ಜಾರ್ಖಂಡ್ನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣಾ ವೇಳೆ ಮತದಾನ ನಡೆಯುವ ಬೂತ್ನೊಳಗೆ ಪ್ರವೇಶಿಸಲು ಬಿಡದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಗನ್ ತೋರಿಸಿರುವ ಘಟನೆ ಜರುಗಿದೆ. ನಮ್ಮ ದೇಶದ ಪರಿಸ್ಥಿತಿ ಇಲ್ಲಿಗೆ ಬಂದು ನಿಂತಿದೆ!
ಪಾಲಮು ಜಿಲ್ಲೆಯ ಕೋಸಿಯಾರ ಗ್ರಾಮದಲ್ಲಿ ಈ ಘಟನೆ ಜರುಗಿದ್ದು ಬಿಜೆಪಿ ಅಭ್ಯರ್ಥಿ ಅಲೋಕ್ ಚೌರಾಸಿಯಾ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ತ್ರಿಪಾಠಿಯವರ ನಡುವೆ ತೀವ್ರ ಗಲಾಟೆ ನಡೆದ ವೇಳೆ ತ್ರಿಪಾಠಿಯವರ ಗನ್ ತೋರಿಸಿ ಬೆದರಿಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಪಾಲಮು ಜಿಲ್ಲೆಯಲ್ಲಿ ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಜಗಳ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಅಲೋಕ್ ಚೌರಾಸಿಯಾ ಅವರ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ತ್ರಿಪಾಠಿ ಅವರನ್ನು ಆ ಪ್ರದೇಶದ ಮತದಾನ ಕೇಂದ್ರಕ್ಕೆ ಹೋಗದಂತೆ ತಡೆದಾಗ ಅವರು ಗನ್ ತೋರಿಸಿ ಎಚ್ಚರಿಕೆ ನೀಡಿದ್ದಾರೆ.
ವಿಡಿಯೋ ನೋಡಿ
#WATCH Jharkhand: Congress candidate KN Tripathi brandishes a gun during clash between supporters of BJP candidate Alok Chaurasia & Tripathi's supporters. Tripathi was allegedly stopped by BJP candidate's supporters from going to polling booths, in Kosiyara village of Palamu. pic.twitter.com/Ziu8eCq42z
— ANI (@ANI) November 30, 2019
ಘಟನೆಗೂ ಮುನ್ನ ಕೆಲ ಬಿಜೆಪಿ ಬೆಂಬಲಿಗರು ತ್ರಿಪಾಠಿ ಮೇಲೆ ಕಲ್ಲು ಎಸೆಯಲು ಆರಂಭಿಸಿದ್ದರು ಮತ್ತು ಅವರನ್ನು ಸ್ಥಳದಿಂದ ಹೊರಹೋಗುವಂತೆ ಕೆಲವು ವ್ಯಕ್ತಿಗಳು ಘೋಷಣೆಗಳನ್ನು ಕೂಗಿದ್ದರು ಎಂದು ಆರೋಪಿಸಲಾಗಿದೆ. ನಂತರ ತ್ರಿಪಾಠಿ ಎದುರಾಳಿಗಳನ್ನು ಹಿಮ್ಮೆಟ್ಟಿಸಲು ಮತ್ತು ಭಯವನ್ನು ಸೃಷ್ಟಿಸುವ ಉದ್ದೇಶದಿಂದ ಬಂದೂಕನ್ನು ತೆಗೆದುಕೊಂಡರು ಎನ್ನಲಾಗಿದೆ.


