Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...