Homeಕರ್ನಾಟಕಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

2012 ರಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲಂ ನೋಡಿದ್ದಾರೆ ಎಂಬ ಆರೋಪ ಲಕ್ಷ್ಮಣ ಸವದಿ ಸೇರಿದಂತೆ ಇತರರ ಮೇಲೆ ಕೇಳಿ ಬಂದಿತ್ತು.

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಇದರ ಸುತ್ತ ರಾಜಕೀಯ ಕೆಸರೆರಚಾಟಗಳೂ ನಡೆಯುತ್ತಿವೆ. ಈ ನಡುವೆ ಜೆಡಿಎಸ್ ಶಾಸಕ ಸಾರಾ ಮಹೇಶ್ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಉಲ್ಲೇಖಿಸಿ, ’ಬ್ಲೂಫಿಲಂ ನೋಡುವುದು ಕೂಡಾ ವ್ಯಸನ’ ಎನ್ನುವ ಮೂಲಕ ಕಾಲೆಳೆದಿದ್ದಾರೆ.

2012 ರಲ್ಲಿ ಲಕ್ಷ್ಮಣ ಸವದಿ, ಕೃಷ್ಣ ಜೆ ಪಾಲೇಮಾರ್ ಮತ್ತು ಸಿಸಿ ಪಾಟೀಲ್ ಮೇಲೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲ್ಮ್ ನೋಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: 13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

ಡ್ರಗ್ಸ್ ಜಾಲ ಕ್ರಿಯಾಶೀಲರಾಗಿರುವುದರ ಬಗ್ಗೆ ರಾಜ್ಯದಲ್ಲಿ ವರದಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ‘ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು’ ಎಂದು ಹೇಳಿದ್ದರು.

ಇದಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, “ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ನೋಡಿ ನಗು ಬಂತು. ಅವರು ಹೇಳಿದ ಮಾತು ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ” ಎಂದು ಪ್ರತಿಕ್ರಿಯಿಸಿದ್ದರು.

ಇದಕ್ಕೆ ವ್ಯಂಗ್ಯವಾಡಿರುವ ಜೆಡಿಎಸ್‌ ಶಾಸಕ ಸಾ. ರಾ. ಮಹೇಶ್, “‌ಡ್ರಗ್ಸ್‌ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲ್ಮ್ ನೋಡುವ ಅಡಿಕ್ಷನ್‌ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ. ಡ್ರಗ್ಸ್‌ ಆದರೂ, ಬ್ಲೂ ಫಿಲ್ಮ್ ಆದರೂ…” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಮಧ್ಯೆ ಡ್ರಗ್ಸ್ ಜಾಲದಲ್ಲಿ 13 ಕ್ವಿಂಟಾಲ್ ಗಾಂಜಾವನ್ನು ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ವಶಪಡಿಸಿಕೊಂಡಿದ್ದು,  ಬಂಧಿತ ಆರೋಪಿ ಚಂದ್ರಕಾಂತ್‌ ಬಿಜೆಪಿಯ ಕಾರ್ಯಕರ್ತ; ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳಿಗೆ ಬಿಜೆಪಿ ತಾಣವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್, “ಕಲಬುರಗಿಯಲ್ಲಿ ಗಾಂಜಾ ವಶ ಪ್ರಕರಣದ ಆರೋಪಿ ಚಂದ್ರಕಾಂತನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಳೆದ ವರ್ಷ ಆತ ಸ್ವಯಂಪ್ರೇರಿತವಾಗಿ ಪಕ್ಷದ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಪಕ್ಷದ ಸದಸ್ಯತ್ವವನ್ನೇನೂ ಪಡೆದಿಲ್ಲ ಹಾಗೂ ಪದಾಧಿಕಾರಿಯಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ದಂಧೆ – ಬೆಚ್ಚದಿರಿ: ವಿವರಗಳಷ್ಟೇ, ಯಾರ ಹೆಸರುಗಳೂ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...