Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...