Homeದಲಿತ್ ಫೈಲ್ಸ್ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

- Advertisement -
- Advertisement -

ವೆಂಗೈವಾಯಲ್‌ನ ದಲಿತ ನಿವಾಸಿಗಳ ಪ್ರತಿಭಟನೆ ಮುಂದುವರೆದಿದೆ; ಡಿಸೆಂಬರ್ 2022 ರ ಘಟನೆಯ ಬಗ್ಗೆ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ದಲಿತರಿಗೆ ಪೂರೈಸಲಾದ ಓವರ್‌ಹೆಡ್ ನೀರಿನ ಟ್ಯಾಂಕ್‌ನಲ್ಲಿ ಮಲ ಮಿಶ್ರಣವಾಗಿದೆ ಎಂದು ಆರೋಪಿಸಿ ದಲಿತ ಸಮುದಾಯದ ಮೂವರು ‘ವಿಸಿಲ್ ಬ್ಲೋವರ್‌’ಗಳ ಮೇಲೆ ಸಿಬಿ-ಸಿಐಡಿ ವರದಿ ಹೊರಿಸಿದ ನಂತರ ದಲಿತರ ಧರಣಿ ಆರಂಭವಾಯಿತು.

ವೈಯಕ್ತಿಕ ಉದ್ದೇಶದಿಂದ ಮೂವರು ವ್ಯಕ್ತಿಗಳು ಅಪರಾಧ ಮಾಡಿದ್ದಾರೆ ಎಂದು ಮದ್ರಾಸ್ ಹೈಕೋರ್ಟ್‌ಗೆ ಸಿಬಿ-ಸಿಐಡಿ ಸಲ್ಲಿಸಿದ ವರದಿಯು ದಲಿತ ನಿವಾಸಿಗಳನ್ನು ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ಅವರು ಪ್ರತಿಭಟನೆಗೆ ಮುಂದಾದರು.

ಸಿಬಿ-ಸಿಐಡಿ ಪೊಲೀಸರು ಕಳೆದ ಸೋಮವಾರ ನ್ಯಾಯಾಲಯದಲ್ಲಿ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದರು. ಅದೇ ಗ್ರಾಮದ ಮೂವರು ಯುವಕರ ಮೇಲೆ ಆರೋಪ ಹೊರಿಸಿದರು.

ಗ್ರಾಮದ ನಿವಾಸಿ ಕೆ. ಕಣ್ಣದಾಸನ್ ಮಾತನಾಡಿ, “ನಾವು ಮಾಡದ ಕೃತ್ಯಕ್ಕೆ ನಮ್ಮನ್ನು ದೂಷಿಸುವ ಮೂಲಕ ಸಿಬಿ-ಸಿಐಡಿ ವರದಿಯು ನಮ್ಮ ಖ್ಯಾತಿಗೆ ಕಳಂಕ ತಂದಿದೆ. ಪ್ರಕರಣವನ್ನು ತ್ವರಿತವಾಗಿ ಮುಗಿಸಲು ನಮ್ಮ ಮೇಲೆ ಸಂಪೂರ್ಣ ಹೊಣೆಯನ್ನು ಹೊರಿಸುವುದು ಅನ್ಯಾಯ ಎಂದು ನಾವು ಭಾವಿಸುತ್ತೇವೆ” ಎಂದರು.

“ಮಾಧ್ಯಮಗಳಲ್ಲಿ ಪ್ರಸಾರವಾಗುವ ಕೆಲವು ಆಡಿಯೊ ತುಣುಕುಗಳನ್ನು ನಾವು ಮಾಡದ ಅಪರಾಧವನ್ನು ಒಪ್ಪಿಕೊಳ್ಳುತ್ತಿದ್ದೇವೆ ಎಂದು ತೋರುವಂತೆ ಮಾಡಲು, ನಮ್ಮನ್ನು ಅಪರಾಧಿಗಳಾಗಿ ಚಿತ್ರಿಸಲು ತಿರುಚಲಾಗಿದೆ. ಇದು ನಾವು ಈಗಾಗಲೇ ಹೊರುವ ಹೊರೆಯನ್ನು ಹೆಚ್ಚಿಸಿದೆ. ತನಿಖೆಯ ಸಮಯದಲ್ಲಿ, ಪೊಲೀಸರು ತಪ್ಪೊಪ್ಪಿಕೊಳ್ಳಲು ಒತ್ತಡ ಹೇರಿದರೂ ಸಹ, ಅವರು ಮಾಡದ ಅಪರಾಧವನ್ನು ಒಪ್ಪಿಕೊಳ್ಳದಂತೆ ನಾವು ಯುವಕರಿಗೆ ನಿರಂತರವಾಗಿ ಸಲಹೆ ನೀಡಿದ್ದೇವೆ. ಈಗಲೂ ಸಹ, ಈ ಅಪರಾಧವನ್ನು ಒಪ್ಪಿಕೊಳ್ಳಲು ಪೊಲೀಸ್ ಬಲವಂತದ ಬಗ್ಗೆ ನಮ್ಮ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಲಭ್ಯವಿದೆ” ಎಂದರು.

ಗಣರಾಜ್ಯೋತ್ಸವದ ದಿನವಾದ ಭಾನುವಾರ, ಪ್ರತಿಭಟನಾಕಾರರು ತಮ್ಮ ಪ್ರತಿರೋಧವನ್ನು ಗುರುತಿಸಲು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು.

ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ದಿನದ ಪ್ರತಿಭಟನೆ ಸಂಜೆ ಮುಕ್ತಾಯವಾಯಿತು. ಈ ಮಧ್ಯೆ, ಹೊರಗಿನವರ ಆಗಮನವನ್ನು ತಡೆಗಟ್ಟಲು ವೆಂಗೈವಾಯಲ್‌ಗೆ ಹೋಗುವ ಏಳು ಪ್ರವೇಶ ದ್ವಾರಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಸಿಬಿ-ಸಿಐಡಿಯ ವರದಿ ಟೀಕಿಸಿದ ಡಿಎಂಕೆ ಮಿತ್ರಪಕ್ಷಗಳು

ಡಿಎಂಕೆಯ ಎರಡು ಪ್ರಮುಖ ಮಿತ್ರಪಕ್ಷಗಳಾದ ಸಿಪಿಎಂ ಮತ್ತು ವಿಸಿಕೆ ಶುಕ್ರವಾರ ವರದಿಯನ್ನು ಟೀಕಿಸಿವೆ. ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಂಡಿವೆ.

ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಮ್ ಮಾತನಾಡಿ, “ಚಾರ್ಜ್‌ಶೀಟ್‌ನಲ್ಲಿ ಸಿಬಿ-ಸಿಐಡಿಯ ವಾದವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು. “ಪ್ರಕರಣವನ್ನು ಮುಚ್ಚುವ ಒತ್ತಡದಿಂದ ಪೊಲೀಸರು, ಸಂತ್ರಸ್ತ ಜನರು ಸ್ವತಃ ನೀರಿನಲ್ಲಿ ಮಲ ಬೆರೆಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಿಜವಾದ ಅಪರಾಧಿಗಳನ್ನು ಕಂಡುಹಿಡಿಯಲು ತಮಿಳುನಾಡು ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು” ಎಂದು ಷಣ್ಮುಗಮ್ ಹೇಳಿದರು.

ವಿಸಿಕೆ ಅಧ್ಯಕ್ಷ ತೋಲ್ ತಿರುಮಾವಲವನ್ ಅವರು ಚಾರ್ಜ್‌ಶೀಟ್‌ಗೆ ಆಘಾತ ವ್ಯಕ್ತಪಡಿಸಿದರು. ಇದನ್ನು ಒಪ್ಪಿಕೊಳ್ಳಬಾರದು ಎಂದು ಹೈಕೋರ್ಟ್ ಅನ್ನು ಒತ್ತಾಯಿಸಿದರು. ನ್ಯಾಯಾಲಯವು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಹೇಳಿದರು.

ಮದ್ರಾಸ್ ಹೈಕೋರ್ಟ್ ತನಿಖೆಯ ವಿಳಂಬದ ಬಗ್ಗೆ ಪೊಲೀಸರಿಗೆ ಛೀಮಾರಿ ಹಾಕಿದ ನಂತರವೂ ಸಿಬಿ-ಸಿಐಡಿ ಅಪರಾಧಿಗಳನ್ನು ಗುರುತಿಸುವಲ್ಲಿ ಆಲಸ್ಯ ಹೊಂದಿದೆ ಎಂದು ತಿರುಮಾವಲವನ್ ಹೇಳಿದರು. ಈಗ, ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸದಂತೆ ತಡೆಯಲು, ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಹೇಳಿದ್ದು, ಪುದುಕ್ಕೊಟ್ಟೈ ಕಲೆಕ್ಟರೇಟ್ ಮುಂದೆ ವಿಸಿಕೆ ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.

ಇದನ್ನೂ ಓದಿ; ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...