Homeಕರ್ನಾಟಕWatch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

Watch: ಕೋಮುವಾದ ತಡೆಗೆ ಪ್ರತಿಪಕ್ಷಗಳು ಜಾತಿ ಸಮಾವೇಶಗಳನ್ನು ನಡೆಸಬೇಕಿದೆ- ನವೀನ್‌ ಸೂರಿಂಜೆ

- Advertisement -
- Advertisement -

“ಕೋಮುವಾದವನ್ನು ಮಣಿಸಬೇಕೆಂದರೆ ಜಾತಿಗಳು ಸಶಕ್ತಗೊಳ್ಳುವ ಅಗತ್ಯವಿದೆ. ಹಿಂದುಳಿದ ವರ್ಗಗಳ ಜಾತಿಗಳು ಪ್ರತ್ಯೇಕ ಪ್ರತ್ಯೇಕವಾಗಿ ಸಮಾವೇಶಗಳನ್ನು ಮಾಡಬೇಕು. ಪ್ರತ್ಯೇಕ ಅಸ್ತಿತ್ವಗಳನ್ನು ಕಂಡುಕೊಳ್ಳಬೇಕು. ಆಗ ಮಾತ್ರ ಈ ಹಿಂದುತ್ವ ರಾಜಕಾರಣಕ್ಕೆ ದೊಡ್ಡದಾದ ಪೆಟ್ಟು ಕೊಡಲು ಸಾಧ್ಯವಾಗುತ್ತದೆ ಎಂಬುದು ಬಹುತೇಕ ಚಿಂತಕರ ಅಭಿಪ್ರಾಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

‘ನ್ಯಾಯಪಥ’ ವಾರಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ಗೆ ಇತ್ತೀಚೆಗೆ ನೀಡಿರುವ ವಿಡಿಯೊ ಸಂದರ್ಶನದಲ್ಲಿ ಅವರು ಕರಾವಳಿಯ ಕೋಮು ರಾಜಕಾರಣದ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ. ಕರಾವಳಿಯ ಕೋಮುಸಂಘರ್ಷದ ಕುರಿತು ಅವರು ಇತ್ತೀಚೆಗೆ ಬರೆದಿರುವ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ.

“ಜಾತಿ ಸಮಾವೇಶಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಬಿಜೆಪಿಯೇತರ ರಾಜಕೀಯ ಪಕ್ಷಗಳು ಯೋಚನೆ ಮಾಡಿಲ್ಲ. ಸಿಪಿಐಎಂ ಸಣ್ಣಮಟ್ಟದಲ್ಲಿ ಈ ಪ್ರಯತ್ನವನ್ನು ಮಾಡಿತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕರೆಸಿ ಬಿಲ್ಲವ ಸಮಾವೇಶಗಳನ್ನು, ನಾರಾಯಣಗುರು ಸಮಾವೇಶಗಳನ್ನು ಏರ್ಪಡಿಸಿತು. ಅದು ಕೆಲವು ಪರಿಣಾಮಗಳನ್ನು ಬೀರಿತು” ಎಂದಿದ್ದಾರೆ.

“ಬಿಲ್ಲವರು ಈಗ ಸ್ವಲ್ಪ ಜಾಗೃತರಾಗಿದ್ದಾರೆ. ಯಾಕೆ ನಾವು ಮಾತ್ರ ಕೊಲೆಯಾಗುತ್ತಿದ್ದೇವೆ, ನಾವು ಮಾತ್ರ ಏಕೆ ಕೊಲ್ಲುತ್ತಿದ್ದೇವೆ, ಅಧಿಕಾರಕ್ಕೆ ಏರುವುದು ಮಾತ್ರ ಬ್ರಾಹ್ಮಣರು ಮತ್ತು ಬಂಟರು ಮಾತ್ರ ಏಕೆ ಎಂಬ ಪ್ರಶ್ನೆಯನ್ನು ಸಮುದಾಯ ಕೇಳಿಕೊಳ್ಳುತ್ತಿದೆ. ಪ್ರವೀಣ್‌ ಕೊಲೆಯ ಸಂದರ್ಭದಲ್ಲಿ- ನೋಡಿ ಮತ್ತೊಬ್ಬ ಬಿಲ್ಲವ ಸತ್ತ- ಎಂಬ ವಿಷಾದ ವ್ಯಕ್ತವಾಯಿತು. ಫಾಝಿಲ್ ಕೊಲೆ ಸಂಬಂಧ ಅರೆಸ್ಟ್‌ ಆಗಿರುವವರಲ್ಲಿ ಬಿಲ್ಲವ, ಬಂಟರನ್ನು ಬಿಟ್ಟರೆ ಬ್ರಾಹ್ಮಣರು, ಮೇಲ್ವರ್ಗಗಳು ಯಾಕಿಲ್ಲ ಎಂಬ ಪ್ರಶ್ನೆ ಮೂಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಾತಿ ಜಾಗೃತಿಯ ಸಮಾವೇಶಗಳು ಹೆಚ್ಚಾಗಿ ಆಗಬೇಕಿದೆ. ಕೆಳವರ್ಗಗಳು ಜಾತಿ ಸಮಾವೇಶಗಳನ್ನು ಮಾಡುವುದು ಜಾತಿವಾದ ಆಗುವುದಿಲ್ಲ. ಅದು ಸಮಾಜ ಸುಧಾರಣೆಯ ಭಾಗವಾಗುತ್ತದೆ. ಎಲ್ಲ ಕೆಳಸ್ತರದ ಜಾತಿಗಳ ಜಾಗೃತಿ ಸಮಾವೇಶಗಳನ್ನು ಮಾಡುವ ತುರ್ತು ಇದೆ. ಇದಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಥರದ ಪಕ್ಷಗಳು ಸಹಾಯ ಮಾಡಬೇಕು” ಎಂದು ಆಶಿಸಿದ್ದಾರೆ.

ವಿಡಿಯೊ ಸಂದರ್ಶನದಲ್ಲಿ ಕೇಳಲಾಗಿರುವ ಪ್ರಶ್ನೆಗಳು

* ಚುನಾವಣೆ ಹತ್ತಿರವಾದಂತೆ ಕರಾವಳಿ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಮುಸ್ಲಿಂ ಬೈನರಿಯಾಚೆಗೆ ಕರಾವಳಿ ಕರ್ನಾಟಕದ ರಾಜಕಾರಣ ಇಲ್ಲವೇ?

* ಸಂಘಪರಿವಾರದ ಅಜೆಂಡಾಗಳನ್ನು ಇಲ್ಲಿನ ಬಲಿಪಶುಗಳಿಗೆ ತಿಳಿಸುವ ಪ್ರಯತ್ನಗಳಾಗುತ್ತಿವೆಯೇ? ಅದು ಯಾವ ಮಟ್ಟಿಗಿನ ಯಶಸ್ಸು ಲಭಿಸಿದೆ.

* ಕೋಮುದ್ವೇಷ ಹಿನ್ನೆಲೆಯ ಕೊಲೆಗಳಲ್ಲಿ ಸರ್ಕಾರ ಪರಿಹಾರ ನೀಡುವಾಗ ತಾರತಮ್ಯ ನೀತಿ ಅನುಭವಿಸುತ್ತಿರುವ ಟೀಕೆಗಳು ಬರುತ್ತಿವೆ. ಇದನ್ನು ಹೇಗೆ ನೋಡುತ್ತೀರಿ?

* ಕರಾವಳಿ ಪೊಲೀಸರ ಮತೀಯವಾದಿ ಧೋರಣೆಯ ಕುರಿತು ಆತಂಕಗಳು ವ್ಯಕ್ತವಾಗುತ್ತಿವೆ. ‌ಇದರ ಕುರಿತು ನಿಮ್ಮ ಅನಿಸಿಕೆಗಳೇನು?

* ಕೋಮುವಾದದಾಚೆಗೆ ಕರಾವಳಿ ಜನತೆಯ ನಿಜವಾದ ಸಮಸ್ಯೆಗಳು ಯಾವುವು?

* ಕರಾವಳಿ ಭಾಗದ ಮುಸ್ಲಿಮರ ಆರ್ಥಿಕ ಸಬಲೀಕರಣ ಕೂಡ ಮುಸ್ಲಿಮೇತರರ ಅಸೂಹೆಗೆ ಕಾರಣವಾಗಿದೆಯೇ?

* ಕರಾವಳಿಯ ಸಮಸ್ಯೆಯಲ್ಲಿ ಸರ್ಕಾರ failure ಅಂತೂ ಇದ್ದೇ ಇದೆ. ಆದರೆ ನಾಗರಿಕ ಸಮಾಜ ಎಲ್ಲಿ ಎಡವುತ್ತಾ ಇದೆ?

* ಅಕಸ್ಮಾತ್, ಕೋಮು ಧ್ರುವೀಕರಣವನ್ನು ತಗ್ಗಿಸಿ, ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ ನೆಲೆಸಲು ತಯ್ಯಾರಾಗುವ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಯಾವ್ಯಾವ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು?

* ನೀವು ಬರೆದ ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಕರಾವಳಿಯ ಗಂಭೀರ ಸಮಸ್ಯೆಯ ಕುರಿತು ಮಾತನಾಡಿದೆ. ಓದುಗರಿಂದ ಪ್ರತಿಕ್ರಿಯೆ ಹೇಗಿದೆ?

* ‘ನೇತ್ರಾವತಿಯಲ್ಲಿ ನೆತ್ತರು’ ಕೃತಿ ಮುಸ್ಲಿಂ ಕೋಮುವಾದದ ಕುರಿತು ಚರ್ಚೆ ನಡೆಸಿಲ್ಲ ಎಂಬ ಆಕ್ಷೇಪಗಳಿವೆಯಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ದೇಶದಿಂದ ಜಾತಿವಾದ ತೊಲಗಲಿ ಎಂದು ಕರೆ ಕೊಡುವ ಬದಲು, ಜಾತಿಯ ವಿಷ ಬೀಜ ಬಿತ್ತಬೇಡಿ. ಜಾತಿವಾದ ಹೋಗುವವರೆಗೂ ಈ ದೇಶ ಉದ್ಧಾರ ಆಗಲ್ಲ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...