Homeಕರ್ನಾಟಕಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

- Advertisement -
- Advertisement -

ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಗಸ್ಟ್ 2ರಂದು ಎಲ್ಲಾ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಮನೆ ಮನಗೆ ನೀರು ಹರಿಸುವುದು ಯೋಜನೆಯ ಉದ್ದೇಶವಾಗಿದೆ. ಮನೆಮನೆಗೂ ಗಂಗೆ, ವಸೂಲಿ ಹೆಂಗೆ ಎನ್ನುವ ಗೇಲಿಗೂ ಒಳಗಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಇಡೀ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ ಕುಡಿಯುವ/ಬಳಸುವ ನೀರು ಪೂರೈಕೆ ಉದ್ದೇಶ ಹೊಂದಿರುವ ಯೋಜನೆ ಇದಾಗಿದೆ. ಪ್ರತಿಯೊಬ್ಬರಿಗೂ ನೀರು ಕೊಡಬೇಕೆಂಬುದು ಒಳ್ಳೆಯದೇ ಆದರೂ ನೀರು ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಜಲ ಜೀವನ್ ಯೋಜನೆಯಲ್ಲಿ ಇದೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಧ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ನಮ್ಮ ಸೂತ್ರ ಎಂಬ ಯೋಜನೆಯಡಿ ಜಲ ಜೀವನ್ ಮಿಷನ್ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಪ್ರಕಾರ ಪ್ರತಿಯೊಬ್ಬರಿಗೂ ಪ್ರತಿನಿತ್ಯ 35 ಲೀಟರ್ ನೀರು ಪೂರೈಕೆಗೆ ಕ್ರಮ ವಹಿಸುವುದು, ಶುದ್ಧ ನೀರಿನ ಘಟಕಗಳ ಸ್ಥಾಪನೆ ಮಾಡುವುದು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ 77 ಸುವ್ಯವಸ್ಥಿತ ಪ್ರಯೋಗಾಲಯಗಳ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ.

ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರಗಳು ಶೇ.25ರಷ್ಟು ಹಣವನ್ನು ಈ ಯೋಜನೆಗೆ ಭರಿಸುತ್ತವೆ. ರಾಜ್ಯ ಸರ್ಕಾರ ನೇರವಾಗಿಯಲ್ಲದಿದ್ದರೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಈ ಯೋಜನೆಗೆ ಹಣ ಬಳಸುತ್ತವೆ. ಕೇಂದ್ರ ಸರ್ಕಾರ ಶೇ 75ರಷ್ಟು ಹಣವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಜನರಿಗೆ ಕುಡಿಯುವ ನೀರು ಮತ್ತು ಬಳಸುವ ನೀರು ಪೂರೈಕೆ ಮಾಡುತ್ತದೆ.

ಜಲ ಜೀವನ್ ಮಿಷನ್ ಯೋಜನೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಕಾವೇರಿ ಮತ್ತು ಹೇಮಾವತಿ ನದಿ ನೀರು ಪೂರೈಕೆಯಾಗುವ ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಐದು ಜಿಲ್ಲೆಗಳ ಮನೆಮನೆಗೂ ನಲ್ಲಿ ಸಂಪರ್ಕಗಳನ್ನು ಕಲ್ಪಿಸಿ ನೀರು ಪೂರೈಕೆ ಮಾಡುವ ಬಗ್ಗೆ ಪ್ಲಾನ್ ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

ಮನೆಮನೆಗೂ ನೀರು ಪೂರೈಸುವ ಜೊತೆಗೆ ಒಂದು ಮನೆಗೆ ತಿಂಗಳಿಗೆ 30 ರಿಂದ 50 ರೂಪಾಯಿ ನೀರಿನ ಶುಲ್ಕ ನಿಗದಿ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಮನೆಗೂ ಗಂಗೆ ಹರಿದರೆ ಹಾಗೆಯೇ ಸರ್ಕಾರಕ್ಕೂ ಹಣದ ಹರಿವೂ ಹೆಚ್ಚಾಗಲಿದೆ. ಜನರು ಕೊರೊನ ಸಂದರ್ಭದಲ್ಲಿ ದುಡಿಮೆಯಿಲ್ಲದೆ, ಹಣವಿಲ್ಲದೆ ತತ್ತರಿಸಿಹೋಗಿರುವ ವೇಳೆಯಲ್ಲಿ ಪ್ರತಿಮನೆಗೂ ಪ್ರತಿ ತಿಂಗಳಿಗೆ 50 ರೂಪಾಯಿ ನೀರಿನ ಕರ ವಸೂಲಿಗೆ ಸರ್ಕಾರ ರಹಸ್ಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ನಲ್ಲಿಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ತುಮಕೂರು ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಲೀಕೇಜ್ ಆಗುವುದನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಮುಂದಿನ ದಿನಗಳಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

ತುಮಕೂರು ಜಿಲ್ಲೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಜಿಲ್ಲೆಗೆ ಬರಬೇಕಾದ 24 ಟಿಎಂಸಿ ನೀರು ಪೂರ ಬರುತ್ತಿಲ್ಲ. ತುಮಕೂರಿಗೆ ತನ್ನ ಪಾಲಿನ ಕುಡಿಯುವ ನೀರು ಹರಿಸಲು ಹಲವು ರೀತಿಯ ಅಡ್ಡಿಗಳಿವೆ. ತುಮಕೂರು ನಗರಕ್ಕೆ ಕುಡಿಯುವ ನೀರು ಸಾಲುತ್ತಿಲ್ಲ. ಹೇಮಾವತಿ ನದಿ ನೀರು ತಮಿಳುನಾಡಿಗೆ ಹರಿಸಿದರೆ  ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಹಾಗಾಗಿಯೇ ನಗರಕ್ಕೆ ಮೈದಾಳ ಕೆರೆಯಿಂದಲೂ ನೀರು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರ ಯಾರ ಬಳಿಯೂ ಇಲ್ಲ. ರಾಜ್ಯ ಸರ್ಕಾರ ಕುಡಿಯು ನೀರು ಒದಗಿಸುವ ನೆಪದಲ್ಲಿ ಬಡವರು, ಕೂಲಿಕಾರರಿಂದ ಹಣ ವಸೂಲಿ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರನ್ನು ಉಚಿತವಾಗಿ ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಹಾಗೆಂದು ಹಣ ವಸೂಲಿಗಾಗಿ ಯೋಜನೆ ರೂಪಿಸಿದರೆ ಅದು ಜನ ವಿರೋಧಿಯಾಗಲಿದೆ.

  • ಕೆ.ಈ ಸಿದ್ದಯ್ಯ, ತುಮಕೂರು.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಮುಟ್ಟದಿರಿ ಜೋಕೆ – ವೀರಶೈವ ಸ್ವಾಮೀಜಿಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...