ರಾಜ್ಯದಲ್ಲಿ ಡ್ರಗ್ಸ್ ಜಾಲದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಇದರ ಸುತ್ತ ರಾಜಕೀಯ ಕೆಸರೆರಚಾಟಗಳೂ ನಡೆಯುತ್ತಿವೆ. ಈ ನಡುವೆ ಜೆಡಿಎಸ್ ಶಾಸಕ ಸಾರಾ ಮಹೇಶ್ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಉಲ್ಲೇಖಿಸಿ, ’ಬ್ಲೂಫಿಲಂ ನೋಡುವುದು ಕೂಡಾ ವ್ಯಸನ’ ಎನ್ನುವ ಮೂಲಕ ಕಾಲೆಳೆದಿದ್ದಾರೆ.
2012 ರಲ್ಲಿ ಲಕ್ಷ್ಮಣ ಸವದಿ, ಕೃಷ್ಣ ಜೆ ಪಾಲೇಮಾರ್ ಮತ್ತು ಸಿಸಿ ಪಾಟೀಲ್ ಮೇಲೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲ್ಮ್ ನೋಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: 13 ಕ್ವಿಂಟಾಲ್ ಗಾಂಜಾ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ
ಡ್ರಗ್ಸ್ ಜಾಲ ಕ್ರಿಯಾಶೀಲರಾಗಿರುವುದರ ಬಗ್ಗೆ ರಾಜ್ಯದಲ್ಲಿ ವರದಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ‘ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು’ ಎಂದು ಹೇಳಿದ್ದರು.
ಇದಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, “ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ನೋಡಿ ನಗು ಬಂತು. ಅವರು ಹೇಳಿದ ಮಾತು ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ” ಎಂದು ಪ್ರತಿಕ್ರಿಯಿಸಿದ್ದರು.
ಇದಕ್ಕೆ ವ್ಯಂಗ್ಯವಾಡಿರುವ ಜೆಡಿಎಸ್ ಶಾಸಕ ಸಾ. ರಾ. ಮಹೇಶ್, “ಡ್ರಗ್ಸ್ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲ್ಮ್ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ. ಡ್ರಗ್ಸ್ ಆದರೂ, ಬ್ಲೂ ಫಿಲ್ಮ್ ಆದರೂ…” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?
ಡ್ರಗ್ಸ್ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ.
ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್ ಆದರೂ, ಬ್ಲೂ ಫಿಲಂ ಆದರೂ…— Sa Ra Mahesh (@SaRa_Mahesh_JDS) September 10, 2020
ಈ ಮಧ್ಯೆ ಡ್ರಗ್ಸ್ ಜಾಲದಲ್ಲಿ 13 ಕ್ವಿಂಟಾಲ್ ಗಾಂಜಾವನ್ನು ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ವಶಪಡಿಸಿಕೊಂಡಿದ್ದು, ಬಂಧಿತ ಆರೋಪಿ ಚಂದ್ರಕಾಂತ್ ಬಿಜೆಪಿಯ ಕಾರ್ಯಕರ್ತ; ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳಿಗೆ ಬಿಜೆಪಿ ತಾಣವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್, “ಕಲಬುರಗಿಯಲ್ಲಿ ಗಾಂಜಾ ವಶ ಪ್ರಕರಣದ ಆರೋಪಿ ಚಂದ್ರಕಾಂತನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಳೆದ ವರ್ಷ ಆತ ಸ್ವಯಂಪ್ರೇರಿತವಾಗಿ ಪಕ್ಷದ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಪಕ್ಷದ ಸದಸ್ಯತ್ವವನ್ನೇನೂ ಪಡೆದಿಲ್ಲ ಹಾಗೂ ಪದಾಧಿಕಾರಿಯಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಡ್ರಗ್ಸ್ ದಂಧೆ – ಬೆಚ್ಚದಿರಿ: ವಿವರಗಳಷ್ಟೇ, ಯಾರ ಹೆಸರುಗಳೂ ಇಲ್ಲ


