Homeಕರ್ನಾಟಕಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

2012 ರಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲಂ ನೋಡಿದ್ದಾರೆ ಎಂಬ ಆರೋಪ ಲಕ್ಷ್ಮಣ ಸವದಿ ಸೇರಿದಂತೆ ಇತರರ ಮೇಲೆ ಕೇಳಿ ಬಂದಿತ್ತು.

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಇದರ ಸುತ್ತ ರಾಜಕೀಯ ಕೆಸರೆರಚಾಟಗಳೂ ನಡೆಯುತ್ತಿವೆ. ಈ ನಡುವೆ ಜೆಡಿಎಸ್ ಶಾಸಕ ಸಾರಾ ಮಹೇಶ್ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಉಲ್ಲೇಖಿಸಿ, ’ಬ್ಲೂಫಿಲಂ ನೋಡುವುದು ಕೂಡಾ ವ್ಯಸನ’ ಎನ್ನುವ ಮೂಲಕ ಕಾಲೆಳೆದಿದ್ದಾರೆ.

2012 ರಲ್ಲಿ ಲಕ್ಷ್ಮಣ ಸವದಿ, ಕೃಷ್ಣ ಜೆ ಪಾಲೇಮಾರ್ ಮತ್ತು ಸಿಸಿ ಪಾಟೀಲ್ ಮೇಲೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲ್ಮ್ ನೋಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: 13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

ಡ್ರಗ್ಸ್ ಜಾಲ ಕ್ರಿಯಾಶೀಲರಾಗಿರುವುದರ ಬಗ್ಗೆ ರಾಜ್ಯದಲ್ಲಿ ವರದಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ‘ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು’ ಎಂದು ಹೇಳಿದ್ದರು.

ಇದಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, “ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ನೋಡಿ ನಗು ಬಂತು. ಅವರು ಹೇಳಿದ ಮಾತು ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ” ಎಂದು ಪ್ರತಿಕ್ರಿಯಿಸಿದ್ದರು.

ಇದಕ್ಕೆ ವ್ಯಂಗ್ಯವಾಡಿರುವ ಜೆಡಿಎಸ್‌ ಶಾಸಕ ಸಾ. ರಾ. ಮಹೇಶ್, “‌ಡ್ರಗ್ಸ್‌ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲ್ಮ್ ನೋಡುವ ಅಡಿಕ್ಷನ್‌ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ. ಡ್ರಗ್ಸ್‌ ಆದರೂ, ಬ್ಲೂ ಫಿಲ್ಮ್ ಆದರೂ…” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಮಧ್ಯೆ ಡ್ರಗ್ಸ್ ಜಾಲದಲ್ಲಿ 13 ಕ್ವಿಂಟಾಲ್ ಗಾಂಜಾವನ್ನು ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ವಶಪಡಿಸಿಕೊಂಡಿದ್ದು,  ಬಂಧಿತ ಆರೋಪಿ ಚಂದ್ರಕಾಂತ್‌ ಬಿಜೆಪಿಯ ಕಾರ್ಯಕರ್ತ; ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳಿಗೆ ಬಿಜೆಪಿ ತಾಣವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್, “ಕಲಬುರಗಿಯಲ್ಲಿ ಗಾಂಜಾ ವಶ ಪ್ರಕರಣದ ಆರೋಪಿ ಚಂದ್ರಕಾಂತನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಳೆದ ವರ್ಷ ಆತ ಸ್ವಯಂಪ್ರೇರಿತವಾಗಿ ಪಕ್ಷದ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಪಕ್ಷದ ಸದಸ್ಯತ್ವವನ್ನೇನೂ ಪಡೆದಿಲ್ಲ ಹಾಗೂ ಪದಾಧಿಕಾರಿಯಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ದಂಧೆ – ಬೆಚ್ಚದಿರಿ: ವಿವರಗಳಷ್ಟೇ, ಯಾರ ಹೆಸರುಗಳೂ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...