Homeಮುಖಪುಟರಾಜಕೀಯ ಮೇಲಾಟದ ನಡುವೆ ದೆಹಲಿಯಲ್ಲಿ ತೀವ್ರಗೊಂಡ ಜಲ ಬಿಕ್ಕಟ್ಟು; ಹಿಂಸಾಚಾರಕ್ಕೆ ಮುಂದಾದ ಜನರು

ರಾಜಕೀಯ ಮೇಲಾಟದ ನಡುವೆ ದೆಹಲಿಯಲ್ಲಿ ತೀವ್ರಗೊಂಡ ಜಲ ಬಿಕ್ಕಟ್ಟು; ಹಿಂಸಾಚಾರಕ್ಕೆ ಮುಂದಾದ ಜನರು

- Advertisement -
- Advertisement -

ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ತೀವ್ರತರವಾದ ಶಾಖದ ಅಲೆಯ ನಡುವೆಯೂ ಜಲ ಬಿಕ್ಕಟ್ಟು ಸಹ ಉಲ್ಬಣಗೊಂಡಿದ್ದು, ದೆಹಲಿಯಲ್ಲಿನ ನೀರಿನ ಸಮಸ್ಯೆ ಕಗ್ಗಂಟಾಗಿ ಉಳಿದಿದೆ. ನೀರಿನ ಕೊರತೆಯಿಂದ ಕಂಗೆಟ್ಟ ಜನರು ಹಿಂಸಾಚಾರಕ್ಕೆ ಮುಂದಾಗಿದ್ದು, ದ್ವಾರಕಾದಲ್ಲಿ ಸಾರ್ವಜನಿಕ ನಲ್ಲಿಯಿಂದ ನೀರು ತುಂಬಿಸುವ ವಿವಾದದಲ್ಲಿ ಮೂವರು ಗಾಯಗೊಂಡಿದ್ದಾರೆ. ದ್ವಾರಕಾ ಸೆಕ್ಟರ್ 23 ರಲ್ಲಿ ನಡೆದ ಜಗಳದ ಕುರಿತು ಎರಡು ಪಿಸಿಆರ್ ಕರೆಗಳು ಬಂದಿವೆ ಮತ್ತು ತನಿಖೆಗಾಗಿ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

“ಆರಂಭದಲ್ಲಿ, ವಿವಾದದಿಂದಾಗಿ ಮೂವರು ಗಾಯಗೊಂಡಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ ಮತ್ತು ಅವರನ್ನು ಚಿಕಿತ್ಸೆಗಾಗಿ ಇಂದಿರಾ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡೂ ಕಡೆಯವರ ಹೇಳಿಕೆಗಳ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಮಧ್ಯಪ್ರವೇಶಿಸುವಂತೆ ಆಪ್ ಶಾಸಕರು ಒತ್ತಾಯಿಸಿದ್ದಾರೆ. ಭಾನುವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಸಲ್ಲಿಸಿದ್ದು, ಹರಿಯಾಣ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ದೆಹಲಿ ನಿವಾಸಿಗಳಿಗೆ ತಕ್ಷಣದ ಪರಿಹಾರವನ್ನು ಒದಗಿಸುವಂತೆ ಒತ್ತಾಯಿಸಿದೆ.

ದೆಹಲಿಯಲ್ಲಿ ನೀರಿನ ಸಮಸ್ಯೆ ಪ್ರತಿ ಕ್ಷಣವೂ ಗಂಭೀರವಾಗುತ್ತಿದೆ ಎಂದು ಎಎಪಿ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ. “ತೀವ್ರ ಶಾಖವಿದ್ದು, ಈ ಬಿಸಿಲಿನ ತಾಪದಲ್ಲಿ ನೀರೇ ಜೀವನ, ನೀರಿನ ಬಿಕ್ಕಟ್ಟು ಎಂದರೆ ಜೀವನ ಬಿಕ್ಕಟ್ಟು” ಎಂದು ಪಾಂಡೆ ಹೇಳಿದರು.

ಪಕ್ಷದ ಎಲ್ಲ ಶಾಸಕರು ಶನಿವಾರ ಕೇಂದ್ರ ಜಲ ಶಕ್ತಿ ಸಚಿವರಿಗೆ ಪತ್ರ ಬರೆದಿದ್ದಾರೆ, ಅವರ ಎಲ್ಲ ಸಾರ್ವಜನಿಕ ಮತ್ತು ವೈಯಕ್ತಿಕ ಫೋನ್ ಸಂಖ್ಯೆಗಳಿಗೆ ಇಮೇಲ್ ಮತ್ತು ಸಂದೇಶ ಕಳುಹಿಸಿದ್ದಾರೆ. ದೆಹಲಿಯಲ್ಲಿ ಗಂಭೀರ ನೀರಿನ ಸಮಸ್ಯೆ ಇದೆ ಎಂದು ಹೇಳಿದ್ದಾರೆ ಎಂದು ಎಎಪಿ ನಾಯಕ ಹೇಳಿದರು. ಆದರೆ, ನಮ್ಮ ಭೇಟಿ ವೇಳೆ ಪಾಟೀಲ್ ಅವರ ನಿವಾಸದಲ್ಲಿ ಇರಲಿಲ್ಲ ಎಂದು ಎಎಪಿ ನಾಯಕರು ಹೇಳಿದ್ದಾರೆ.

ನಗರದ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ಬಿಜೆಪಿ ಭಾನುವಾರ ‘ಮಟ್ಕಾ ಫೋಡ್’ ಪ್ರತಿಭಟನೆ ನಡೆಸಿತು. ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ನೇತೃತ್ವದಲ್ಲಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನೀರಿನ ಕೊರತೆಯ ಕುರಿತು ನಗರದ 14 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರದ ದುರಾಡಳಿತವನ್ನು ಆರೋಪಿಸಿದ ಸಚ್‌ದೇವ, “ದೆಹಲಿಯಲ್ಲಿ ನೀರಿನ ಕೊರತೆಯು ನೈಸರ್ಗಿಕ ಕಾರಣಗಳಿಂದಲ್ಲ. ಆದರೆ, ಆಮ್ ಆದ್ಮಿ ಪಕ್ಷದ ಅಸಮರ್ಪಕ ನಿರ್ವಹಣೆ ಮತ್ತು ನಿರ್ಲಕ್ಷ್ಯದ ಪರಿಣಾಮವಾಗಿದೆ ಎಂದು ನಾವು ಯಾವಾಗಲೂ ಸಮರ್ಥಿಸಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ; ದೆಹಲಿ: ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...