Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಣೆ: ರಾಜಸ್ಥಾನ ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿಗಳ ಅಮಾನತು

ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಣೆ: ರಾಜಸ್ಥಾನ ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿಗಳ ಅಮಾನತು

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಬಿಬಿಸಿ ರೂಪಿಸಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದಕ್ಕಾಗಿ ಅಜ್ಮೀರ್‌ನಲ್ಲಿರುವ ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯವು 10 ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಶುಕ್ರವಾರ ಇಬ್ಬರು ವಿದ್ಯಾರ್ಥಿಗಳನ್ನು ಮತ್ತು ಶನಿವಾರ ಇನ್ನೂ ಎಂಟು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. “ಈ ವಿದ್ಯಾರ್ಥಿಗಳು 14 ದಿನಗಳ ಕಾಲ ತರಗತಿಗಳಿಗೆ ಹಾಜರಾಗುವಂತಿಲ್ಲ ಮತ್ತು ಈ ಅವಧಿಯಲ್ಲಿ ಹಾಸ್ಟೆಲ್‌ನಲ್ಲಿಯೂ ಉಳಿಯುವಂತಿಲ್ಲ” ಎಂದು ಆದೇಶಿಸಲಾಗಿದೆ.

ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ನಮ್ಮ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದೇವೆಯೇ ಹೊರತು, ಯಾವುದೇ ಸಾರ್ವಜನಿಕ ಪ್ರದರ್ಶನವನ್ನು ನಡೆಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಘೋಷಣೆಗಳನ್ನು ಕೂಗಿ ಸಾಕ್ಷ್ಯಚಿತ್ರ ವೀಕ್ಷಿಸದಂತೆ ತಡೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

‘ಭಾರತ: ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯು ಜನವರಿ 17ರಂದು ಬಿಡುಗಡೆಯಾಯಿತು. ಗುಜರಾತ್‌ ಗಲಭೆಯ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರು ನಿಷ್ಕ್ರಿಯರಾಗಿದ್ದನ್ನು ಬಿಬಿಸಿ ಪ್ರಸ್ತಾಪಿಸಿದೆ. ಎರಡನೇ ಭಾಗ ಮಂಗಳವಾರ ಬಿಡುಗಡೆಯಾಗಿದೆ. ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳನ್ನು ಎರಡನೇ ಭಾಗ ಚರ್ಚಿಸಿದೆ.

ಭಾರತದಲ್ಲಿ ಸಾಕ್ಷ್ಯಚಿತ್ರ ಲಭ್ಯವಾಗದಿದ್ದರೂ, ಇದರ ಲಿಂಕ್‌ಗಳನ್ನು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ದೆಹಲಿ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತು ಜಾಮಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಮತ್ತು ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಆಯೋಜಿಸಿದ್ದು ವಿವಾದಕ್ಕೆ ಗುರಿಯಾಗಿದೆ.

ಸಾಕ್ಷ್ಯಚಿತ್ರದ ತುಣುಕುಗಳನ್ನು ಹಂಚಿಕೊಳ್ಳದಂತೆ ನಿರ್ಬಂಧಿಸಲು ಯೂಟ್ಯೂಬ್‌ ಮತ್ತು ಟ್ವಿಟರ್‌ಗೆ ನಿರ್ದೇಶನಗಳನ್ನು ನೀಡಲು ‘ಮಾಹಿತಿ ತಂತ್ರಜ್ಞಾನ ನಿಯಮಗಳು, 2021’ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಸರ್ಕಾರ ಬಳಸಿದೆ.

ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಏನಾಯಿತು?

ಜನವರಿ 26ರ ಸಂಜೆ, ಕೆಲವು ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಡಿವೈಸ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ವಿಶ್ವವಿದ್ಯಾನಿಲಯದ ಅಂಚೆ ಕಚೇರಿಯ ಬಳಿ ಜಮಾಯಿಸಿದ್ದರು ಎಂದು ಅಮಾನತುಗೊಂಡ ವಿದ್ಯಾರ್ಥಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ. ಆದರೆ, ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಸದಸ್ಯರು ಘೋಷಣೆಗಳನ್ನು ಕೂಗಲು ಆರಂಭಿಸಿದ್ದರಿಂದ ವಿದ್ಯಾರ್ಥಿಗಳು ಅಲ್ಲಿಂದ ತೆರಳಿದ್ದಾರೆ.

“ನಂತರ ಎಬಿವಿಪಿ ಸದಸ್ಯರು ಕಾಲೇಜಿನ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಸಂದೇಶಗಳನ್ನು ಹರಿಬಿಟ್ಟು ಬ್ಯಾಸ್ಕೆಟ್‌ಬಾಲ್ ಅಂಕಣದಲ್ಲಿ ವಿದ್ಯಾರ್ಥಿಗಳನ್ನು ಸೇರುವಂತೆ ಹೇಳಿದ್ದಾರೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ನಂತರ ಎಬಿವಿಪಿ ಸದಸ್ಯರು ಘೋಷಣೆಗಳನ್ನು ಕೂಗಿದರು, ಸಾಕ್ಷ್ಯಚಿತ್ರವನ್ನು ವೀಕ್ಷಿಸಿದವರ ಹಾಸ್ಟೆಲ್‌ಗಳಿಗೆ ನುಗ್ಗಿದರು ಮತ್ತು ಅವರ ಬಾಗಿಲುಗಳನ್ನು ಝಾಡಿಸಿ ಒದ್ದರು ಎಂದು ಅಮಾನತುಗೊಂಡ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಸಾಕ್ಷ್ಯಚಿತ್ರವನ್ನು ವೀಕ್ಷಿಸದಂತೆ ನಮ್ಮ ಸಂಘಟನೆಯ ಸದಸ್ಯರು, ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರು ವಿದ್ಯಾರ್ಥಿಗಳನ್ನು ಕೇಳಿಕೊಂಡರೂ ಅವರು ಮಣಿಯಲಿಲ್ಲ” ಎಂದು ವಿಶ್ವವಿದ್ಯಾಲಯದ ಎಬಿವಿಪಿ ಮುಖ್ಯಸ್ಥ ವಿಕಾಶ್ ಪಾಠಕ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಶಿಸ್ತಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯದ ಸುಗ್ರೀವಾಜ್ಞೆ 47 ರ ಕಲಂ 3.3 ಮತ್ತು 3.5 ರ ಅಡಿಯಲ್ಲಿ 10 ವಿದ್ಯಾರ್ಥಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಮಾನತು ಆದೇಶದ ಪ್ರತಿ ತಿಳಿಸಿದೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನ ರಾಜಸ್ಥಾನ ಘಟಕವು ವಿಶ್ವವಿದ್ಯಾನಿಲಯದ ಕುಲಪತಿಯವರಿಗೆ ಪತ್ರ ಬರೆದಿದ್ದು, ಕೋಮು ಕೇಂದ್ರಿತವಾಗಿ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಟೀಕಿಸಿದೆ. ಅಮಾನತುಗೊಂಡ 10 ವಿದ್ಯಾರ್ಥಿಗಳಲ್ಲಿ ಎಂಟು ಮಂದಿ ಮುಸ್ಲಿಮರು ಮತ್ತು ಒಬ್ಬರು ಕ್ರಿಶ್ಚಿಯನ್ ಎಂದು ಸಂಸ್ಥೆಯು ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

ಅಮಾನತು ಆದೇಶಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ. “…ವಿದ್ಯಾರ್ಥಿಗಳ ಪ್ರತಿಕ್ರಿಯೆ ಪಡೆದಿಲ್ಲ. ಯಾವುದೇ ವಿಚಾರಣೆ ಮಾಡದೆ, ಶೋಕಾಸ್ ನೋಟಿಸ್ ನೀಡದೆ, ಅವರನ್ನು ವಿಶ್ವವಿದ್ಯಾಲಯ ಮತ್ತು ಹಾಸ್ಟೆಲ್‌ನಿಂದ 15 ದಿನಗಳವರೆಗೆ ಹೊರಹಾಕಲಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...