Homeಮುಖಪುಟಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಕ್ಕಳ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ (ಪೋಕ್ಸೊ) ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪಿನಲ್ಲಿ ಹೇಳಿದ್ದು, ಈ ಕುರಿತು ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.

ನ್ಯಾಯಮೂರ್ತಿ ಆನಂದ ವೆಂಕಟೇಶ್ ಅವರ ಪೀಠ, ಪೋಕ್ಸೊ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ಮಗುವನ್ನು ಅಥವಾ ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸಿರಬೇಕು ಎಂದು ಗಮನಿಸಿದ್ದು, ಪ್ರಸ್ತುತ ಪ್ರಕರಣದಲ್ಲಿ ಆರೋಪಿಗಳು ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸಿದ್ದಾರೆ ಆದರೆ ಅಶ್ಲೀಲ ಉದ್ದೇಶಗಳಿಗಾಗಿ ಮಗುವನ್ನು ಅಥವಾ ಮಕ್ಕಳನ್ನು ಬಳಸಿಲ್ಲ ಎಂಬುವುದನ್ನು ಕಂಡುಕೊಂಡಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-2012ರ ಸೆಕ್ಷನ್ 14(1)ರ ಅಡಿಯಲ್ಲಿ ಅಪರಾಧವನ್ನು ಪರಿಗಣಿಸಲು ಮಗುವನ್ನು ಅಥವಾ ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸಿರಬೇಕು. ಆರೋಪಿಯು ಮಕ್ಕಳ ಅಶ್ಲೀಲ ವೀಡಿಯೊವನ್ನು ವೀಕ್ಷಿಸಿದ್ದಾರೆ ಎಂದು ಭಾವಿಸಿದರೂ ಅದು ಕಟ್ಟುನಿಟ್ಟಾಗಿ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ- 2012ರ ಸೆಕ್ಷನ್ 14(1)ರ ವ್ಯಾಪ್ತಿಗೆ ಬರುವುದಿಲ್ಲ.

ಪ್ರಸ್ತುತ ಪ್ರಕರಣದಲ್ಲಿ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರಿಗೆ ಬಂದ ಪತ್ರದ ಆಧಾರದ ಮೇಲೆ ಆರೋಪಿಯ ವಿರುದ್ಧ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಯಿತು ಮತ್ತು ಫೋರೆನ್ಸಿಕ್ ವಿಶ್ಲೇಷಣೆಯನ್ನು ನಡೆಸಲಾಗಿದೆ. ಈ ವೇಳೆ ಮೊಬೈಲ್ ಫೋನ್‌ನಲ್ಲಿ ಹದಿಹರೆಯದ ಹುಡುಗರದ್ದು ಒಳಗೊಂಡ ಮಕ್ಕಳ ಅಶ್ಲೀಲ ವಿಡಿಯೋ ಸೇರಿದಂತೆ ಎರಡು ಫೈಲ್‌ಗಳನ್ನು ಹೊಂದಿತ್ತು. ಮಾಹಿತಿ ತಂತ್ರಜ್ಞಾನ ಕಾಯಿದೆ 200 ಮತ್ತು POCSO ಕಾಯಿದೆಯ ಸೆಕ್ಷನ್ 14(1) ರ ಸೆಕ್ಷನ್ 67B ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದರಿಂದಾಗಿ ಆರೋಪಿ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಐಟಿ ಕಾಯಿದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಆರೋಪಿಯು ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವಿಡಿಯೋಗಳನ್ನು ಪ್ರಕಟಿಸಬೇಕು, ರವಾನಿಸಬೇಕು ಮತ್ತು ರಚಿಸಿರಬೇಕು. ಒಬ್ಬ ವ್ಯಕ್ತಿಯು ತನ್ನ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಮಕ್ಕಳ ಅಶ್ಲೀಲತೆಯನ್ನು ಡೌನ್‌ಲೋಡ್ ಮಾಡಿ ಹೆಚ್ಚಿನದನ್ನು ಮಾಡದೆ ಅದನ್ನು ವೀಕ್ಷಿಸಿದ ಎಂದರೆ ಈ ಕಾಯ್ದೆಯಡಿ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿ ಅಶ್ಲೀಲ ಚಿತ್ರಗಳನ್ನು ನೋಡುವುದು ಅಪರಾಧವಲ್ಲ ಎಂದು ಗಮನಿಸಿದ ಕೇರಳ ಹೈಕೋರ್ಟ್‌ನ ಆದೇಶವನ್ನು ಕೂಡ ವಿಚಾರಣೆ ವೇಳೆ ನ್ಯಾಯಾಲಯವು ಉಲ್ಲೇಖಿಸಿದೆ. ಪ್ರಕರಣದಲ್ಲಿ ಐಟಿ ಕಾಯ್ದೆ ಅಥವಾ ಪೋಕ್ಸೊ ಕಾಯ್ದೆಯಡಿ ಅಪರಾಧವನ್ನು ಮಾಡಿಲ್ಲ ಎಂದು ಗಮನಿಸಿದ ನ್ಯಾಯಾಲಯ, ವಿಚಾರಣೆಯನ್ನು ಮುಂದುವರಿಸುವುದು ನ್ಯಾಯಾಲಯದ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಂತೆ ಮತ್ತು ಆರೋಪಿಯ ವೃತ್ತಿಜೀವನಕ್ಕೆ ಅಡ್ಡಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ನ್ಯಾಯಾಲಯವು ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಿದೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...