Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಣೆ: ರಾಜಸ್ಥಾನ ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿಗಳ ಅಮಾನತು

ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಣೆ: ರಾಜಸ್ಥಾನ ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿಗಳ ಅಮಾನತು

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಬಿಬಿಸಿ ರೂಪಿಸಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದಕ್ಕಾಗಿ ಅಜ್ಮೀರ್‌ನಲ್ಲಿರುವ ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯವು 10 ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಶುಕ್ರವಾರ ಇಬ್ಬರು ವಿದ್ಯಾರ್ಥಿಗಳನ್ನು ಮತ್ತು ಶನಿವಾರ ಇನ್ನೂ ಎಂಟು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. “ಈ ವಿದ್ಯಾರ್ಥಿಗಳು 14 ದಿನಗಳ ಕಾಲ ತರಗತಿಗಳಿಗೆ ಹಾಜರಾಗುವಂತಿಲ್ಲ ಮತ್ತು ಈ ಅವಧಿಯಲ್ಲಿ ಹಾಸ್ಟೆಲ್‌ನಲ್ಲಿಯೂ ಉಳಿಯುವಂತಿಲ್ಲ” ಎಂದು ಆದೇಶಿಸಲಾಗಿದೆ.

ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ನಮ್ಮ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದೇವೆಯೇ ಹೊರತು, ಯಾವುದೇ ಸಾರ್ವಜನಿಕ ಪ್ರದರ್ಶನವನ್ನು ನಡೆಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಘೋಷಣೆಗಳನ್ನು ಕೂಗಿ ಸಾಕ್ಷ್ಯಚಿತ್ರ ವೀಕ್ಷಿಸದಂತೆ ತಡೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

‘ಭಾರತ: ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯು ಜನವರಿ 17ರಂದು ಬಿಡುಗಡೆಯಾಯಿತು. ಗುಜರಾತ್‌ ಗಲಭೆಯ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರು ನಿಷ್ಕ್ರಿಯರಾಗಿದ್ದನ್ನು ಬಿಬಿಸಿ ಪ್ರಸ್ತಾಪಿಸಿದೆ. ಎರಡನೇ ಭಾಗ ಮಂಗಳವಾರ ಬಿಡುಗಡೆಯಾಗಿದೆ. ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳನ್ನು ಎರಡನೇ ಭಾಗ ಚರ್ಚಿಸಿದೆ.

ಭಾರತದಲ್ಲಿ ಸಾಕ್ಷ್ಯಚಿತ್ರ ಲಭ್ಯವಾಗದಿದ್ದರೂ, ಇದರ ಲಿಂಕ್‌ಗಳನ್ನು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ದೆಹಲಿ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತು ಜಾಮಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಮತ್ತು ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಆಯೋಜಿಸಿದ್ದು ವಿವಾದಕ್ಕೆ ಗುರಿಯಾಗಿದೆ.

ಸಾಕ್ಷ್ಯಚಿತ್ರದ ತುಣುಕುಗಳನ್ನು ಹಂಚಿಕೊಳ್ಳದಂತೆ ನಿರ್ಬಂಧಿಸಲು ಯೂಟ್ಯೂಬ್‌ ಮತ್ತು ಟ್ವಿಟರ್‌ಗೆ ನಿರ್ದೇಶನಗಳನ್ನು ನೀಡಲು ‘ಮಾಹಿತಿ ತಂತ್ರಜ್ಞಾನ ನಿಯಮಗಳು, 2021’ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಸರ್ಕಾರ ಬಳಸಿದೆ.

ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಏನಾಯಿತು?

ಜನವರಿ 26ರ ಸಂಜೆ, ಕೆಲವು ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಡಿವೈಸ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ವಿಶ್ವವಿದ್ಯಾನಿಲಯದ ಅಂಚೆ ಕಚೇರಿಯ ಬಳಿ ಜಮಾಯಿಸಿದ್ದರು ಎಂದು ಅಮಾನತುಗೊಂಡ ವಿದ್ಯಾರ್ಥಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ. ಆದರೆ, ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಸದಸ್ಯರು ಘೋಷಣೆಗಳನ್ನು ಕೂಗಲು ಆರಂಭಿಸಿದ್ದರಿಂದ ವಿದ್ಯಾರ್ಥಿಗಳು ಅಲ್ಲಿಂದ ತೆರಳಿದ್ದಾರೆ.

“ನಂತರ ಎಬಿವಿಪಿ ಸದಸ್ಯರು ಕಾಲೇಜಿನ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಸಂದೇಶಗಳನ್ನು ಹರಿಬಿಟ್ಟು ಬ್ಯಾಸ್ಕೆಟ್‌ಬಾಲ್ ಅಂಕಣದಲ್ಲಿ ವಿದ್ಯಾರ್ಥಿಗಳನ್ನು ಸೇರುವಂತೆ ಹೇಳಿದ್ದಾರೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ನಂತರ ಎಬಿವಿಪಿ ಸದಸ್ಯರು ಘೋಷಣೆಗಳನ್ನು ಕೂಗಿದರು, ಸಾಕ್ಷ್ಯಚಿತ್ರವನ್ನು ವೀಕ್ಷಿಸಿದವರ ಹಾಸ್ಟೆಲ್‌ಗಳಿಗೆ ನುಗ್ಗಿದರು ಮತ್ತು ಅವರ ಬಾಗಿಲುಗಳನ್ನು ಝಾಡಿಸಿ ಒದ್ದರು ಎಂದು ಅಮಾನತುಗೊಂಡ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಸಾಕ್ಷ್ಯಚಿತ್ರವನ್ನು ವೀಕ್ಷಿಸದಂತೆ ನಮ್ಮ ಸಂಘಟನೆಯ ಸದಸ್ಯರು, ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರು ವಿದ್ಯಾರ್ಥಿಗಳನ್ನು ಕೇಳಿಕೊಂಡರೂ ಅವರು ಮಣಿಯಲಿಲ್ಲ” ಎಂದು ವಿಶ್ವವಿದ್ಯಾಲಯದ ಎಬಿವಿಪಿ ಮುಖ್ಯಸ್ಥ ವಿಕಾಶ್ ಪಾಠಕ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಶಿಸ್ತಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯದ ಸುಗ್ರೀವಾಜ್ಞೆ 47 ರ ಕಲಂ 3.3 ಮತ್ತು 3.5 ರ ಅಡಿಯಲ್ಲಿ 10 ವಿದ್ಯಾರ್ಥಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಮಾನತು ಆದೇಶದ ಪ್ರತಿ ತಿಳಿಸಿದೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನ ರಾಜಸ್ಥಾನ ಘಟಕವು ವಿಶ್ವವಿದ್ಯಾನಿಲಯದ ಕುಲಪತಿಯವರಿಗೆ ಪತ್ರ ಬರೆದಿದ್ದು, ಕೋಮು ಕೇಂದ್ರಿತವಾಗಿ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಟೀಕಿಸಿದೆ. ಅಮಾನತುಗೊಂಡ 10 ವಿದ್ಯಾರ್ಥಿಗಳಲ್ಲಿ ಎಂಟು ಮಂದಿ ಮುಸ್ಲಿಮರು ಮತ್ತು ಒಬ್ಬರು ಕ್ರಿಶ್ಚಿಯನ್ ಎಂದು ಸಂಸ್ಥೆಯು ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

ಅಮಾನತು ಆದೇಶಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ. “…ವಿದ್ಯಾರ್ಥಿಗಳ ಪ್ರತಿಕ್ರಿಯೆ ಪಡೆದಿಲ್ಲ. ಯಾವುದೇ ವಿಚಾರಣೆ ಮಾಡದೆ, ಶೋಕಾಸ್ ನೋಟಿಸ್ ನೀಡದೆ, ಅವರನ್ನು ವಿಶ್ವವಿದ್ಯಾಲಯ ಮತ್ತು ಹಾಸ್ಟೆಲ್‌ನಿಂದ 15 ದಿನಗಳವರೆಗೆ ಹೊರಹಾಕಲಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...