Homeಕರ್ನಾಟಕಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

- Advertisement -
- Advertisement -

ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಗಸ್ಟ್ 2ರಂದು ಎಲ್ಲಾ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಮನೆ ಮನಗೆ ನೀರು ಹರಿಸುವುದು ಯೋಜನೆಯ ಉದ್ದೇಶವಾಗಿದೆ. ಮನೆಮನೆಗೂ ಗಂಗೆ, ವಸೂಲಿ ಹೆಂಗೆ ಎನ್ನುವ ಗೇಲಿಗೂ ಒಳಗಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಇಡೀ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ ಕುಡಿಯುವ/ಬಳಸುವ ನೀರು ಪೂರೈಕೆ ಉದ್ದೇಶ ಹೊಂದಿರುವ ಯೋಜನೆ ಇದಾಗಿದೆ. ಪ್ರತಿಯೊಬ್ಬರಿಗೂ ನೀರು ಕೊಡಬೇಕೆಂಬುದು ಒಳ್ಳೆಯದೇ ಆದರೂ ನೀರು ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಜಲ ಜೀವನ್ ಯೋಜನೆಯಲ್ಲಿ ಇದೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಧ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ನಮ್ಮ ಸೂತ್ರ ಎಂಬ ಯೋಜನೆಯಡಿ ಜಲ ಜೀವನ್ ಮಿಷನ್ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಪ್ರಕಾರ ಪ್ರತಿಯೊಬ್ಬರಿಗೂ ಪ್ರತಿನಿತ್ಯ 35 ಲೀಟರ್ ನೀರು ಪೂರೈಕೆಗೆ ಕ್ರಮ ವಹಿಸುವುದು, ಶುದ್ಧ ನೀರಿನ ಘಟಕಗಳ ಸ್ಥಾಪನೆ ಮಾಡುವುದು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ 77 ಸುವ್ಯವಸ್ಥಿತ ಪ್ರಯೋಗಾಲಯಗಳ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ.

ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರಗಳು ಶೇ.25ರಷ್ಟು ಹಣವನ್ನು ಈ ಯೋಜನೆಗೆ ಭರಿಸುತ್ತವೆ. ರಾಜ್ಯ ಸರ್ಕಾರ ನೇರವಾಗಿಯಲ್ಲದಿದ್ದರೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಈ ಯೋಜನೆಗೆ ಹಣ ಬಳಸುತ್ತವೆ. ಕೇಂದ್ರ ಸರ್ಕಾರ ಶೇ 75ರಷ್ಟು ಹಣವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಜನರಿಗೆ ಕುಡಿಯುವ ನೀರು ಮತ್ತು ಬಳಸುವ ನೀರು ಪೂರೈಕೆ ಮಾಡುತ್ತದೆ.

ಜಲ ಜೀವನ್ ಮಿಷನ್ ಯೋಜನೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಕಾವೇರಿ ಮತ್ತು ಹೇಮಾವತಿ ನದಿ ನೀರು ಪೂರೈಕೆಯಾಗುವ ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಐದು ಜಿಲ್ಲೆಗಳ ಮನೆಮನೆಗೂ ನಲ್ಲಿ ಸಂಪರ್ಕಗಳನ್ನು ಕಲ್ಪಿಸಿ ನೀರು ಪೂರೈಕೆ ಮಾಡುವ ಬಗ್ಗೆ ಪ್ಲಾನ್ ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

ಮನೆಮನೆಗೂ ನೀರು ಪೂರೈಸುವ ಜೊತೆಗೆ ಒಂದು ಮನೆಗೆ ತಿಂಗಳಿಗೆ 30 ರಿಂದ 50 ರೂಪಾಯಿ ನೀರಿನ ಶುಲ್ಕ ನಿಗದಿ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಮನೆಗೂ ಗಂಗೆ ಹರಿದರೆ ಹಾಗೆಯೇ ಸರ್ಕಾರಕ್ಕೂ ಹಣದ ಹರಿವೂ ಹೆಚ್ಚಾಗಲಿದೆ. ಜನರು ಕೊರೊನ ಸಂದರ್ಭದಲ್ಲಿ ದುಡಿಮೆಯಿಲ್ಲದೆ, ಹಣವಿಲ್ಲದೆ ತತ್ತರಿಸಿಹೋಗಿರುವ ವೇಳೆಯಲ್ಲಿ ಪ್ರತಿಮನೆಗೂ ಪ್ರತಿ ತಿಂಗಳಿಗೆ 50 ರೂಪಾಯಿ ನೀರಿನ ಕರ ವಸೂಲಿಗೆ ಸರ್ಕಾರ ರಹಸ್ಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ನಲ್ಲಿಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ತುಮಕೂರು ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಲೀಕೇಜ್ ಆಗುವುದನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಮುಂದಿನ ದಿನಗಳಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

ತುಮಕೂರು ಜಿಲ್ಲೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಜಿಲ್ಲೆಗೆ ಬರಬೇಕಾದ 24 ಟಿಎಂಸಿ ನೀರು ಪೂರ ಬರುತ್ತಿಲ್ಲ. ತುಮಕೂರಿಗೆ ತನ್ನ ಪಾಲಿನ ಕುಡಿಯುವ ನೀರು ಹರಿಸಲು ಹಲವು ರೀತಿಯ ಅಡ್ಡಿಗಳಿವೆ. ತುಮಕೂರು ನಗರಕ್ಕೆ ಕುಡಿಯುವ ನೀರು ಸಾಲುತ್ತಿಲ್ಲ. ಹೇಮಾವತಿ ನದಿ ನೀರು ತಮಿಳುನಾಡಿಗೆ ಹರಿಸಿದರೆ  ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಹಾಗಾಗಿಯೇ ನಗರಕ್ಕೆ ಮೈದಾಳ ಕೆರೆಯಿಂದಲೂ ನೀರು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರ ಯಾರ ಬಳಿಯೂ ಇಲ್ಲ. ರಾಜ್ಯ ಸರ್ಕಾರ ಕುಡಿಯು ನೀರು ಒದಗಿಸುವ ನೆಪದಲ್ಲಿ ಬಡವರು, ಕೂಲಿಕಾರರಿಂದ ಹಣ ವಸೂಲಿ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರನ್ನು ಉಚಿತವಾಗಿ ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಹಾಗೆಂದು ಹಣ ವಸೂಲಿಗಾಗಿ ಯೋಜನೆ ರೂಪಿಸಿದರೆ ಅದು ಜನ ವಿರೋಧಿಯಾಗಲಿದೆ.

  • ಕೆ.ಈ ಸಿದ್ದಯ್ಯ, ತುಮಕೂರು.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಮುಟ್ಟದಿರಿ ಜೋಕೆ – ವೀರಶೈವ ಸ್ವಾಮೀಜಿಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...