Homeದಲಿತ್ ಫೈಲ್ಸ್ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

- Advertisement -
- Advertisement -

ವೆಂಗೈವಾಯಲ್‌ನ ದಲಿತ ನಿವಾಸಿಗಳ ಪ್ರತಿಭಟನೆ ಮುಂದುವರೆದಿದೆ; ಡಿಸೆಂಬರ್ 2022 ರ ಘಟನೆಯ ಬಗ್ಗೆ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ದಲಿತರಿಗೆ ಪೂರೈಸಲಾದ ಓವರ್‌ಹೆಡ್ ನೀರಿನ ಟ್ಯಾಂಕ್‌ನಲ್ಲಿ ಮಲ ಮಿಶ್ರಣವಾಗಿದೆ ಎಂದು ಆರೋಪಿಸಿ ದಲಿತ ಸಮುದಾಯದ ಮೂವರು ‘ವಿಸಿಲ್ ಬ್ಲೋವರ್‌’ಗಳ ಮೇಲೆ ಸಿಬಿ-ಸಿಐಡಿ ವರದಿ ಹೊರಿಸಿದ ನಂತರ ದಲಿತರ ಧರಣಿ ಆರಂಭವಾಯಿತು.

ವೈಯಕ್ತಿಕ ಉದ್ದೇಶದಿಂದ ಮೂವರು ವ್ಯಕ್ತಿಗಳು ಅಪರಾಧ ಮಾಡಿದ್ದಾರೆ ಎಂದು ಮದ್ರಾಸ್ ಹೈಕೋರ್ಟ್‌ಗೆ ಸಿಬಿ-ಸಿಐಡಿ ಸಲ್ಲಿಸಿದ ವರದಿಯು ದಲಿತ ನಿವಾಸಿಗಳನ್ನು ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ಅವರು ಪ್ರತಿಭಟನೆಗೆ ಮುಂದಾದರು.

ಸಿಬಿ-ಸಿಐಡಿ ಪೊಲೀಸರು ಕಳೆದ ಸೋಮವಾರ ನ್ಯಾಯಾಲಯದಲ್ಲಿ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದರು. ಅದೇ ಗ್ರಾಮದ ಮೂವರು ಯುವಕರ ಮೇಲೆ ಆರೋಪ ಹೊರಿಸಿದರು.

ಗ್ರಾಮದ ನಿವಾಸಿ ಕೆ. ಕಣ್ಣದಾಸನ್ ಮಾತನಾಡಿ, “ನಾವು ಮಾಡದ ಕೃತ್ಯಕ್ಕೆ ನಮ್ಮನ್ನು ದೂಷಿಸುವ ಮೂಲಕ ಸಿಬಿ-ಸಿಐಡಿ ವರದಿಯು ನಮ್ಮ ಖ್ಯಾತಿಗೆ ಕಳಂಕ ತಂದಿದೆ. ಪ್ರಕರಣವನ್ನು ತ್ವರಿತವಾಗಿ ಮುಗಿಸಲು ನಮ್ಮ ಮೇಲೆ ಸಂಪೂರ್ಣ ಹೊಣೆಯನ್ನು ಹೊರಿಸುವುದು ಅನ್ಯಾಯ ಎಂದು ನಾವು ಭಾವಿಸುತ್ತೇವೆ” ಎಂದರು.

“ಮಾಧ್ಯಮಗಳಲ್ಲಿ ಪ್ರಸಾರವಾಗುವ ಕೆಲವು ಆಡಿಯೊ ತುಣುಕುಗಳನ್ನು ನಾವು ಮಾಡದ ಅಪರಾಧವನ್ನು ಒಪ್ಪಿಕೊಳ್ಳುತ್ತಿದ್ದೇವೆ ಎಂದು ತೋರುವಂತೆ ಮಾಡಲು, ನಮ್ಮನ್ನು ಅಪರಾಧಿಗಳಾಗಿ ಚಿತ್ರಿಸಲು ತಿರುಚಲಾಗಿದೆ. ಇದು ನಾವು ಈಗಾಗಲೇ ಹೊರುವ ಹೊರೆಯನ್ನು ಹೆಚ್ಚಿಸಿದೆ. ತನಿಖೆಯ ಸಮಯದಲ್ಲಿ, ಪೊಲೀಸರು ತಪ್ಪೊಪ್ಪಿಕೊಳ್ಳಲು ಒತ್ತಡ ಹೇರಿದರೂ ಸಹ, ಅವರು ಮಾಡದ ಅಪರಾಧವನ್ನು ಒಪ್ಪಿಕೊಳ್ಳದಂತೆ ನಾವು ಯುವಕರಿಗೆ ನಿರಂತರವಾಗಿ ಸಲಹೆ ನೀಡಿದ್ದೇವೆ. ಈಗಲೂ ಸಹ, ಈ ಅಪರಾಧವನ್ನು ಒಪ್ಪಿಕೊಳ್ಳಲು ಪೊಲೀಸ್ ಬಲವಂತದ ಬಗ್ಗೆ ನಮ್ಮ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಲಭ್ಯವಿದೆ” ಎಂದರು.

ಗಣರಾಜ್ಯೋತ್ಸವದ ದಿನವಾದ ಭಾನುವಾರ, ಪ್ರತಿಭಟನಾಕಾರರು ತಮ್ಮ ಪ್ರತಿರೋಧವನ್ನು ಗುರುತಿಸಲು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು.

ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ದಿನದ ಪ್ರತಿಭಟನೆ ಸಂಜೆ ಮುಕ್ತಾಯವಾಯಿತು. ಈ ಮಧ್ಯೆ, ಹೊರಗಿನವರ ಆಗಮನವನ್ನು ತಡೆಗಟ್ಟಲು ವೆಂಗೈವಾಯಲ್‌ಗೆ ಹೋಗುವ ಏಳು ಪ್ರವೇಶ ದ್ವಾರಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಸಿಬಿ-ಸಿಐಡಿಯ ವರದಿ ಟೀಕಿಸಿದ ಡಿಎಂಕೆ ಮಿತ್ರಪಕ್ಷಗಳು

ಡಿಎಂಕೆಯ ಎರಡು ಪ್ರಮುಖ ಮಿತ್ರಪಕ್ಷಗಳಾದ ಸಿಪಿಎಂ ಮತ್ತು ವಿಸಿಕೆ ಶುಕ್ರವಾರ ವರದಿಯನ್ನು ಟೀಕಿಸಿವೆ. ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಂಡಿವೆ.

ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಮ್ ಮಾತನಾಡಿ, “ಚಾರ್ಜ್‌ಶೀಟ್‌ನಲ್ಲಿ ಸಿಬಿ-ಸಿಐಡಿಯ ವಾದವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು. “ಪ್ರಕರಣವನ್ನು ಮುಚ್ಚುವ ಒತ್ತಡದಿಂದ ಪೊಲೀಸರು, ಸಂತ್ರಸ್ತ ಜನರು ಸ್ವತಃ ನೀರಿನಲ್ಲಿ ಮಲ ಬೆರೆಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಿಜವಾದ ಅಪರಾಧಿಗಳನ್ನು ಕಂಡುಹಿಡಿಯಲು ತಮಿಳುನಾಡು ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು” ಎಂದು ಷಣ್ಮುಗಮ್ ಹೇಳಿದರು.

ವಿಸಿಕೆ ಅಧ್ಯಕ್ಷ ತೋಲ್ ತಿರುಮಾವಲವನ್ ಅವರು ಚಾರ್ಜ್‌ಶೀಟ್‌ಗೆ ಆಘಾತ ವ್ಯಕ್ತಪಡಿಸಿದರು. ಇದನ್ನು ಒಪ್ಪಿಕೊಳ್ಳಬಾರದು ಎಂದು ಹೈಕೋರ್ಟ್ ಅನ್ನು ಒತ್ತಾಯಿಸಿದರು. ನ್ಯಾಯಾಲಯವು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಹೇಳಿದರು.

ಮದ್ರಾಸ್ ಹೈಕೋರ್ಟ್ ತನಿಖೆಯ ವಿಳಂಬದ ಬಗ್ಗೆ ಪೊಲೀಸರಿಗೆ ಛೀಮಾರಿ ಹಾಕಿದ ನಂತರವೂ ಸಿಬಿ-ಸಿಐಡಿ ಅಪರಾಧಿಗಳನ್ನು ಗುರುತಿಸುವಲ್ಲಿ ಆಲಸ್ಯ ಹೊಂದಿದೆ ಎಂದು ತಿರುಮಾವಲವನ್ ಹೇಳಿದರು. ಈಗ, ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸದಂತೆ ತಡೆಯಲು, ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಹೇಳಿದ್ದು, ಪುದುಕ್ಕೊಟ್ಟೈ ಕಲೆಕ್ಟರೇಟ್ ಮುಂದೆ ವಿಸಿಕೆ ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.

ಇದನ್ನೂ ಓದಿ; ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...