Homeಕರ್ನಾಟಕಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

- Advertisement -
- Advertisement -

ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಗಸ್ಟ್ 2ರಂದು ಎಲ್ಲಾ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಮನೆ ಮನಗೆ ನೀರು ಹರಿಸುವುದು ಯೋಜನೆಯ ಉದ್ದೇಶವಾಗಿದೆ. ಮನೆಮನೆಗೂ ಗಂಗೆ, ವಸೂಲಿ ಹೆಂಗೆ ಎನ್ನುವ ಗೇಲಿಗೂ ಒಳಗಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಇಡೀ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ ಕುಡಿಯುವ/ಬಳಸುವ ನೀರು ಪೂರೈಕೆ ಉದ್ದೇಶ ಹೊಂದಿರುವ ಯೋಜನೆ ಇದಾಗಿದೆ. ಪ್ರತಿಯೊಬ್ಬರಿಗೂ ನೀರು ಕೊಡಬೇಕೆಂಬುದು ಒಳ್ಳೆಯದೇ ಆದರೂ ನೀರು ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಜಲ ಜೀವನ್ ಯೋಜನೆಯಲ್ಲಿ ಇದೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಧ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ನಮ್ಮ ಸೂತ್ರ ಎಂಬ ಯೋಜನೆಯಡಿ ಜಲ ಜೀವನ್ ಮಿಷನ್ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಪ್ರಕಾರ ಪ್ರತಿಯೊಬ್ಬರಿಗೂ ಪ್ರತಿನಿತ್ಯ 35 ಲೀಟರ್ ನೀರು ಪೂರೈಕೆಗೆ ಕ್ರಮ ವಹಿಸುವುದು, ಶುದ್ಧ ನೀರಿನ ಘಟಕಗಳ ಸ್ಥಾಪನೆ ಮಾಡುವುದು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ 77 ಸುವ್ಯವಸ್ಥಿತ ಪ್ರಯೋಗಾಲಯಗಳ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ.

ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರಗಳು ಶೇ.25ರಷ್ಟು ಹಣವನ್ನು ಈ ಯೋಜನೆಗೆ ಭರಿಸುತ್ತವೆ. ರಾಜ್ಯ ಸರ್ಕಾರ ನೇರವಾಗಿಯಲ್ಲದಿದ್ದರೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಈ ಯೋಜನೆಗೆ ಹಣ ಬಳಸುತ್ತವೆ. ಕೇಂದ್ರ ಸರ್ಕಾರ ಶೇ 75ರಷ್ಟು ಹಣವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಜನರಿಗೆ ಕುಡಿಯುವ ನೀರು ಮತ್ತು ಬಳಸುವ ನೀರು ಪೂರೈಕೆ ಮಾಡುತ್ತದೆ.

ಜಲ ಜೀವನ್ ಮಿಷನ್ ಯೋಜನೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಕಾವೇರಿ ಮತ್ತು ಹೇಮಾವತಿ ನದಿ ನೀರು ಪೂರೈಕೆಯಾಗುವ ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಐದು ಜಿಲ್ಲೆಗಳ ಮನೆಮನೆಗೂ ನಲ್ಲಿ ಸಂಪರ್ಕಗಳನ್ನು ಕಲ್ಪಿಸಿ ನೀರು ಪೂರೈಕೆ ಮಾಡುವ ಬಗ್ಗೆ ಪ್ಲಾನ್ ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

ಮನೆಮನೆಗೂ ನೀರು ಪೂರೈಸುವ ಜೊತೆಗೆ ಒಂದು ಮನೆಗೆ ತಿಂಗಳಿಗೆ 30 ರಿಂದ 50 ರೂಪಾಯಿ ನೀರಿನ ಶುಲ್ಕ ನಿಗದಿ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಮನೆಗೂ ಗಂಗೆ ಹರಿದರೆ ಹಾಗೆಯೇ ಸರ್ಕಾರಕ್ಕೂ ಹಣದ ಹರಿವೂ ಹೆಚ್ಚಾಗಲಿದೆ. ಜನರು ಕೊರೊನ ಸಂದರ್ಭದಲ್ಲಿ ದುಡಿಮೆಯಿಲ್ಲದೆ, ಹಣವಿಲ್ಲದೆ ತತ್ತರಿಸಿಹೋಗಿರುವ ವೇಳೆಯಲ್ಲಿ ಪ್ರತಿಮನೆಗೂ ಪ್ರತಿ ತಿಂಗಳಿಗೆ 50 ರೂಪಾಯಿ ನೀರಿನ ಕರ ವಸೂಲಿಗೆ ಸರ್ಕಾರ ರಹಸ್ಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ನಲ್ಲಿಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ತುಮಕೂರು ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಲೀಕೇಜ್ ಆಗುವುದನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಮುಂದಿನ ದಿನಗಳಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

ತುಮಕೂರು ಜಿಲ್ಲೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಜಿಲ್ಲೆಗೆ ಬರಬೇಕಾದ 24 ಟಿಎಂಸಿ ನೀರು ಪೂರ ಬರುತ್ತಿಲ್ಲ. ತುಮಕೂರಿಗೆ ತನ್ನ ಪಾಲಿನ ಕುಡಿಯುವ ನೀರು ಹರಿಸಲು ಹಲವು ರೀತಿಯ ಅಡ್ಡಿಗಳಿವೆ. ತುಮಕೂರು ನಗರಕ್ಕೆ ಕುಡಿಯುವ ನೀರು ಸಾಲುತ್ತಿಲ್ಲ. ಹೇಮಾವತಿ ನದಿ ನೀರು ತಮಿಳುನಾಡಿಗೆ ಹರಿಸಿದರೆ  ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಹಾಗಾಗಿಯೇ ನಗರಕ್ಕೆ ಮೈದಾಳ ಕೆರೆಯಿಂದಲೂ ನೀರು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರ ಯಾರ ಬಳಿಯೂ ಇಲ್ಲ. ರಾಜ್ಯ ಸರ್ಕಾರ ಕುಡಿಯು ನೀರು ಒದಗಿಸುವ ನೆಪದಲ್ಲಿ ಬಡವರು, ಕೂಲಿಕಾರರಿಂದ ಹಣ ವಸೂಲಿ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರನ್ನು ಉಚಿತವಾಗಿ ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಹಾಗೆಂದು ಹಣ ವಸೂಲಿಗಾಗಿ ಯೋಜನೆ ರೂಪಿಸಿದರೆ ಅದು ಜನ ವಿರೋಧಿಯಾಗಲಿದೆ.

  • ಕೆ.ಈ ಸಿದ್ದಯ್ಯ, ತುಮಕೂರು.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಮುಟ್ಟದಿರಿ ಜೋಕೆ – ವೀರಶೈವ ಸ್ವಾಮೀಜಿಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...