Homeಕರ್ನಾಟಕಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

- Advertisement -
- Advertisement -

ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಗಸ್ಟ್ 2ರಂದು ಎಲ್ಲಾ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಮನೆ ಮನಗೆ ನೀರು ಹರಿಸುವುದು ಯೋಜನೆಯ ಉದ್ದೇಶವಾಗಿದೆ. ಮನೆಮನೆಗೂ ಗಂಗೆ, ವಸೂಲಿ ಹೆಂಗೆ ಎನ್ನುವ ಗೇಲಿಗೂ ಒಳಗಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಇಡೀ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ ಕುಡಿಯುವ/ಬಳಸುವ ನೀರು ಪೂರೈಕೆ ಉದ್ದೇಶ ಹೊಂದಿರುವ ಯೋಜನೆ ಇದಾಗಿದೆ. ಪ್ರತಿಯೊಬ್ಬರಿಗೂ ನೀರು ಕೊಡಬೇಕೆಂಬುದು ಒಳ್ಳೆಯದೇ ಆದರೂ ನೀರು ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಜಲ ಜೀವನ್ ಯೋಜನೆಯಲ್ಲಿ ಇದೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಧ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ನಮ್ಮ ಸೂತ್ರ ಎಂಬ ಯೋಜನೆಯಡಿ ಜಲ ಜೀವನ್ ಮಿಷನ್ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಪ್ರಕಾರ ಪ್ರತಿಯೊಬ್ಬರಿಗೂ ಪ್ರತಿನಿತ್ಯ 35 ಲೀಟರ್ ನೀರು ಪೂರೈಕೆಗೆ ಕ್ರಮ ವಹಿಸುವುದು, ಶುದ್ಧ ನೀರಿನ ಘಟಕಗಳ ಸ್ಥಾಪನೆ ಮಾಡುವುದು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ 77 ಸುವ್ಯವಸ್ಥಿತ ಪ್ರಯೋಗಾಲಯಗಳ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ.

ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರಗಳು ಶೇ.25ರಷ್ಟು ಹಣವನ್ನು ಈ ಯೋಜನೆಗೆ ಭರಿಸುತ್ತವೆ. ರಾಜ್ಯ ಸರ್ಕಾರ ನೇರವಾಗಿಯಲ್ಲದಿದ್ದರೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಈ ಯೋಜನೆಗೆ ಹಣ ಬಳಸುತ್ತವೆ. ಕೇಂದ್ರ ಸರ್ಕಾರ ಶೇ 75ರಷ್ಟು ಹಣವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಜನರಿಗೆ ಕುಡಿಯುವ ನೀರು ಮತ್ತು ಬಳಸುವ ನೀರು ಪೂರೈಕೆ ಮಾಡುತ್ತದೆ.

ಜಲ ಜೀವನ್ ಮಿಷನ್ ಯೋಜನೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಕಾವೇರಿ ಮತ್ತು ಹೇಮಾವತಿ ನದಿ ನೀರು ಪೂರೈಕೆಯಾಗುವ ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಐದು ಜಿಲ್ಲೆಗಳ ಮನೆಮನೆಗೂ ನಲ್ಲಿ ಸಂಪರ್ಕಗಳನ್ನು ಕಲ್ಪಿಸಿ ನೀರು ಪೂರೈಕೆ ಮಾಡುವ ಬಗ್ಗೆ ಪ್ಲಾನ್ ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

ಮನೆಮನೆಗೂ ನೀರು ಪೂರೈಸುವ ಜೊತೆಗೆ ಒಂದು ಮನೆಗೆ ತಿಂಗಳಿಗೆ 30 ರಿಂದ 50 ರೂಪಾಯಿ ನೀರಿನ ಶುಲ್ಕ ನಿಗದಿ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಮನೆಗೂ ಗಂಗೆ ಹರಿದರೆ ಹಾಗೆಯೇ ಸರ್ಕಾರಕ್ಕೂ ಹಣದ ಹರಿವೂ ಹೆಚ್ಚಾಗಲಿದೆ. ಜನರು ಕೊರೊನ ಸಂದರ್ಭದಲ್ಲಿ ದುಡಿಮೆಯಿಲ್ಲದೆ, ಹಣವಿಲ್ಲದೆ ತತ್ತರಿಸಿಹೋಗಿರುವ ವೇಳೆಯಲ್ಲಿ ಪ್ರತಿಮನೆಗೂ ಪ್ರತಿ ತಿಂಗಳಿಗೆ 50 ರೂಪಾಯಿ ನೀರಿನ ಕರ ವಸೂಲಿಗೆ ಸರ್ಕಾರ ರಹಸ್ಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ನಲ್ಲಿಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ತುಮಕೂರು ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಲೀಕೇಜ್ ಆಗುವುದನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಮುಂದಿನ ದಿನಗಳಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

ತುಮಕೂರು ಜಿಲ್ಲೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಜಿಲ್ಲೆಗೆ ಬರಬೇಕಾದ 24 ಟಿಎಂಸಿ ನೀರು ಪೂರ ಬರುತ್ತಿಲ್ಲ. ತುಮಕೂರಿಗೆ ತನ್ನ ಪಾಲಿನ ಕುಡಿಯುವ ನೀರು ಹರಿಸಲು ಹಲವು ರೀತಿಯ ಅಡ್ಡಿಗಳಿವೆ. ತುಮಕೂರು ನಗರಕ್ಕೆ ಕುಡಿಯುವ ನೀರು ಸಾಲುತ್ತಿಲ್ಲ. ಹೇಮಾವತಿ ನದಿ ನೀರು ತಮಿಳುನಾಡಿಗೆ ಹರಿಸಿದರೆ  ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಹಾಗಾಗಿಯೇ ನಗರಕ್ಕೆ ಮೈದಾಳ ಕೆರೆಯಿಂದಲೂ ನೀರು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರ ಯಾರ ಬಳಿಯೂ ಇಲ್ಲ. ರಾಜ್ಯ ಸರ್ಕಾರ ಕುಡಿಯು ನೀರು ಒದಗಿಸುವ ನೆಪದಲ್ಲಿ ಬಡವರು, ಕೂಲಿಕಾರರಿಂದ ಹಣ ವಸೂಲಿ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರನ್ನು ಉಚಿತವಾಗಿ ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಹಾಗೆಂದು ಹಣ ವಸೂಲಿಗಾಗಿ ಯೋಜನೆ ರೂಪಿಸಿದರೆ ಅದು ಜನ ವಿರೋಧಿಯಾಗಲಿದೆ.

  • ಕೆ.ಈ ಸಿದ್ದಯ್ಯ, ತುಮಕೂರು.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಮುಟ್ಟದಿರಿ ಜೋಕೆ – ವೀರಶೈವ ಸ್ವಾಮೀಜಿಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...