Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...