Homeದಲಿತ್ ಫೈಲ್ಸ್ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

- Advertisement -
- Advertisement -

ವೆಂಗೈವಾಯಲ್‌ನ ದಲಿತ ನಿವಾಸಿಗಳ ಪ್ರತಿಭಟನೆ ಮುಂದುವರೆದಿದೆ; ಡಿಸೆಂಬರ್ 2022 ರ ಘಟನೆಯ ಬಗ್ಗೆ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ದಲಿತರಿಗೆ ಪೂರೈಸಲಾದ ಓವರ್‌ಹೆಡ್ ನೀರಿನ ಟ್ಯಾಂಕ್‌ನಲ್ಲಿ ಮಲ ಮಿಶ್ರಣವಾಗಿದೆ ಎಂದು ಆರೋಪಿಸಿ ದಲಿತ ಸಮುದಾಯದ ಮೂವರು ‘ವಿಸಿಲ್ ಬ್ಲೋವರ್‌’ಗಳ ಮೇಲೆ ಸಿಬಿ-ಸಿಐಡಿ ವರದಿ ಹೊರಿಸಿದ ನಂತರ ದಲಿತರ ಧರಣಿ ಆರಂಭವಾಯಿತು.

ವೈಯಕ್ತಿಕ ಉದ್ದೇಶದಿಂದ ಮೂವರು ವ್ಯಕ್ತಿಗಳು ಅಪರಾಧ ಮಾಡಿದ್ದಾರೆ ಎಂದು ಮದ್ರಾಸ್ ಹೈಕೋರ್ಟ್‌ಗೆ ಸಿಬಿ-ಸಿಐಡಿ ಸಲ್ಲಿಸಿದ ವರದಿಯು ದಲಿತ ನಿವಾಸಿಗಳನ್ನು ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ಅವರು ಪ್ರತಿಭಟನೆಗೆ ಮುಂದಾದರು.

ಸಿಬಿ-ಸಿಐಡಿ ಪೊಲೀಸರು ಕಳೆದ ಸೋಮವಾರ ನ್ಯಾಯಾಲಯದಲ್ಲಿ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದರು. ಅದೇ ಗ್ರಾಮದ ಮೂವರು ಯುವಕರ ಮೇಲೆ ಆರೋಪ ಹೊರಿಸಿದರು.

ಗ್ರಾಮದ ನಿವಾಸಿ ಕೆ. ಕಣ್ಣದಾಸನ್ ಮಾತನಾಡಿ, “ನಾವು ಮಾಡದ ಕೃತ್ಯಕ್ಕೆ ನಮ್ಮನ್ನು ದೂಷಿಸುವ ಮೂಲಕ ಸಿಬಿ-ಸಿಐಡಿ ವರದಿಯು ನಮ್ಮ ಖ್ಯಾತಿಗೆ ಕಳಂಕ ತಂದಿದೆ. ಪ್ರಕರಣವನ್ನು ತ್ವರಿತವಾಗಿ ಮುಗಿಸಲು ನಮ್ಮ ಮೇಲೆ ಸಂಪೂರ್ಣ ಹೊಣೆಯನ್ನು ಹೊರಿಸುವುದು ಅನ್ಯಾಯ ಎಂದು ನಾವು ಭಾವಿಸುತ್ತೇವೆ” ಎಂದರು.

“ಮಾಧ್ಯಮಗಳಲ್ಲಿ ಪ್ರಸಾರವಾಗುವ ಕೆಲವು ಆಡಿಯೊ ತುಣುಕುಗಳನ್ನು ನಾವು ಮಾಡದ ಅಪರಾಧವನ್ನು ಒಪ್ಪಿಕೊಳ್ಳುತ್ತಿದ್ದೇವೆ ಎಂದು ತೋರುವಂತೆ ಮಾಡಲು, ನಮ್ಮನ್ನು ಅಪರಾಧಿಗಳಾಗಿ ಚಿತ್ರಿಸಲು ತಿರುಚಲಾಗಿದೆ. ಇದು ನಾವು ಈಗಾಗಲೇ ಹೊರುವ ಹೊರೆಯನ್ನು ಹೆಚ್ಚಿಸಿದೆ. ತನಿಖೆಯ ಸಮಯದಲ್ಲಿ, ಪೊಲೀಸರು ತಪ್ಪೊಪ್ಪಿಕೊಳ್ಳಲು ಒತ್ತಡ ಹೇರಿದರೂ ಸಹ, ಅವರು ಮಾಡದ ಅಪರಾಧವನ್ನು ಒಪ್ಪಿಕೊಳ್ಳದಂತೆ ನಾವು ಯುವಕರಿಗೆ ನಿರಂತರವಾಗಿ ಸಲಹೆ ನೀಡಿದ್ದೇವೆ. ಈಗಲೂ ಸಹ, ಈ ಅಪರಾಧವನ್ನು ಒಪ್ಪಿಕೊಳ್ಳಲು ಪೊಲೀಸ್ ಬಲವಂತದ ಬಗ್ಗೆ ನಮ್ಮ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಲಭ್ಯವಿದೆ” ಎಂದರು.

ಗಣರಾಜ್ಯೋತ್ಸವದ ದಿನವಾದ ಭಾನುವಾರ, ಪ್ರತಿಭಟನಾಕಾರರು ತಮ್ಮ ಪ್ರತಿರೋಧವನ್ನು ಗುರುತಿಸಲು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು.

ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ದಿನದ ಪ್ರತಿಭಟನೆ ಸಂಜೆ ಮುಕ್ತಾಯವಾಯಿತು. ಈ ಮಧ್ಯೆ, ಹೊರಗಿನವರ ಆಗಮನವನ್ನು ತಡೆಗಟ್ಟಲು ವೆಂಗೈವಾಯಲ್‌ಗೆ ಹೋಗುವ ಏಳು ಪ್ರವೇಶ ದ್ವಾರಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಸಿಬಿ-ಸಿಐಡಿಯ ವರದಿ ಟೀಕಿಸಿದ ಡಿಎಂಕೆ ಮಿತ್ರಪಕ್ಷಗಳು

ಡಿಎಂಕೆಯ ಎರಡು ಪ್ರಮುಖ ಮಿತ್ರಪಕ್ಷಗಳಾದ ಸಿಪಿಎಂ ಮತ್ತು ವಿಸಿಕೆ ಶುಕ್ರವಾರ ವರದಿಯನ್ನು ಟೀಕಿಸಿವೆ. ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಂಡಿವೆ.

ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಮ್ ಮಾತನಾಡಿ, “ಚಾರ್ಜ್‌ಶೀಟ್‌ನಲ್ಲಿ ಸಿಬಿ-ಸಿಐಡಿಯ ವಾದವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು. “ಪ್ರಕರಣವನ್ನು ಮುಚ್ಚುವ ಒತ್ತಡದಿಂದ ಪೊಲೀಸರು, ಸಂತ್ರಸ್ತ ಜನರು ಸ್ವತಃ ನೀರಿನಲ್ಲಿ ಮಲ ಬೆರೆಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಿಜವಾದ ಅಪರಾಧಿಗಳನ್ನು ಕಂಡುಹಿಡಿಯಲು ತಮಿಳುನಾಡು ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು” ಎಂದು ಷಣ್ಮುಗಮ್ ಹೇಳಿದರು.

ವಿಸಿಕೆ ಅಧ್ಯಕ್ಷ ತೋಲ್ ತಿರುಮಾವಲವನ್ ಅವರು ಚಾರ್ಜ್‌ಶೀಟ್‌ಗೆ ಆಘಾತ ವ್ಯಕ್ತಪಡಿಸಿದರು. ಇದನ್ನು ಒಪ್ಪಿಕೊಳ್ಳಬಾರದು ಎಂದು ಹೈಕೋರ್ಟ್ ಅನ್ನು ಒತ್ತಾಯಿಸಿದರು. ನ್ಯಾಯಾಲಯವು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಹೇಳಿದರು.

ಮದ್ರಾಸ್ ಹೈಕೋರ್ಟ್ ತನಿಖೆಯ ವಿಳಂಬದ ಬಗ್ಗೆ ಪೊಲೀಸರಿಗೆ ಛೀಮಾರಿ ಹಾಕಿದ ನಂತರವೂ ಸಿಬಿ-ಸಿಐಡಿ ಅಪರಾಧಿಗಳನ್ನು ಗುರುತಿಸುವಲ್ಲಿ ಆಲಸ್ಯ ಹೊಂದಿದೆ ಎಂದು ತಿರುಮಾವಲವನ್ ಹೇಳಿದರು. ಈಗ, ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸದಂತೆ ತಡೆಯಲು, ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಹೇಳಿದ್ದು, ಪುದುಕ್ಕೊಟ್ಟೈ ಕಲೆಕ್ಟರೇಟ್ ಮುಂದೆ ವಿಸಿಕೆ ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.

ಇದನ್ನೂ ಓದಿ; ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...