Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...