Homeಕರ್ನಾಟಕಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

2012 ರಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲಂ ನೋಡಿದ್ದಾರೆ ಎಂಬ ಆರೋಪ ಲಕ್ಷ್ಮಣ ಸವದಿ ಸೇರಿದಂತೆ ಇತರರ ಮೇಲೆ ಕೇಳಿ ಬಂದಿತ್ತು.

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಇದರ ಸುತ್ತ ರಾಜಕೀಯ ಕೆಸರೆರಚಾಟಗಳೂ ನಡೆಯುತ್ತಿವೆ. ಈ ನಡುವೆ ಜೆಡಿಎಸ್ ಶಾಸಕ ಸಾರಾ ಮಹೇಶ್ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಉಲ್ಲೇಖಿಸಿ, ’ಬ್ಲೂಫಿಲಂ ನೋಡುವುದು ಕೂಡಾ ವ್ಯಸನ’ ಎನ್ನುವ ಮೂಲಕ ಕಾಲೆಳೆದಿದ್ದಾರೆ.

2012 ರಲ್ಲಿ ಲಕ್ಷ್ಮಣ ಸವದಿ, ಕೃಷ್ಣ ಜೆ ಪಾಲೇಮಾರ್ ಮತ್ತು ಸಿಸಿ ಪಾಟೀಲ್ ಮೇಲೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲ್ಮ್ ನೋಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: 13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

ಡ್ರಗ್ಸ್ ಜಾಲ ಕ್ರಿಯಾಶೀಲರಾಗಿರುವುದರ ಬಗ್ಗೆ ರಾಜ್ಯದಲ್ಲಿ ವರದಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ‘ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು’ ಎಂದು ಹೇಳಿದ್ದರು.

ಇದಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, “ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ನೋಡಿ ನಗು ಬಂತು. ಅವರು ಹೇಳಿದ ಮಾತು ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ” ಎಂದು ಪ್ರತಿಕ್ರಿಯಿಸಿದ್ದರು.

ಇದಕ್ಕೆ ವ್ಯಂಗ್ಯವಾಡಿರುವ ಜೆಡಿಎಸ್‌ ಶಾಸಕ ಸಾ. ರಾ. ಮಹೇಶ್, “‌ಡ್ರಗ್ಸ್‌ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲ್ಮ್ ನೋಡುವ ಅಡಿಕ್ಷನ್‌ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ. ಡ್ರಗ್ಸ್‌ ಆದರೂ, ಬ್ಲೂ ಫಿಲ್ಮ್ ಆದರೂ…” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಮಧ್ಯೆ ಡ್ರಗ್ಸ್ ಜಾಲದಲ್ಲಿ 13 ಕ್ವಿಂಟಾಲ್ ಗಾಂಜಾವನ್ನು ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ವಶಪಡಿಸಿಕೊಂಡಿದ್ದು,  ಬಂಧಿತ ಆರೋಪಿ ಚಂದ್ರಕಾಂತ್‌ ಬಿಜೆಪಿಯ ಕಾರ್ಯಕರ್ತ; ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳಿಗೆ ಬಿಜೆಪಿ ತಾಣವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್, “ಕಲಬುರಗಿಯಲ್ಲಿ ಗಾಂಜಾ ವಶ ಪ್ರಕರಣದ ಆರೋಪಿ ಚಂದ್ರಕಾಂತನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಳೆದ ವರ್ಷ ಆತ ಸ್ವಯಂಪ್ರೇರಿತವಾಗಿ ಪಕ್ಷದ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಪಕ್ಷದ ಸದಸ್ಯತ್ವವನ್ನೇನೂ ಪಡೆದಿಲ್ಲ ಹಾಗೂ ಪದಾಧಿಕಾರಿಯಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ದಂಧೆ – ಬೆಚ್ಚದಿರಿ: ವಿವರಗಳಷ್ಟೇ, ಯಾರ ಹೆಸರುಗಳೂ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...