Homeಮುಖಪುಟಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಕ್ಕಳ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ (ಪೋಕ್ಸೊ) ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪಿನಲ್ಲಿ ಹೇಳಿದ್ದು, ಈ ಕುರಿತು ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.

ನ್ಯಾಯಮೂರ್ತಿ ಆನಂದ ವೆಂಕಟೇಶ್ ಅವರ ಪೀಠ, ಪೋಕ್ಸೊ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ಮಗುವನ್ನು ಅಥವಾ ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸಿರಬೇಕು ಎಂದು ಗಮನಿಸಿದ್ದು, ಪ್ರಸ್ತುತ ಪ್ರಕರಣದಲ್ಲಿ ಆರೋಪಿಗಳು ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸಿದ್ದಾರೆ ಆದರೆ ಅಶ್ಲೀಲ ಉದ್ದೇಶಗಳಿಗಾಗಿ ಮಗುವನ್ನು ಅಥವಾ ಮಕ್ಕಳನ್ನು ಬಳಸಿಲ್ಲ ಎಂಬುವುದನ್ನು ಕಂಡುಕೊಂಡಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-2012ರ ಸೆಕ್ಷನ್ 14(1)ರ ಅಡಿಯಲ್ಲಿ ಅಪರಾಧವನ್ನು ಪರಿಗಣಿಸಲು ಮಗುವನ್ನು ಅಥವಾ ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸಿರಬೇಕು. ಆರೋಪಿಯು ಮಕ್ಕಳ ಅಶ್ಲೀಲ ವೀಡಿಯೊವನ್ನು ವೀಕ್ಷಿಸಿದ್ದಾರೆ ಎಂದು ಭಾವಿಸಿದರೂ ಅದು ಕಟ್ಟುನಿಟ್ಟಾಗಿ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ- 2012ರ ಸೆಕ್ಷನ್ 14(1)ರ ವ್ಯಾಪ್ತಿಗೆ ಬರುವುದಿಲ್ಲ.

ಪ್ರಸ್ತುತ ಪ್ರಕರಣದಲ್ಲಿ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರಿಗೆ ಬಂದ ಪತ್ರದ ಆಧಾರದ ಮೇಲೆ ಆರೋಪಿಯ ವಿರುದ್ಧ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಯಿತು ಮತ್ತು ಫೋರೆನ್ಸಿಕ್ ವಿಶ್ಲೇಷಣೆಯನ್ನು ನಡೆಸಲಾಗಿದೆ. ಈ ವೇಳೆ ಮೊಬೈಲ್ ಫೋನ್‌ನಲ್ಲಿ ಹದಿಹರೆಯದ ಹುಡುಗರದ್ದು ಒಳಗೊಂಡ ಮಕ್ಕಳ ಅಶ್ಲೀಲ ವಿಡಿಯೋ ಸೇರಿದಂತೆ ಎರಡು ಫೈಲ್‌ಗಳನ್ನು ಹೊಂದಿತ್ತು. ಮಾಹಿತಿ ತಂತ್ರಜ್ಞಾನ ಕಾಯಿದೆ 200 ಮತ್ತು POCSO ಕಾಯಿದೆಯ ಸೆಕ್ಷನ್ 14(1) ರ ಸೆಕ್ಷನ್ 67B ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದರಿಂದಾಗಿ ಆರೋಪಿ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಐಟಿ ಕಾಯಿದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಆರೋಪಿಯು ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವಿಡಿಯೋಗಳನ್ನು ಪ್ರಕಟಿಸಬೇಕು, ರವಾನಿಸಬೇಕು ಮತ್ತು ರಚಿಸಿರಬೇಕು. ಒಬ್ಬ ವ್ಯಕ್ತಿಯು ತನ್ನ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಮಕ್ಕಳ ಅಶ್ಲೀಲತೆಯನ್ನು ಡೌನ್‌ಲೋಡ್ ಮಾಡಿ ಹೆಚ್ಚಿನದನ್ನು ಮಾಡದೆ ಅದನ್ನು ವೀಕ್ಷಿಸಿದ ಎಂದರೆ ಈ ಕಾಯ್ದೆಯಡಿ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿ ಅಶ್ಲೀಲ ಚಿತ್ರಗಳನ್ನು ನೋಡುವುದು ಅಪರಾಧವಲ್ಲ ಎಂದು ಗಮನಿಸಿದ ಕೇರಳ ಹೈಕೋರ್ಟ್‌ನ ಆದೇಶವನ್ನು ಕೂಡ ವಿಚಾರಣೆ ವೇಳೆ ನ್ಯಾಯಾಲಯವು ಉಲ್ಲೇಖಿಸಿದೆ. ಪ್ರಕರಣದಲ್ಲಿ ಐಟಿ ಕಾಯ್ದೆ ಅಥವಾ ಪೋಕ್ಸೊ ಕಾಯ್ದೆಯಡಿ ಅಪರಾಧವನ್ನು ಮಾಡಿಲ್ಲ ಎಂದು ಗಮನಿಸಿದ ನ್ಯಾಯಾಲಯ, ವಿಚಾರಣೆಯನ್ನು ಮುಂದುವರಿಸುವುದು ನ್ಯಾಯಾಲಯದ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಂತೆ ಮತ್ತು ಆರೋಪಿಯ ವೃತ್ತಿಜೀವನಕ್ಕೆ ಅಡ್ಡಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ನ್ಯಾಯಾಲಯವು ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಿದೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...