Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...