುವ ಪ್ರಯೋಗಗಳು ಇತ್ತೀಚಿನ ವರ್ಷಗಳಲ್ಲಿ ಚಾಲನೆ ಪಡೆದಿವೆ.

“ಸಂವಿಧಾನವನ್ನು ನಾವು ರಕ್ಷಿಸಿದರೆ ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ” ಎಂಬ ಮಾತು ಜನಜನಿತವಾಗಿದೆ. ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಅನೇಕರು ಹಲವು ವಿಧದಲ್ಲಿ ಕರ್ನಾಟಕದಲ್ಲೂ ಮಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಅವರ ‘ಸಂವಿಧಾನ ಓದು’ ಕೃತಿ ಒಂದು ಆಂದೋಲನದ ಸ್ವರೂಪವನ್ನೇ ಪಡೆದಿದೆ. ಪೀಠಿಕಾ ಭಾಗವನ್ನು ಶಾಲಾ ಮಕ್ಕಳಿಗೆ ಬೋಧಿಸಲಾಗುತ್ತಿದೆ. ಬಹುತೇಕ ಕಾರ್ಯಕ್ರಮಗಳ ಆರಂಭದಲ್ಲಿ ಪ್ರಸ್ತಾವನೆಯನ್ನು ಓದಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಪೀಠಿಕಾ ಭಾಗವನ್ನು ಹಾಡಾಗಿ ಪ್ರಸ್ತುತಪಡಿಸುವ ಕೆಲಸವನ್ನು ಹಲವು ಸಂಗೀತಗಾರರು ಮಾಡುತ್ತಿದ್ದಾರೆ.

ಚಿಂತನ್‌ ವಿಕಾಸ್‌ ಪ್ರಯೋಗಕ್ಕೆ ಮೆಚ್ಚುಗೆ

ಕನ್ನಡದ ಯುವ ಗಾಯಕ ಚಿಂತನ್‌ ವಿಕಾಸ್ ಅವರು ಇತ್ತೀಚೆಗೆ ಪೀಠಿಕಾ ಭಾಗವನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿದ್ದಾರೆ. ಚಿಂತನ್‌ ರಾಗ ಸಂಯೋಜನೆ ಮಾಡಿ, ಅವರೇ ಹಾಡಿರುವ ಪೀಠಿಕಾ ಭಾಗವನ್ನು ‘ಈದಿನ.ಕಾಂ’ ಪ್ರಸಾರ ಮಾಡಿದೆ. ‘ಈ’ ವಿಡಿಯೊವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪೀಠಿಕೆಯನ್ನು ಚಿಂತನ್‌ ಹಾಡಿದ್ದಾರೆ.

ಚಿಂತನ್ ವಿಕಾಸ್‌

ಪಿಚ್ಚಳ್ಳಿ ಶ್ರೀನಿವಾಸ್ ಗಾಯನ

ದಲಿತ ಚಳವಳಿಯ ಹೋರಾಟದ ಗೀತೆಗೆಳಿಗೆ ಧ್ವನಿ ನೀಡಿದವರಲ್ಲಿ ಒಬ್ಬರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಇತ್ತೀಚೆಗೆ ಸಂವಿಧಾನದ ಪೀಠಿಕಾ ಭಾಗವನ್ನು ಹಾಡಿದ್ದಾರೆ. ರಾಗ ಸಂಯೋಜನೆ ಹಾಗೂ ಗಾಯನವನ್ನು ಪಿಚ್ಚಳ್ಳಿಯವರೇ ಮಾಡಿದ್ದು, ಸಾರಂಗ ಆಡಿಯೊ ಮಾಲೂರು (ಎಸ್‌.ಪಿ.ಚಕ್ರವರ್ತಿ) ವತಿಯಿಂದ ಧ್ವನಿಮುದ್ರಣ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ದಿನಗಳ ಹಿಂದೆ ಪಿಚ್ಚಳ್ಳಿಯವರ ಗಾಯನ ವೈರಲ್ ಆಗಿತ್ತು.

ಪಿಚ್ಚಳ್ಳಿ ಶ್ರೀನಿವಾಸ್‌

ಇಂಗ್ಲಿಷ್ ಪ್ರಯೋಗಕ್ಕೆ ಭಾರೀ ಮೆಚ್ಚುಗೆ

ಇಂಗ್ಲಿಷ್‌ನಲ್ಲಿ ಪೀಠಿಕಾ ಭಾಗವನ್ನು ಗಾಯನ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಭಾರತದ ವೈವಿಧ್ಯತೆಯನ್ನು ಕಟ್ಟಿಕೊಡುವ ದೃಶ್ಯಗಳನ್ನು ವಿಡಿಯೊದಲ್ಲಿ ಬಳಸಲಾಗಿದೆ. ಮಂಜಿಲ್ ಮಿಸ್ಟಿಕ್ಸ್ ಮಾಡಿರುವ ರಾಗ ಸಂಯೋಜನೆಗೆ, ಮನೀಶ್ ಸಂಗೀತ ನಿರ್ಮಾಣ ಮಾಡಿದ್ದಾರೆ.

ಹಿಂದಿ ಭಾಷೆಯಲ್ಲಿ ಸಂವಿಧಾನದ ಪೀಠಿಕಾ ಭಾಗವನ್ನು ಹಾಡುವ ಪ್ರಯೋಗಗಳಾಗಿರುವುದನ್ನು ಗಮನಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....