Homeಕರ್ನಾಟಕಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

- Advertisement -
- Advertisement -

ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಗಸ್ಟ್ 2ರಂದು ಎಲ್ಲಾ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಮನೆ ಮನಗೆ ನೀರು ಹರಿಸುವುದು ಯೋಜನೆಯ ಉದ್ದೇಶವಾಗಿದೆ. ಮನೆಮನೆಗೂ ಗಂಗೆ, ವಸೂಲಿ ಹೆಂಗೆ ಎನ್ನುವ ಗೇಲಿಗೂ ಒಳಗಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಇಡೀ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ ಕುಡಿಯುವ/ಬಳಸುವ ನೀರು ಪೂರೈಕೆ ಉದ್ದೇಶ ಹೊಂದಿರುವ ಯೋಜನೆ ಇದಾಗಿದೆ. ಪ್ರತಿಯೊಬ್ಬರಿಗೂ ನೀರು ಕೊಡಬೇಕೆಂಬುದು ಒಳ್ಳೆಯದೇ ಆದರೂ ನೀರು ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಜಲ ಜೀವನ್ ಯೋಜನೆಯಲ್ಲಿ ಇದೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಧ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ನಮ್ಮ ಸೂತ್ರ ಎಂಬ ಯೋಜನೆಯಡಿ ಜಲ ಜೀವನ್ ಮಿಷನ್ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಪ್ರಕಾರ ಪ್ರತಿಯೊಬ್ಬರಿಗೂ ಪ್ರತಿನಿತ್ಯ 35 ಲೀಟರ್ ನೀರು ಪೂರೈಕೆಗೆ ಕ್ರಮ ವಹಿಸುವುದು, ಶುದ್ಧ ನೀರಿನ ಘಟಕಗಳ ಸ್ಥಾಪನೆ ಮಾಡುವುದು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ 77 ಸುವ್ಯವಸ್ಥಿತ ಪ್ರಯೋಗಾಲಯಗಳ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ.

ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರಗಳು ಶೇ.25ರಷ್ಟು ಹಣವನ್ನು ಈ ಯೋಜನೆಗೆ ಭರಿಸುತ್ತವೆ. ರಾಜ್ಯ ಸರ್ಕಾರ ನೇರವಾಗಿಯಲ್ಲದಿದ್ದರೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಈ ಯೋಜನೆಗೆ ಹಣ ಬಳಸುತ್ತವೆ. ಕೇಂದ್ರ ಸರ್ಕಾರ ಶೇ 75ರಷ್ಟು ಹಣವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಜನರಿಗೆ ಕುಡಿಯುವ ನೀರು ಮತ್ತು ಬಳಸುವ ನೀರು ಪೂರೈಕೆ ಮಾಡುತ್ತದೆ.

ಜಲ ಜೀವನ್ ಮಿಷನ್ ಯೋಜನೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಕಾವೇರಿ ಮತ್ತು ಹೇಮಾವತಿ ನದಿ ನೀರು ಪೂರೈಕೆಯಾಗುವ ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಐದು ಜಿಲ್ಲೆಗಳ ಮನೆಮನೆಗೂ ನಲ್ಲಿ ಸಂಪರ್ಕಗಳನ್ನು ಕಲ್ಪಿಸಿ ನೀರು ಪೂರೈಕೆ ಮಾಡುವ ಬಗ್ಗೆ ಪ್ಲಾನ್ ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

ಮನೆಮನೆಗೂ ನೀರು ಪೂರೈಸುವ ಜೊತೆಗೆ ಒಂದು ಮನೆಗೆ ತಿಂಗಳಿಗೆ 30 ರಿಂದ 50 ರೂಪಾಯಿ ನೀರಿನ ಶುಲ್ಕ ನಿಗದಿ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಮನೆಗೂ ಗಂಗೆ ಹರಿದರೆ ಹಾಗೆಯೇ ಸರ್ಕಾರಕ್ಕೂ ಹಣದ ಹರಿವೂ ಹೆಚ್ಚಾಗಲಿದೆ. ಜನರು ಕೊರೊನ ಸಂದರ್ಭದಲ್ಲಿ ದುಡಿಮೆಯಿಲ್ಲದೆ, ಹಣವಿಲ್ಲದೆ ತತ್ತರಿಸಿಹೋಗಿರುವ ವೇಳೆಯಲ್ಲಿ ಪ್ರತಿಮನೆಗೂ ಪ್ರತಿ ತಿಂಗಳಿಗೆ 50 ರೂಪಾಯಿ ನೀರಿನ ಕರ ವಸೂಲಿಗೆ ಸರ್ಕಾರ ರಹಸ್ಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ನಲ್ಲಿಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ತುಮಕೂರು ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಲೀಕೇಜ್ ಆಗುವುದನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಮುಂದಿನ ದಿನಗಳಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

ತುಮಕೂರು ಜಿಲ್ಲೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಜಿಲ್ಲೆಗೆ ಬರಬೇಕಾದ 24 ಟಿಎಂಸಿ ನೀರು ಪೂರ ಬರುತ್ತಿಲ್ಲ. ತುಮಕೂರಿಗೆ ತನ್ನ ಪಾಲಿನ ಕುಡಿಯುವ ನೀರು ಹರಿಸಲು ಹಲವು ರೀತಿಯ ಅಡ್ಡಿಗಳಿವೆ. ತುಮಕೂರು ನಗರಕ್ಕೆ ಕುಡಿಯುವ ನೀರು ಸಾಲುತ್ತಿಲ್ಲ. ಹೇಮಾವತಿ ನದಿ ನೀರು ತಮಿಳುನಾಡಿಗೆ ಹರಿಸಿದರೆ  ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಹಾಗಾಗಿಯೇ ನಗರಕ್ಕೆ ಮೈದಾಳ ಕೆರೆಯಿಂದಲೂ ನೀರು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರ ಯಾರ ಬಳಿಯೂ ಇಲ್ಲ. ರಾಜ್ಯ ಸರ್ಕಾರ ಕುಡಿಯು ನೀರು ಒದಗಿಸುವ ನೆಪದಲ್ಲಿ ಬಡವರು, ಕೂಲಿಕಾರರಿಂದ ಹಣ ವಸೂಲಿ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರನ್ನು ಉಚಿತವಾಗಿ ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಹಾಗೆಂದು ಹಣ ವಸೂಲಿಗಾಗಿ ಯೋಜನೆ ರೂಪಿಸಿದರೆ ಅದು ಜನ ವಿರೋಧಿಯಾಗಲಿದೆ.

  • ಕೆ.ಈ ಸಿದ್ದಯ್ಯ, ತುಮಕೂರು.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಮುಟ್ಟದಿರಿ ಜೋಕೆ – ವೀರಶೈವ ಸ್ವಾಮೀಜಿಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...